Latest Updates
-
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ
ರಕ್ಷಾ ಬಂಧನ ಆಚರಣೆಯ ಪ್ರಾಮುಖ್ಯತೆ ಏಕೆ ವಿಶಿಷ್ಟವಾಗಿದೆ?
ಒಡಹುಟ್ಟಿದವರ ನಡುವೆ ಆಚರಿಸಲ್ಪಡುವ ಈ ರಕ್ಷಾ ಬಂಧನ ಹಬ್ಬ ಕೇವಲ ಒಡಹುಟ್ಟಿದವರಿಗೆ ಮಾತ್ರವಲ್ಲದೆ ಎಲ್ಲಾ ಬಗೆಯ ಸಹೋದರ -ಸಹೋದರಿ ಸಂಬಂಧಗಳನ್ನು ಬಾಂಧವ್ಯವನ್ನು ಗಟ್ಟಿಗೊಳಿಸುವಂತಹ ದಿನ. ಸಹೋದರನಿಗೆ ರಾಖಿಯನ್ನು ಕಟ್ಟಿ ಅವರಿಂದ ಉಡುಗೊರೆಯನ್ನು ಪ್ರತಿಯಾಗಿ ಪಡೆಯುವ ಈ ದಿನಕ್ಕಾಗಿ ವರ್ಷಪೂರ್ತಿ ಸಹೋದರಿಯರು ಎದುರು ನೋಡುತ್ತಿರುತ್ತಾರೆ. ರಕ್ಷಾ ಬಂಧನದ ಸಂಸ್ಕೃತದ ಅರ್ಥ "ರಕ್ಷಣೆಯ ಗಂಟು" ಎಂಬುದು.
ಶಾಸ್ತ್ರೋಕ್ತವಾಗಿ ಸಹೋದರರು ಮತ್ತು ಅವರ ಸಹೋದರಿಯರ ನಡುವಿನ ಪ್ರೀತಿಯ ಬಂಧವನ್ನು ಆಚರಿಸುವ ಒಂದು ಪುರಾತನ ಹಿಂದೂ ಹಬ್ಬವಾಗಿದೆ. ಸಹೋದರಿ ತನ್ನ ಪ್ರೀತಿ ಮತ್ತು ತನ್ನ ಸಹೋದರನ ಒಳಿತನ್ನು ಬಯಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ರಾಖಿ ಸಮಾರಂಭವನ್ನು ಆಚರಿಸುತ್ತಾಳೆ. ಇದಕ್ಕೆ ಪ್ರತಿಯಾಗಿ, ಸಹೋದರನು ತನ್ನ ಸಹೋದರಿಯನ್ನು ರಕ್ಷಿಸುವ ಮತ್ತು ಎಲ್ಲಾ ಸಂದರ್ಭಗಳಲ್ಲಿ ಆಕೆಯ ಆರೈಕೆಯನ್ನು ಮಾಡುವ ಶಾಸ್ತ್ರೋಕ್ತ ಶಪಥ ಮಾಡುತ್ತಾನೆ. ಕೌಟುಂಬಿಕವೆಂದು ದೃಢೀಕರಿಸಲಾಗುವ ಹಲವಾರು ಸಮಾರಂಭಗಳಲ್ಲಿ ಇದು ಕೂಡ ಒಂದಾಗಿದೆ.
ರಕ್ಷಾ ಬಂಧನ ಹಬ್ಬದ ಕೆಲವು ದಿನಗಳ ಮೊದಲು, ಮಹಿಳೆಯರು ರಾಖಿಗಳನ್ನು ಖರೀದಿಸಲು ಆರಂಭಿಸುತ್ತಾರೆ. ಕೆಲವು ಸಹೋದರಿಯರು ತಾವೇ ಸ್ವತಃ ರಾಖಿಯನ್ನು ತಯಾರಿಸಿದರೆ ಇತರರು ಮಾರುಕಟ್ಟೆಯಿಂದ ಖರೀದಿಸುತ್ತಾರೆ. ಅದೇನೇ ಇದ್ದರೂ ರಾಖಿಯನ್ನು ಸಹೋದರರಿಗೆ ಕಟ್ಟುವುದೇ ಈ ದಿನದ ವಿಶೇಷ. ರಾಖಿ ಕಟ್ಟುವ ಸಂದರ್ಭದಲ್ಲಿ ಅನುಸರಿಸಬೇಕಾದ ಕೆಲವು ಇತರ ಆಚರಣೆಗಳೂ ಇವೆ. ಅವುಗಳು ಯಾವುದೆಂದು ನೋಡೋಣ.

