Latest Updates
-
ಆಗಸ್ಟ್ 14 ಮತ್ತು 15ರ ಗೊಂದಲ ಬೇಡ: ಸೋಶಿಯಲ್ ಮೀಡಿಯಾದಲ್ಲಿ ಡಿಪಿ ಮತ್ತು ಪೋಸ್ಟ್ ಹಾಕುವಾಗ ಈ ತಪ್ಪು ಮಾಡ್ಬೇಡಿ! -
ಬಂಬಲ್ ಆಪ್ನಲ್ಲಿ ಮಹತ್ವದ ಬದಲಾವಣೆ: ಡೇಟಿಂಗ್ನಲ್ಲಿ ಸಂಭಾಷಣೆ ಶುರು ಮಾಡುವುದು ಹೇಗೆ? -
ಬೆಂಗಳೂರಿನ ಡೇಟಿಂಗ್ ಆ್ಯಪ್ಗಳಲ್ಲಿ ಹೊಸ ವಂಚನೆ: ಪಬ್ಗಳಲ್ಲಿ ಹಣ ಕಳೆದುಕೊಳ್ಳದಂತೆ ಪಾರಾಗುವುದು ಹೇಗೆ? -
ಬೆಂಗಳೂರಿನಲ್ಲಿ ಮಳೆಗಾಲ: ನಿಮ್ಮ ಅಪಾರ್ಟ್ಮೆಂಟ್ನಲ್ಲಿ ಹಾವುಗಳ ಕಾಟವೇ? ಈ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿ! -
ಇಂದು ರಾತ್ರಿ ಆಕಾಶದಲ್ಲಿ ಅದ್ಭುತ: ಪರ್ಸೀಡ್ಸ್ ಉಲ್ಕಾಪಾತ ವೀಕ್ಷಿಸಲು ಮತ್ತು ಫೋಟೋ ತೆಗೆಯಲು ಸರಳ ಟಿಪ್ಸ್ -
ಮಳೆಗಾಲದಲ್ಲಿ ಹೊರಗಿನ ಊಟ ಅಪಾಯಕಾರಿ: ಆನ್ಲೈನ್ ಫುಡ್ ಆರ್ಡರ್ ಮಾಡುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಕರ್ನಾಟಕ ಬಂದ್ 2026: ಬೆಂಗಳೂರಿನಲ್ಲಿ ಜನಜೀವನ ಹೇಗಿದೆ? ಇಲ್ಲಿದೆ ಇಂದಿನ ಲೇಟೆಸ್ಟ್ ಅಪ್ಡೇಟ್ -
ಎಡಗೈ ಬಳಸುವವರೇ ಗಮನಿಸಿ: ಕುತ್ತಿಗೆ ಮತ್ತು ಮಣಿಕಟ್ಟಿನ ನೋವಿಗೆ ಇಲ್ಲಿದೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ಕ್ಯಾಂಪಸ್ ಪ್ರೇಮಿಗಳೇ ಎಚ್ಚರ! ರ್ಯಾಗಿಂಗ್ನಿಂದ ಪಾರಾಗಲು ಮತ್ತು ಸುರಕ್ಷಿತವಾಗಿರಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ಮುಂಬೈ ಭೂಕುಸಿತದ ಎಚ್ಚರಿಕೆ: ಮಳೆಗಾಲದಲ್ಲಿ ನಿಮ್ಮ ಅಪಾರ್ಟ್ಮೆಂಟ್ ಸುರಕ್ಷಿತವಾಗಿಡಲು ಈ ಕ್ರಮಗಳನ್ನು ಪಾಲಿಸಿ
Shivratri Special: ಬೆಂಗಳೂರಿನ ಈ ಶಿವನ ದೇವಾಲಯವು ಭಕ್ತರಿಗೆ ಪ್ರಸಾದದ ರೂಪದಲ್ಲಿ ಮಜ್ಜಿಗೆ ಕೊಡುತ್ತದೆ
ಶಿವನನ್ನು ಯಾರು ಭಕ್ತಿಯಿಂದ ಆರಾಧಿಸುತ್ತಾರೋ ಅವರನ್ನು ಶಿವ ಎಂದಿಗೂ ಕೈ ಬಿಡಲ್ಲ ಎಂಬುವುದು ಭಕ್ತರ ಬಲವಾದ ನಂಬಿಕೆ. ಶಿವನಿಗೆ ಪೂಜೆಯಲ್ಲಿ ಅಭಿಷೇಕ ಕೂಡ ಪ್ರಮುಖವಾದದ್ದು. ಶಿವನಿಗೆ ಹಾಲು, ನೀರು, ಜೇನು ತುಪ್ಪ, ತುಪ್ಪ, ಸಕ್ಕರೆ, ಎಳನೀರು, ಶ್ರೀಗಂಧ, ಹಣ್ಣಿನ ರಸ ಇವುಗಳಿಂದ ಅಭಿಷೇಕ ಮಾಡಲಾಗುವುದು. ಶಿವನಿಗೆ ಅಭಿಷೇಕ ಮಾಡಿ ಮಾಡುವ ಪೂಜೆಗೆ ಹೆಚ್ಚಿನ ಫಲ ಸಿಗುವುದು ಎಂಬ ನಂಬಿಕೆ.

