Latest Updates
-
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ!
ಅಶ್ವತ್ಥ ಮರವನ್ನು ಪೂಜಿಸಿದರೆ ಕಾಲಸರ್ಪ ದೋಷ ನಿವಾರಣೆಯಾಗುವುದು
ಹಿಂದೂ ಧರ್ಮಿಯರಿಗೆ ಅಶ್ವತ್ಥ ಮರವೆಂದರೆ ತುಂಬಾ ಪೂಜ್ಯನೀಯವಾಗಿದೆ. ಅಶ್ವತ್ಥ ಮರದ ಎಲೆ ಹಾಗೂ ಕಡ್ಡಿಗಳನ್ನು ವಿವಿಧ ರೀತಿಯ ಪೂಜೆ ಹಾಗೂ ಹವನಗಳಿಗೂ ಬಳಸಲಾಗುತ್ತದೆ. ಶನಿವಾರದಂದು ಅಶ್ವತ್ಥ ಮರಕ್ಕೆ ಸುತ್ತು ಬಂದರೆ ಅದರಿಂದ ತುಂಬಾ ಒಳ್ಳೆಯದಾಗುತ್ತದೆ ಎನ್ನಲಾಗುತ್ತದೆ. ಅಶ್ವತ್ಥ ಮರದಲ್ಲಿ ಶನಿವಾರದಂದು ವಿಷ್ಣುವಿನ ಜತೆಗೆ ಲಕ್ಷ್ಮೀಯು ನೆಲೆಸಿರುತ್ತಾಳೆ ಎಂದು ಪುರಾಣಗಳು ಹೇಳುತ್ತವೆ.
ಮರವು ದೇವದೇವತೆಗಳಿಗೆ ಸ್ವರ್ಗ ಎಂದು ಅಥರ್ವ ವೇದ ಮತ್ತು ಛೋದೋಗ್ಯ ಉಪನಿಷತ್ ನಲ್ಲಿ ಹೇಳಲಾಗಿದೆ. ಪುರಾಣಗಳ ಪ್ರಕಾರ ಅಶ್ವತ್ಥ ಮರದ ಬೇರಿನಲ್ಲಿ ಬ್ರಹ್ಮ, ಕೊಂಬೆಯಲ್ಲಿ ವಿಷ್ಣು ಮತ್ತು ಎಲೆಗಳಲ್ಲಿ ಶಿವ ನೆಲೆಸಿರುತ್ತಾನೆ. ಅಶ್ವತ್ಥ ಮರವನ್ನು ಪೂಜಿಸುವವರಿಗೆ ಸಂಪತ್ತು ಸಿಗುವುದು ಮತ್ತು ಇದರಲ್ಲಿ ತಪ್ಪು ಮಾಡುವವರಿಗೆ ಬಡತನ ಕಾಡುವುದು ಎನ್ನಲಾಗಿದೆ. ಅಶ್ವತ್ಥ ಮರವನ್ನು ಪೂಜಿಸುವವರಿಗೆ ಇರುವ ನಿಯಮಗಳ ಬಗ್ಗೆ ಬೋಲ್ಡ್ ಸ್ಕೈ ನಿಮಗೆ ತಿಳಿಸಿಕೊಡಲಿದೆ. ಇದನ್ನು ತಿಳಿದು ಅಶ್ವತ್ಥ ಮರ ಪೂಜಿಸಿ.....

ವೈಜ್ಞಾನಿಕ ಕಾರಣಗಳು
ಹೆಚ್ಚಿನ ಮರಗಳು ಕಾರ್ಬನ್ ಡೈಯಾಕ್ಸೈಡ್ ನ್ನು ಹೀರಿಕೊಂಡು ಆಮ್ಲಜನಕ ಬಿಡುಗಡೆ ಮಾಡುತ್ತದೆ. ರಾತ್ರಿ ವೇಳೆ ಮರಗಳು ಆಮ್ಲಜನಕವನ್ನು ಹೀರಿಕೊಂಡು ಕಾರ್ಬನ್ ಡೈಯಾಕ್ಸೈಡ್ ನ್ನು ಬಿಡುಗಡೆ ಮಾಡುವುದು. ಇದರಿಂದ ರಾತ್ರಿ ವೇಳೆ ಮರಗಳ ಸಮೀಪ ಮಲಗಬಾರದು ಎನ್ನಲಾಗುತ್ತದೆ.

