Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
ಆಗಸ್ಟ್ 18ಕ್ಕೆ ಕೃಷ್ಣ ಜನ್ಮಾಷ್ಟಮಿ ಹಬ್ಬದ ಸಡಗರ. ದೇಶದೆಲ್ಲಡೆ ಈ ಹಬ್ಬನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುವುದು. ಈ ಹಬ್ಬದಲ್ಲಿ ಕೃಷ್ಣನಿಗೆ ಪೂಜೆಯ ಜೊತೆಗೆ ಮುದ್ದು ಮಕ್ಕಳಿಗೆ ಕೃಷ್ಣ-ರಾಧೆ ವೇಷವನ್ನು ಹಾಕಿ ಕಣ್ತುಂಬಿಕೊಳ್ಳುವುದೇ ಸಂಭ್ರಮ.

ಕೃಷ್ಣನು ಶ್ರೀ ವಿಷ್ಣುವಿನ ಎಂಟನೇ ಅವತಾರ ಎಂದು ಹೇಳಲಾಗುವುದು, ಹಿಂದೂ ಪಂಚಾಂಗದ ಪ್ರಕಾರ ಶ್ರೀಕೃಷ್ಣನು ಭಾದ್ರಪದ ಮಾಸದ ಕೃಷ್ಣ ಪಕ್ಷದ ಎಂಟನೇ ಅಷ್ಟಮಿಯಂದು ಜನಿಸಿದ. ಈ ವರ್ಷ ಕೃಷ್ಣ ಜನ್ಮಾಷ್ಟಮಿ ಆಗಸ್ಟ್ 18ಕ್ಕೆ ಬಂದಿದೆ.
ಶ್ರೀಕೃಷ್ಣನನ್ನು ಭಕ್ತಿಯಿಂದ ಪೂಜಿಸಿದರೆ ಎಲ್ಲಾ ಸಮಸ್ಯೆಗಳನ್ನು ದೂರ ಮಾಡಿ ಬದುಕಿನಲ್ಲಿ ನೆಮ್ಮದಿ, ಪ್ರೀತಿಯನ್ನು ಕರುಣಿಸುತ್ತಾನೆ, ಎಂಥದ್ದೇ ಕಷ್ಟಕರ ಸಂದರ್ಭದಲ್ಲಿಯೂ ನಮ್ಮನ್ನು ರಕ್ಷಣೆ ಮಾಡುತ್ತಾನೆ ಎಂಬವುದು ಅವನ ಭಕ್ತರ ಅಚಲ ನಂಬಿಕೆ.
ಕೃಷ್ಣ ಜನ್ಮಾಷ್ಟಮಿಯಂದು ಉಪವಾಸ ಮಾಡಿದರೆ ತುಂಬಾ ಒಳ್ಳೆಯದು, ವರ್ಷದಲ್ಲಿ ಮಾಡುವ ಉಪವಾಸದ ಫಲ ಈ ದಿನ ಮಾಡುವ ಉಪವಾಸದಿಂದ ಸಿಗುತ್ತದೆ. ಆದ್ದರಿಂದ ಕೃಷ್ಣ ಜನ್ಮಾಷ್ಟಮಿಗೆ ಮಾಡುವ ಉಪವಾಕ್ಕೆ ವ್ರತರಾಜ್ ಸ್ಥಾನಮಾನ ನೀಡಲಾಗಿದೆ. ಇದರಿಂದ ಕಷ್ಟಗಳು ದೂರಾಗುವುದು, ಸಂತೋಷ, ಸಮೃದ್ಧಿ ಹೆಚ್ಚುವುದು.
ಅಲ್ಲದೆ ಈ ದಿನ ಉಪವಾಸ ವ್ರತ ಮಾಡಿ ಶ್ರೀಕೃಷ್ಣನಿಗೆ ಪೂಜೆ ಮಾಡಿದರೆ ಶನಿದೋಷಕ್ಕೆ ಕೂಡ ಪರಿಹಾರ ಮಾಡಿದಂತಾಗುವುದು.
ಹೆಚ್ಚಿನ ಪರಿಹಾರಕ್ಕೆ ಕೃಷ್ಣ ಜನ್ಮಾಷ್ಟಮಿಯಂದು ಏನೆಲ್ಲಾ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಕೃಷ್ಣ ಜನ್ಮಾಷ್ಟಮಿ ದಿನಾಂಕ ಹಾಗೂ ಮುಹೂರ್ತ
ದಿನಾಂಕ: ಆಗಸ್ಟ್ 18 ಮತ್ತು 19, 2022
ಪೂಜೆಗೆ ಮುಹೂರ್ತ: ಆಗಸ್ಟ್ 18 ಮಧ್ಯರಾತ್ರಿ 12:03ರಿಂದ 12: 47 (ಇಂಗ್ಲಿಷ್ ಟೈಮಿಂಗ್ (12:03 am to 12:47 am)
ಪೂಜೆಗೆ ಸಮಯ: 44 ನಿಮಿಷ
ಅಷ್ಟಮಿ ಪ್ರಾರಂಭ: ಆಗಸ್ಟ್ 18 ರಾತ್ರಿ 9:20ಕ್ಕೆ
ಅಷ್ಟಮಿ ಮುಕ್ತಾಯ: ಆಗಸ್ಟ್ 19 ರಾತ್ರಿ 10:59ಕ್ಕೆ