ಮುಂಜಾನೆಯ ಜಳಕ
ಸಹೋದರ-ಸಹೋದರಿಯರು ರಕ್ಷಾ ಬಂಧನದ ದಿನದಂದು ಮುಂಜಾನೆಯೇ ಎದ್ದು ಸ್ನಾನ ಮಾಡಬೇಕು.

ಉಪವಾಸ
ಸಹೋದರನಿಗೆ ರಾಖಿಯನ್ನು ಕಟ್ಟುವವರೆಗೂ ಸಹೋದರಿ ಆಹಾರವನ್ನು ಸೇವಿಸದೇ ಇರುವುದು ವಾಡಿಕೆ.

ರಾಖಿ ತಾಲಿ
ಈ ತಾಲಿ ಎಲ್ಲಾ ಅಗತ್ಯ ವಸ್ತುಗಳಿಂದ ಅಲಂಕೃತವಾಗಿರಬೇಕು. ಈ ತಾಲಿಯಲ್ಲಿ ರಾಖಿ, ದೀಪ, ಸಿಹಿ ತಿನಿಸು, ತಿಲಕ/ಕುಂಕುಮ ಮತ್ತು ಅಕ್ಕಿ/ಅಕ್ಷತೆಯನ್ನು ಹೊಂದಿರಬೇಕು.

ರಾಖಿ ಕಟ್ಟುವುದು
ಮೊದಲಿಗೆ ಸಹೋದರಿ, ಸಹೋದರನ ಹಣೆಗೆ ತಿಲಕವನ್ನು ಇಟ್ಟು ನೆತ್ತಿಯ ಮೇಲೆ ಅಕ್ಕಿ/ಅಕ್ಷತೆಯನ್ನು ಹಾಕಬೇಕು. ನಂತರ ಆರತಿ ಬೆಳಗಬೇಕು. ನಂತರ ಸಹೋದರನಿಗೆ ರಾಖಿಯನ್ನು ಕಟ್ಟಿ ಸಿಹಿಯನ್ನು ತಿನ್ನಿಸಬೇಕು.

ಉಡುಗೊರೆ
ಸಹೋದರನು ರಾಖಿ ಕಟ್ಟಿಸಿಕೊಂಡ ಮೇಲೆ ಸಹೋದರಿಗೆ ಉಡುಗೊರೆಯನ್ನು ನೀಡಬೇಕು. ಜೊತೆಗೆ ಸಹೋದರಿಯನ್ನು ಜೀವನದ ಯಾವುದೇ ಸಮಯದಲ್ಲಿ ಕಾಪಾಡುತ್ತೇನೆ ಎಂದು ವಚನ ನೀಡಬೇಕು.

ಭೂರಿ ಭೋಜನ
ಈ ಎಲ್ಲಾ ವಿಧಿ ವಿಧಾನಗಳ ನಂತರ ಸಹೋದರಿ ಆಹಾರವನ್ನು ಸೇವಿಸಬಹುದು. ನಂತರ ಸಹೋದರಿ ತನ್ನ ಸಹೋದರನಿಗೆ ಇಷ್ಟವಾದ ಅಡುಗೆಯನ್ನು ಮಾಡಿ ರಸ ಭೋಜನವನ್ನು ಉಣಬಡಿಸಬೇಕು.



Click it and Unblock the Notifications