ವೈಜ್ಞಾನಿಕ ಕಾರಣಗಳು
ಅಶ್ವತ್ಥ ಮರವು ರಾತ್ರಿ ವೇಳೆ ಕೂಡ ಆಮ್ಲಜನಕವನ್ನು ಬಿಡುಗಡೆ ಮಾಡುವುದು. ಅಶ್ವತ್ಥ ಮರವು ರಾತ್ರಿ ವೇಳೆಯೂ ಆಮ್ಲಜನಕವನ್ನು ಬಿಡುಗಡೆ ಮಾಡುವುದು. ಯಾಕೆಂದರೆ ಕ್ರಾಸ್ಲುಲೇಶನ್ ಮೆಟಾಬಾಲಿಸಮ್ ಅನ್ನು ಎನ್ನುವ ಒಂದು ರೀತಿಯ ದ್ಯುತಿಸಂಶ್ಲೇಷಣೆ ನಿರ್ವಹಿಸುವ ಸಾಮರ್ಥ್ಯ ಇದಕ್ಕಿದೆ.

ವೈಜ್ಞಾನಿಕ ಕಾರಣಗಳು
ನಿಮ್ಮ ಸುತ್ತಮುತ್ತ ಅಶ್ವತ್ಥ ಮರಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕ್ಕೆ ಒಳ್ಳೆಯದು. ಯಾಕೆಂದರೆ ಇದು ವಾತಾವರಣವನ್ನು ಶುದ್ಧೀಕರಿಸುವುದು.

ಧಾರ್ಮಿಕ ಕಾರಣಗಳು
ಅಶ್ವತ್ಥ ಮರದಲ್ಲಿ ನಾನು ನೆಲೆಸಿರುತ್ತೇನೆ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ದೇವರು ಹೇಳಿದ್ದಾರೆ. ಅಶ್ವತ್ಥ ಮರಕ್ಕೆ ನೀರು ಹಾಕುವುದು, ಪೂಜಿಸುವುದು ಮತ್ತು ಸುತ್ತು ಬರುವುದರಿಂದ ಸಂಪತ್ತು, ಸಂತೋಷ ಮತ್ತು ಒಳ್ಳೆಯ ಅದೃಷ್ಟ ಬರುವುದು ಎಂದು ನಂಬಲಾಗಿದೆ. ಅಶ್ವತ್ಥ ಮರವನ್ನು ಪೂಜಿಸಿದರೆ ಪಿತ್ತ ದೋಷ ಮತ್ತು ಕಾಲಸರ್ಪ ದೋಷವು ನಿವಾರಣೆಯಾಗುವುದು ಎಂದು ಪುರಾಣಗಳಲ್ಲಿ ಇದೆ.

ಅಮವಾಸ್ಯೆಯ ದಿನ
ಅಮವಾಸ್ಯೆಯ ದಿನ ಹನುಮಾನ್ ಚಾಲೀಸ ಹೇಳಿಕೊಂಡು ಅಶ್ವತ್ಥ ಮರಕ್ಕೆ ಸುತ್ತು ಬಂದರೆ ಅದರಿಂದ ಜೀವನದಲ್ಲಿ ಬರುವ ಹಲವಾರು ರೀತಿಯ ಸಂಕಷ್ಟಗಳು ದೂರವಾಗುವುದು ಎಂದು ಜ್ಯೋತಿಷಿಗಳು ಹೇಳುತ್ತಾರೆ. ಅಶ್ವತ್ಥ ಮರದ ಕೆಳಗೆ ಪ್ರತೀದಿನ ಸಾಸಿವೆ ಎಣ್ಣೆಯ ದೀಪ ಹಚ್ಚಿದರೆ ತುಂಬಾ ಒಳ್ಳೆಯದು



Click it and Unblock the Notifications