ಶನಿದೋಷ ನಿವಾರಣೆಗೆ ಜನ್ಮಾಷ್ಟಮಿ ಪೂಜೆ
ಶನಿದೋಷ ಇರುವವರು ಶನಿಯ ಕೆಟ್ಟ ಪ್ರಭಾವ ಕಡಿಮೆ ಮಾಡಲು ಜನ್ಮಾಷ್ಟಮಿ ಪೂಜೆ ಮಾಡಿದರೆ ಒಳ್ಳೆಯದು. ಜ್ಯೋತಿಷ್ಯ ಪ್ರಕಾರ ಶನಿ ದೇವನಿಗೂ ಸಂಖ್ಯೆ 8ಕ್ಕೂ ಸಂಬಂಧವಿದೆ. ಶ್ರೀವಿಷ್ಣುವಿನ 8ನೇ ಅವತಾರವಾಗಿರುವ ಶ್ರೀಕೃಷ್ಣ ಜನಿಸಿರುವುದು ಕೂಡ ಅಷ್ಟಮಿಯಂದು, ಅಲ್ಲದೆ ದೇವಕ್ಕಿಯ 8ನೇ ಮಗು.
ಅಲ್ಲದೆ ಶನಿ ದೇವ ಶ್ರೀಕೃಷ್ಣ ಭಕ್ತ. ಆದ್ದರಿಂದ ಶ್ರೀಕೃಷ್ಣನನ್ನು ಪೂಜಿಸಿದರೆ ಶನಿದೇವ ಖುಷಿಯಾಗಿ ತನ್ನ ಕೆಟ್ಟ ದೃಷ್ಟಿ ಬೀರುವುದನ್ನು ನಿಲ್ಲಿಸುತ್ತಾನೆ. ಆದ್ದರಿಂದ ಶನಿದೋಷ ಅಥವಾ ಶನಿ ಸಾಡೇಸಾತಿ ಇದ್ದರೆ ಕೃಷ್ಣ ಜನ್ಮಾಷ್ಟಮಿಯಂದು ಉಪವಾಸವಿದ್ದು ಶ್ರೀ ಕೃಷ್ಣನನ್ನು ಪೂಜಿಸಿ.

ಜನ್ಮಾಷ್ಟಮಿಯಂದು ಈ ಪರಿಹಾರಗಳನ್ನು ಮಾಡಿ
* ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿಸಲು ಶ್ರೀ ಕೃಷ್ಣನಿಗೆ ಸಿಹಿ ಕಡುಬು ನೈವೇದ್ಯವಾಗಿ ಇಡಿ.
* ಶ್ರೀ ಕೃಷ್ಣನಿಗೆ 8 ಬಗೆಯೆ ಹೂಗಳನ್ನು ಅರ್ಪಿಸುವುದರಿಂದ ಸಂತೋಷ, ಸಮೃದ್ಧಿ ಹೆಚ್ಚುವುದು.
* ದೇವಾಲಯಕ್ಕೆ ಬೆಳ್ಳಿಯ ಕೊಳಲು ನೀಡಿದರೆ ಒಳಿತಾಗುವುದು
* ಈ ದಿನ ಶ್ರೀಕೃಷ್ಣ ಹಾಗೂ ರಾಧೆಯ ಮಂತ್ರಗಳನ್ನು ಪಠಿಸಿ.



Click it and Unblock the Notifications