Just In
- 1 hr ago ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- 3 hrs ago ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- 11 hrs ago ಮೀನ ರಾಶಿಗೆ ಮಂಗಳ ಸಂಚಾರ: ಈ 5 ರಾಶಿಯವರು ವೃತ್ತಿ ಬದುಕಿನಲ್ಲಿ ಜಾಗ್ರತೆ
- 11 hrs ago ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
Don't Miss
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- News Siddaramaiah campaign: ಬಾಗೇಪಲ್ಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರಚಾರ ಸಭೆ, ಡಿಕೆಶಿ ಭಾಗಿ
- Finance Real Estate: ಬೆಂಗಳೂರಿನ ಕೋರಮಂಗಲದಲ್ಲಿ ದುಬಾರಿ ಬೆಲೆಗೆ ಆಸ್ತಿ ಖರೀದಿಸಿದ ಅಜಿತ್ ಐಸಾಕ್
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Movies "ದಪ್ಪ ಇದ್ದೀಯಾ ಅಂದ್ರೆ ದಿನ ಯಾರೊಂದಿಗೋ ಇದ್ದೀಯಾ ಅನ್ನೂ ಕೆಟ್ಟ ಮನ:ಸ್ಥಿತಿಯಿದೆ"; ನಟಿ ನೀತು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಕ್ಷಾ ಬಂಧನ ಆಚರಣೆಯ ಪ್ರಾಮುಖ್ಯತೆ ಏಕೆ ವಿಶಿಷ್ಟವಾಗಿದೆ?
ಒಡಹುಟ್ಟಿದವರ ನಡುವೆ ಆಚರಿಸಲ್ಪಡುವ ಈ ರಕ್ಷಾ ಬಂಧನ ಹಬ್ಬ ಕೇವಲ ಒಡಹುಟ್ಟಿದವರಿಗೆ ಮಾತ್ರವಲ್ಲದೆ ಎಲ್ಲಾ ಬಗೆಯ ಸಹೋದರ -ಸಹೋದರಿ ಸಂಬಂಧಗಳನ್ನು ಬಾಂಧವ್ಯವನ್ನು ಗಟ್ಟಿಗೊಳಿಸುವಂತಹ ದಿನ. ಸಹೋದರನಿಗೆ ರಾಖಿಯನ್ನು ಕಟ್ಟಿ ಅವರಿಂದ ಉಡುಗೊರೆಯನ್ನು ಪ್ರತಿಯಾಗಿ ಪಡೆಯುವ ಈ ದಿನಕ್ಕಾಗಿ ವರ್ಷಪೂರ್ತಿ ಸಹೋದರಿಯರು ಎದುರು ನೋಡುತ್ತಿರುತ್ತಾರೆ. ರಕ್ಷಾ ಬಂಧನದ ಸಂಸ್ಕೃತದ ಅರ್ಥ "ರಕ್ಷಣೆಯ ಗಂಟು" ಎಂಬುದು.
ಶಾಸ್ತ್ರೋಕ್ತವಾಗಿ ಸಹೋದರರು ಮತ್ತು ಅವರ ಸಹೋದರಿಯರ ನಡುವಿನ ಪ್ರೀತಿಯ ಬಂಧವನ್ನು ಆಚರಿಸುವ ಒಂದು ಪುರಾತನ ಹಿಂದೂ ಹಬ್ಬವಾಗಿದೆ. ಸಹೋದರಿ ತನ್ನ ಪ್ರೀತಿ ಮತ್ತು ತನ್ನ ಸಹೋದರನ ಒಳಿತನ್ನು ಬಯಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ರಾಖಿ ಸಮಾರಂಭವನ್ನು ಆಚರಿಸುತ್ತಾಳೆ. ಇದಕ್ಕೆ ಪ್ರತಿಯಾಗಿ, ಸಹೋದರನು ತನ್ನ ಸಹೋದರಿಯನ್ನು ರಕ್ಷಿಸುವ ಮತ್ತು ಎಲ್ಲಾ ಸಂದರ್ಭಗಳಲ್ಲಿ ಆಕೆಯ ಆರೈಕೆಯನ್ನು ಮಾಡುವ ಶಾಸ್ತ್ರೋಕ್ತ ಶಪಥ ಮಾಡುತ್ತಾನೆ. ಕೌಟುಂಬಿಕವೆಂದು ದೃಢೀಕರಿಸಲಾಗುವ ಹಲವಾರು ಸಮಾರಂಭಗಳಲ್ಲಿ ಇದು ಕೂಡ ಒಂದಾಗಿದೆ.