ಶಿವನಿಗೆ ಅಭಿಷೇಕ ಮಾಡಿ ಮಾಡುವ ಸಂಕಲ್ಪಕ್ಕೆ ಬೇಗ ಫಲ ಸಿಗುವುದು. ಎಲ್ಲಾ ಶಿವನ ದೇವಾಲಯಗಳಲ್ಲಿ ಶಿವನಿಗೆ ಅಭಿಷೇಕ ಮಾಡಲಾಗುವುದು. ಹೆಚ್ಚಿನ ಭಕ್ತಾದಿಗಳು ಶಿವನಿಗೆ ಹಾಲಾಭಿಷೇಕ ಮಾಡಿಸುತ್ತಾರೆ. ಹೀಗೆ ಹಾಲಾಭಿಷೇಕ ಮಾಡಿದವರಿಗೆ ಮೊಸರನ್ನು ಪ್ರಸಾದವಾಗಿ ಬೆಂಗಳೂರಿನ ಶಿವನ ದೇವಾಲಯದಲ್ಲಿ ನೀಡಲಾಗುತ್ತಿದೆ.
ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಶಿವನಿಗೆ ಹಾಲಾಭಿಷೇಕ ಮಾಡಿದವರಿಗೆ ಮಜ್ಜಿಗೆಯನ್ನು ಪ್ರಸಾದವಾಗಿ ನೀಡಲಾಗುವುದು.
ಸೋಮವಾರವೆಂದರೆ ಶಿವನ ಆರಾಧನೆಗೆ ಮೀಸಲಿಟ್ಟ ದಿನ. ಈ ದಿನದಂದು ಸುಮಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಒಂದು ಅಂದಾಜು ಪ್ರಕಾರ ಭಕ್ತರು ಹಾಲಾಭಿಷೇಕಕ್ಕೆ ನೀಡುವ ಹಾಲು ಸುಮಾರು 500 ಲೀಟರ್ಗೂ ಅಧಿಕವಿರುತ್ತದೆ.
ಪ್ರದುಷ ವ್ರತ, ಶಿವರಾತ್ರಿ ಮುಂತಾದ ವಿಶೇಷ ದಿನಗಳಲ್ಲಿ ಇನ್ನೂ ಹೆಚ್ಚಿನ ಹಾಲು ಸಂಗ್ರಹವಾಗುತ್ತದೆ. ಈ ಹಾಲು ಶಿವಲಿಂಗಕ್ಕೆ ಅಭಿಷೇಕ ಮಾಡಿದ ಬಳಿಕ ವ್ಯರ್ಥ ಆಗಬಾರದೆಂದು ಅದರಿಂದ ಮೊಸರು ತಯಾರಿಸಿ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆ.
ಹಾಲು ವ್ಯರ್ಥವಾಗಬಾರದೆಂದು ಎಲ್ಲಾ ವ್ಯವಸ್ಥೆ ಮಾಡಿದ್ದು ನೈರ್ಮಲ್ಯ ಕಾಪಾಡಿಕೊಂಡಿದೆ.
ಇಲ್ಲಿ ಮಜ್ಜಿಗೆಯ ಗುಣಮಟ್ಟವನ್ನು ಪರಿಶೀಲಿಸದ ಬಳಿಕ ಭಕ್ತರಿಗೆ ಹಂಚಲಾಗುತ್ತಿದೆ.



Click it and Unblock the Notifications