Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
Shivratri Special: ಬೆಂಗಳೂರಿನ ಈ ಶಿವನ ದೇವಾಲಯವು ಭಕ್ತರಿಗೆ ಪ್ರಸಾದದ ರೂಪದಲ್ಲಿ ಮಜ್ಜಿಗೆ ಕೊಡುತ್ತದೆ
ಶಿವನನ್ನು ಯಾರು ಭಕ್ತಿಯಿಂದ ಆರಾಧಿಸುತ್ತಾರೋ ಅವರನ್ನು ಶಿವ ಎಂದಿಗೂ ಕೈ ಬಿಡಲ್ಲ ಎಂಬುವುದು ಭಕ್ತರ ಬಲವಾದ ನಂಬಿಕೆ. ಶಿವನಿಗೆ ಪೂಜೆಯಲ್ಲಿ ಅಭಿಷೇಕ ಕೂಡ ಪ್ರಮುಖವಾದದ್ದು. ಶಿವನಿಗೆ ಹಾಲು, ನೀರು, ಜೇನು ತುಪ್ಪ, ತುಪ್ಪ, ಸಕ್ಕರೆ, ಎಳನೀರು, ಶ್ರೀಗಂಧ, ಹಣ್ಣಿನ ರಸ ಇವುಗಳಿಂದ ಅಭಿಷೇಕ ಮಾಡಲಾಗುವುದು. ಶಿವನಿಗೆ ಅಭಿಷೇಕ ಮಾಡಿ ಮಾಡುವ ಪೂಜೆಗೆ ಹೆಚ್ಚಿನ ಫಲ ಸಿಗುವುದು ಎಂಬ ನಂಬಿಕೆ.

ಶಿವನಿಗೆ ಅಭಿಷೇಕ ಮಾಡಿ ಮಾಡುವ ಸಂಕಲ್ಪಕ್ಕೆ ಬೇಗ ಫಲ ಸಿಗುವುದು. ಎಲ್ಲಾ ಶಿವನ ದೇವಾಲಯಗಳಲ್ಲಿ ಶಿವನಿಗೆ ಅಭಿಷೇಕ ಮಾಡಲಾಗುವುದು. ಹೆಚ್ಚಿನ ಭಕ್ತಾದಿಗಳು ಶಿವನಿಗೆ ಹಾಲಾಭಿಷೇಕ ಮಾಡಿಸುತ್ತಾರೆ. ಹೀಗೆ ಹಾಲಾಭಿಷೇಕ ಮಾಡಿದವರಿಗೆ ಮೊಸರನ್ನು ಪ್ರಸಾದವಾಗಿ ಬೆಂಗಳೂರಿನ ಶಿವನ ದೇವಾಲಯದಲ್ಲಿ ನೀಡಲಾಗುತ್ತಿದೆ.
ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಶಿವನಿಗೆ ಹಾಲಾಭಿಷೇಕ ಮಾಡಿದವರಿಗೆ ಮಜ್ಜಿಗೆಯನ್ನು ಪ್ರಸಾದವಾಗಿ ನೀಡಲಾಗುವುದು.
ಸೋಮವಾರವೆಂದರೆ ಶಿವನ ಆರಾಧನೆಗೆ ಮೀಸಲಿಟ್ಟ ದಿನ. ಈ ದಿನದಂದು ಸುಮಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಒಂದು ಅಂದಾಜು ಪ್ರಕಾರ ಭಕ್ತರು ಹಾಲಾಭಿಷೇಕಕ್ಕೆ ನೀಡುವ ಹಾಲು ಸುಮಾರು 500 ಲೀಟರ್ಗೂ ಅಧಿಕವಿರುತ್ತದೆ.
ಪ್ರದುಷ ವ್ರತ, ಶಿವರಾತ್ರಿ ಮುಂತಾದ ವಿಶೇಷ ದಿನಗಳಲ್ಲಿ ಇನ್ನೂ ಹೆಚ್ಚಿನ ಹಾಲು ಸಂಗ್ರಹವಾಗುತ್ತದೆ. ಈ ಹಾಲು ಶಿವಲಿಂಗಕ್ಕೆ ಅಭಿಷೇಕ ಮಾಡಿದ ಬಳಿಕ ವ್ಯರ್ಥ ಆಗಬಾರದೆಂದು ಅದರಿಂದ ಮೊಸರು ತಯಾರಿಸಿ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆ.
ಹಾಲು ವ್ಯರ್ಥವಾಗಬಾರದೆಂದು ಎಲ್ಲಾ ವ್ಯವಸ್ಥೆ ಮಾಡಿದ್ದು ನೈರ್ಮಲ್ಯ ಕಾಪಾಡಿಕೊಂಡಿದೆ.
ಇಲ್ಲಿ ಮಜ್ಜಿಗೆಯ ಗುಣಮಟ್ಟವನ್ನು ಪರಿಶೀಲಿಸದ ಬಳಿಕ ಭಕ್ತರಿಗೆ ಹಂಚಲಾಗುತ್ತಿದೆ.



Click it and Unblock the Notifications