ರಕ್ಷಾ ಬಂಧನ ಹಬ್ಬದ ಕೆಲವು ದಿನಗಳ ಮೊದಲು, ಮಹಿಳೆಯರು ರಾಖಿಗಳನ್ನು ಖರೀದಿಸಲು ಆರಂಭಿಸುತ್ತಾರೆ. ಕೆಲವು ಸಹೋದರಿಯರು ತಾವೇ ಸ್ವತಃ ರಾಖಿಯನ್ನು ತಯಾರಿಸಿದರೆ ಇತರರು ಮಾರುಕಟ್ಟೆಯಿಂದ ಖರೀದಿಸುತ್ತಾರೆ. ಅದೇನೇ ಇದ್ದರೂ ರಾಖಿಯನ್ನು ಸಹೋದರರಿಗೆ ಕಟ್ಟುವುದೇ ಈ ದಿನದ ವಿಶೇಷ. ರಾಖಿ ಕಟ್ಟುವ ಸಂದರ್ಭದಲ್ಲಿ ಅನುಸರಿಸಬೇಕಾದ ಕೆಲವು ಇತರ ಆಚರಣೆಗಳೂ ಇವೆ. ಅವುಗಳು ಯಾವುದೆಂದು ನೋಡೋಣ.
ಮುಂಜಾನೆಯ ಜಳಕ
ಸಹೋದರ-ಸಹೋದರಿಯರು ರಕ್ಷಾ ಬಂಧನದ ದಿನದಂದು ಮುಂಜಾನೆಯೇ ಎದ್ದು ಸ್ನಾನ ಮಾಡಬೇಕು.
ಉಪವಾಸ
ಸಹೋದರನಿಗೆ ರಾಖಿಯನ್ನು ಕಟ್ಟುವವರೆಗೂ ಸಹೋದರಿ ಆಹಾರವನ್ನು ಸೇವಿಸದೇ ಇರುವುದು ವಾಡಿಕೆ.
ರಾಖಿ ತಾಲಿ
ಈ ತಾಲಿ ಎಲ್ಲಾ ಅಗತ್ಯ ವಸ್ತುಗಳಿಂದ ಅಲಂಕೃತವಾಗಿರಬೇಕು. ಈ ತಾಲಿಯಲ್ಲಿ ರಾಖಿ, ದೀಪ, ಸಿಹಿ ತಿನಿಸು, ತಿಲಕ/ಕುಂಕುಮ ಮತ್ತು ಅಕ್ಕಿ/ಅಕ್ಷತೆಯನ್ನು ಹೊಂದಿರಬೇಕು.
ರಾಖಿ ಕಟ್ಟುವುದು
ಮೊದಲಿಗೆ ಸಹೋದರಿ, ಸಹೋದರನ ಹಣೆಗೆ ತಿಲಕವನ್ನು ಇಟ್ಟು ನೆತ್ತಿಯ ಮೇಲೆ ಅಕ್ಕಿ/ಅಕ್ಷತೆಯನ್ನು ಹಾಕಬೇಕು. ನಂತರ ಆರತಿ ಬೆಳಗಬೇಕು. ನಂತರ ಸಹೋದರನಿಗೆ ರಾಖಿಯನ್ನು ಕಟ್ಟಿ ಸಿಹಿಯನ್ನು ತಿನ್ನಿಸಬೇಕು.
ಉಡುಗೊರೆ
ಸಹೋದರನು ರಾಖಿ ಕಟ್ಟಿಸಿಕೊಂಡ ಮೇಲೆ ಸಹೋದರಿಗೆ ಉಡುಗೊರೆಯನ್ನು ನೀಡಬೇಕು. ಜೊತೆಗೆ ಸಹೋದರಿಯನ್ನು ಜೀವನದ ಯಾವುದೇ ಸಮಯದಲ್ಲಿ ಕಾಪಾಡುತ್ತೇನೆ ಎಂದು ವಚನ ನೀಡಬೇಕು.
ಭೂರಿ ಭೋಜನ
ಈ ಎಲ್ಲಾ ವಿಧಿ ವಿಧಾನಗಳ ನಂತರ ಸಹೋದರಿ ಆಹಾರವನ್ನು ಸೇವಿಸಬಹುದು. ನಂತರ ಸಹೋದರಿ ತನ್ನ ಸಹೋದರನಿಗೆ ಇಷ್ಟವಾದ ಅಡುಗೆಯನ್ನು ಮಾಡಿ ರಸ ಭೋಜನವನ್ನು ಉಣಬಡಿಸಬೇಕು.