Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮೇ 22 ಶನಿ ಜಯಂತಿ: ಕಷ್ಟದಿಂದ ಮುಕ್ತಿಗೆ ಏನು ಮಾಡಬೇಕು?
ಮೇ 22, 2020 ವೈಶಾಖ ಮಾಸದ ಅಮಾವಾಸ್ಯೆಯ ದಿನ, ಶನಿ ದೇವನ ಜನ್ಮ ದಿನವಾಗಿದ್ದು, ಈ ದಿನವನ್ನು ಶನಿ ಜಯಂತಿಯೆಂದು ಆಚರಿಸಲಾಗುವುದು. ಈ ದಿನ ಶನೇಶ್ವರನಿಗೆ ಪೂಜೆ ಮಾಡುವುದರಿಂದ ಶನಿದೋಷದಿಂದ ಮುಕ್ತಿ ಹೊಂದಬಹುದು.

ಜೀವನದಲ್ಲಿ ಕಷ್ಟ ಬಂದಾಗ ಇದು ಶನಿಯ ಪ್ರಭಾವ ಎಂದೇ ಹೇಳುವುದನ್ನು ನೀವು ಕೇಳಿರಬಹುದು. ಶನಿ ಕಾಟ ಜೀವನದಲ್ಲಿ ಒಮ್ಮೆಯಾದರೂ ಇರುತ್ತದೆ ಎಂದು ಹೇಳಲಾಗುತ್ತದೆ. ಧರ್ಮರಾಯ, ಸತ್ಯ ಹರಿಶ್ಚಂದ್ರ, ಕೃಷ್ಣಪರಮಾತ್ಮನಿಗೂ ಕೂಡ ಶನಿ ಹೇಗೆ ಕಾಟ ಕೊಟ್ಟಿದ್ದ ಎಂಬ ಕತೆಗಳನ್ನು ಕೇಳಿರಬಹುದು. ಶನಿಯ ದೋಷದಿಂದ ಪಾರಾಗಿ ಅವನ ಕೃಪೆ ದೊರೆಯಬೇಕಾದರೆ ಶನಿ ದೇವನ ವಿಗ್ರಹವನ್ನು ಗಂಗಾಜಲದ\, ಪಂಚಾಮೃತ, ಎಳ್ಳೆಣ್ಣೆಯಿಂದ ಅಭಿಷೇಕ ಮಾಡಿ, ನಂತರ ಪೂಜೆ ಸಲ್ಲಿಸಲಾಗುವುದು.

ಶನಿ ದೇವನಿಗೆ ಎಳ್ಳೆಣ್ಣೆ ಅಭಿಷೇಕ ಮಾಡುವುದರ ಹಿಂದಿರುವ ಪೌರಾಣಿಕ ಕತೆ
ಸೀತಾಮಾತೆಯನ್ನು ಹುಡುಕಿಕೊಂಡು ಹನುಮಂತ ಲಂಕೆಗೆ ಹೋದಾಗ ಶನಿದೇವನು ಅಗ್ನಿಯಿಂದ ಸುಟ್ಟು ಬೆಂದು ಹೋಗಿರುವ ಸ್ಥಿತಿಯಲ್ಲಿ ಶನಿ ದೇವನನ್ನು ಕಂಡ ಹನುಮಂತ ಬೆಂಕಿ ಗಾಯದ ಉರಿಯಿಂದ ಶನಿಯನ್ನು ರಕ್ಷಿಸಲು ಎಳ್ಳೆಣ್ಣೆ ಲೇಪನ ಮಾಡುತ್ತಾನೆ. ಇದರಿಂದ ಶನಿಗೆ ಆಗುತ್ತಿದ್ದ ಉರಿ ಮತ್ತು ನೋವು ಕಡಿಮೆಯಾಗುತ್ತದೆ. ಆಗ ಶನಿ ನನಗೆ ಯಾರು ಎಳ್ಳೆಣ್ಣೆ ಅರ್ಪಿಸುತ್ತಾರೋ ಅವರಿಗೆ ಕಾಡುವುದಿಲ್ಲ ಎಂಬುವುದಾಗಿ ಹೇಳುತ್ತಾನೆ. ಹಾಗಾಗಿ ಶನಿ ದೇವನ ಕೃಪೆಗಾಗಿ ಎಳ್ಳೆಣ್ಣೆ ಅರ್ಪಿಸುತ್ತಾರೆ.

