Latest Updates
-
ಲಿವ್-ಇನ್ ಸಂಬಂಧದಲ್ಲಿರುವ ಯುವ ಜೋಡಿಗಳಿಗೆ ಶಾಕ್: ಹೈಕೋರ್ಟ್ನಿಂದ ಹೊಸ ಆದೇಶ, ಇನ್ನು ರಕ್ಷಣೆ ಸಿಗಲ್ಲ! -
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಗಣರಾಜ್ಯೋತ್ಸವ 2021: ದೇಶದ ನಾಯಕರ ಸ್ಪೂರ್ತಿದಾಯಕ ನುಡಿಮುತ್ತುಗಳು
ಜನವರಿ ೨೬, ಗಣರಾಜ್ಯ ದಿನ. ದೇಶದೆಲ್ಲೆಡೆ ಬಹಳ ಸಂಭ್ರಮ ಹಾಗೂ ಹೆಮ್ಮೆಯಿಂದ ಆಚರಣೆ ಮಾಡಲಾಗುತ್ತದೆ. ಆದರೆ ನಮ್ಮಲ್ಲಿ ಹೆಚ್ಚಿನವರಿಗೆ ಗಣರಾಜ್ಯೋತ್ಸವ ಯಾವ ಕಾರಣಕ್ಕೆ ಆಚರಿಸುತ್ತಾರೆ ಎಂದು ಗೊತ್ತಿಲ್ಲ. ಅಂಥವರು ಒಮ್ಮೆ ಇಲ್ಲಿ ಕಣ್ಣಾಯಿಸಿ.
ಭಾರತದ ಸಂವಿಧಾನವನ್ನು 1949ರಲ್ಲಿ ರಚಿಸಲಾಗಿದ್ದರೂ ಅದನ್ನು ಜನವರಿ 26, 1950ರಂದು ಜಾರಿಗೊಳಿಸಲಾಯಿತು. ಆದ್ದರಿಂದ ಈ ದಿನವನ್ನು ಗಣರಾಜ್ಯೋತ್ಸವದ ದಿನವನ್ನಾಗಿ ಆಚರಿಸಲಾಗುತ್ತದೆ.
ನಾವೆಲ್ಲರೂ ಭಾರತೀಯರು. ಒಂದೇ ತಾಯಿಯ ಮಕ್ಕಳು. ನಮ್ಮಲ್ಲಿ ಭೇದವಿಲ್ಲದೇ ಈ ದಿನದಂದು ಎಲ್ಲರೂ ಒಟ್ಟಾಗಿ ಗಣರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಹಾಗಾಗಿ ನಾವಿಲ್ಲಿ ಈ ದಿನದ ವಿಶೇಷತೆಯನ್ನು ಸಾರಿದ ದೇಶದ ನಾಯಕರ ನುಡಿಮುತ್ತುಗಳನ್ನು ಹೇಳಿದ್ದೇವೆ.
ದೇಶದ ನಾಯಕರ ಸ್ಪೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.

1. ''ನಾವು ಭಾರತೀಯರು, ಮೊದಲನೆಯದಾಗಿ ಮತ್ತು ಕೊನೆಯದಾಗಿ.'' - ಬಿ.ಆರ್.ಅಂಬೇಡ್ಕರ್
2. ''ಪ್ರಜಾಪ್ರಭುತ್ವ ಎಂಬುದು ನೀವು ಜಗತ್ತಿನಲ್ಲಿ ನೋಡಲು ಬಯಸುವ ಬದಲಾವಣೆಯಾಗಬೇಕು'' - ಮಹಾತ್ಮ ಗಾಂಧಿ
3. ''ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು, ಅದನ್ನು ನಾನು ಪಡೆದೇ ತೀರುತ್ತೇನೆ.''- ಬಾಲಗಂಗಾಧರ್ ತಿಲಕ್
4. ''ನಾನು ರಾಷ್ಟ್ರದ ಸೇವೆಯಲ್ಲಿ ಮರಣಹೊಂದಿದ್ದರೂ ಸಹ, ನಾನು ಅದರ ಬಗ್ಗೆ ಹೆಮ್ಮೆಪಡುತ್ತೇನೆ. ನನ್ನ ರಕ್ತದ ಪ್ರತಿ ಹನಿ ಈ ರಾಷ್ಟ್ರದ ಬೆಳವಣಿಗೆಗೆ ಮತ್ತು ಅದನ್ನು ಬಲವಾದ ಮತ್ತು ಕ್ರಿಯಾತ್ಮಕವಾಗಿಸಲು ಸಹಾಯ ಮಾಡುತ್ತದೆ.''- ಇಂದಿರಾ ಗಾಂಧಿ
5. "ನೀವು ಸಾಮಾಜಿಕ ಸ್ವಾತಂತ್ರ್ಯವನ್ನು ಸಾಧಿಸದಿದ್ದಾಗ, ಕಾನೂನಿನಿಂದ ಯಾವುದೇ ಸ್ವಾತಂತ್ರ್ಯವನ್ನು ಒದಗಿಸಿದರೂ ನಿಮಗೆ ಯಾವುದೇ ಪ್ರಯೋಜನವಿಲ್ಲ." -ಬಿ.ಆರ್ ಅಂಬೇಡ್ಕರ್
6.''ಜನರ ಇಚ್ಛಾಶಕ್ತಿಯ ಅಭಿವ್ಯಕ್ತಿಯಾಗಿರುವವರೆಗೂ ಮಾತ್ರ ಕಾನೂನಿನ ಪಾವಿತ್ರ್ಯವನ್ನು ಕಾಪಾಡಿಕೊಳ್ಳಬಹುದು.''- ಭಗತ್ ಸಿಂಗ್
7. "ಒಂದು ರಾಷ್ಟ್ರದ ಸಂಸ್ಕೃತಿ ಜನರ ಹೃದಯ ಮತ್ತು ಆತ್ಮದಲ್ಲಿ ನೆಲೆಸಿದೆ." - ಮಹಾತ್ಮ ಗಾಂಧಿ
8."ಕ್ರಾಂತಿಯು ಮನುಕುಲದ ಅಳಿಸಲಾಗದ ಹಕ್ಕು. ಸ್ವಾತಂತ್ರ್ಯವು ಎಲ್ಲರ ಜನ್ಮಸಿದ್ಧ ಹಕ್ಕು." - ಭಗತ್ ಸಿಂಗ್
9. "ನಿಮ್ಮ ರಕ್ತವು ಕುದಿಯದಿದ್ದರೆ, ಅದು ನಿಮ್ಮ ರಕ್ತನಾಳಗಳಲ್ಲಿ ಹರಿಯುವ ನೀರು. ಇದು ಮಾತೃಭೂಮಿಗೆ ಸೇವೆ ಸಲ್ಲಿಸದೇ ಇರುವ ಯುವಜನರಲ್ಲಿ ಹರಿಯುತ್ತದೆ.'' - ಚಂದ್ರಶೇಖರ್ ಆಜಾದ್
10.'' ಸಂವಿಧಾನದ ದುರ್ಬಳಕೆಯಾಗುತ್ತಿದೆ ಎಂದು ಗೊತ್ತಾದರೆ ಅದನ್ನು ಸುಡುವ ಮೊದಲಿಗ ನಾನಾಗಿರುತ್ತೇನೆ!''- ಡಾ. ಬಿಆರ್. ಅಂಬೇಡ್ಕರ್



Click it and Unblock the Notifications