ಶನಿದೇವನಿಗೆ ಪೂಜೆಗೆ ಸೂಕ್ತ ಸಮಯ
ಶನಿ ಪೂಜೆಗೆ ಸಮಯ ಮೇ 21, ಗುರುವಾರ9.35
ಶನಿ ತಿಥಿ ಮೇ 22, ಶುಕ್ರವಾರ ರಾತ್ರಿ 11.08

ಶನಿ ಜಯಂತಿಯಂದು ಏನು ಮಾಡಬೇಕು?
- ಈ ದಿನ ಇರುವೆಗಳುಗೆ ಗೋಧಿ, ಬೆಲ್ಲವನ್ನು ಹಾಕಿದರೆ ಒಳ್ಳೆಯದು ಎಂದು ಹೇಳಲಾಗುತ್ತದೆ.
- ಶನಿಯನ್ನು ಪೂಜಿಸುವಾಗ ''ಓಂ ಶಂ ಶನೈಶ್ಚರಾಯ ನಮಃ'' ಎಂದು ಮಂತ್ರ ಹೇಳುವುದರಿಂದ ಶನಿಯನ್ನು ಬೇಗನೆ ಒಲಿಸಿಕೊಳ್ಳಬಹುದು.
- ಶನಿ ಜಯಂತಿಯಂದು ಕಪ್ಪು ಬಟ್ಟೆ, ಕಪ್ಪು ಬೇಳೆ ಮೊದಲಾವುಗಳನ್ನು ದಾನ ಮಾಡುವುದು ಒಳ್ಳೆಯದು.
- ಈ ದಿನ ಕಪ್ಪು ನಾಯಿಗೆ ಎಳ್ಳೆಣ್ಣೆ ಹಾಕಿ ಗೋಧಿ ಚಪಾತಿ ಮಾಡಿ ನೀಡುವುದರಿಂದ ಒಳಿತಾಗುವುದು.
- ನವಗ್ರಹ ದೇವಸ್ಥಾನಕ್ಕೆ ಭೇಟಿ ನೀಡುವುದು ಒಳ್ಳೆಯದು. ಆದರೆ ಈ ವರ್ಷ ಲಾಕ್ಡೌನ್ನಿಂದಾಗಿ ಅದು ಸಾಧ್ಯವಾಗುವುದಿಲ್ಲ, ಆದರೆ ನವಗ್ರಹಗಳನ್ನು ಮನಸ್ಸಿನಲ್ಲಿ ಸ್ಮರಿಸಿ ಪೂಜಿಸಿದರೆ ಅವರ ಪ್ರಭಾವದಿಂದ ಕಷ್ಟದಿಂದ ಮುಕ್ತಿ ಸಿಗುವುದು.
- ಶನಿ ದೋಷದಿಂದಾಗಿ ತುಂಬಾ ಕಷ್ಟ ಅನುಭವಿಸುತ್ತಿದ್ದರೆ ಶನಿಗೆ ನವರತ್ನ ಹಾರ ಅರ್ಪಿಸಿದರೆ ಒಳಿತಾಗುವುದು.
- ಈ ದಿನ ಹನುಂತನ ದೇವಾಲಯಕ್ಕೆ ಹೋಗಿ ಆಂಜನೇಯವನ್ನು ಸ್ಮರಿಸುವುದರಿಂದ ಹನುಮಂತನ ಭಕ್ತರನ್ನು ಶನಿ ಕಾಡುವುದಿಲ್ಲ.
- ಗ್ರಹದೋಷದಿಂದಾಗಿ ಸಾಕಷ್ಟು ಕಷ್ಟಗಳು ಎದುರಾಗಿದ್ದರೆ ಅದು ನಿವಾರನೆಯಾಗುವುದು
- ಅದೃಷ್ಟ ಲಕ್ಷ್ಮಿ ಒಲಿಯುವುದು
- ಬದುಕಿನಲ್ಲಿ ಒಳ್ಳೆಯ ಘಟನೆಗಳು ನಡೆಯುವುದು
- ಉದ್ಯೋಗ, ವ್ಯಾಪಾರದಲ್ಲಿ ಪ್ರಗತಿ ಹೊಂದುವಿರಿ.

ಶನಿಕೃಪೆಗಾಗಿ ಪೂಜಾ ವಿಧಾನ




Click it and Unblock the Notifications