Latest Updates
-
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ!
Shivratri Special: ಬೆಂಗಳೂರಿನ ಈ ಶಿವನ ದೇವಾಲಯವು ಭಕ್ತರಿಗೆ ಪ್ರಸಾದದ ರೂಪದಲ್ಲಿ ಮಜ್ಜಿಗೆ ಕೊಡುತ್ತದೆ
ಶಿವನನ್ನು ಯಾರು ಭಕ್ತಿಯಿಂದ ಆರಾಧಿಸುತ್ತಾರೋ ಅವರನ್ನು ಶಿವ ಎಂದಿಗೂ ಕೈ ಬಿಡಲ್ಲ ಎಂಬುವುದು ಭಕ್ತರ ಬಲವಾದ ನಂಬಿಕೆ. ಶಿವನಿಗೆ ಪೂಜೆಯಲ್ಲಿ ಅಭಿಷೇಕ ಕೂಡ ಪ್ರಮುಖವಾದದ್ದು. ಶಿವನಿಗೆ ಹಾಲು, ನೀರು, ಜೇನು ತುಪ್ಪ, ತುಪ್ಪ, ಸಕ್ಕರೆ, ಎಳನೀರು, ಶ್ರೀಗಂಧ, ಹಣ್ಣಿನ ರಸ ಇವುಗಳಿಂದ ಅಭಿಷೇಕ ಮಾಡಲಾಗುವುದು. ಶಿವನಿಗೆ ಅಭಿಷೇಕ ಮಾಡಿ ಮಾಡುವ ಪೂಜೆಗೆ ಹೆಚ್ಚಿನ ಫಲ ಸಿಗುವುದು ಎಂಬ ನಂಬಿಕೆ.

ಶಿವನಿಗೆ ಅಭಿಷೇಕ ಮಾಡಿ ಮಾಡುವ ಸಂಕಲ್ಪಕ್ಕೆ ಬೇಗ ಫಲ ಸಿಗುವುದು. ಎಲ್ಲಾ ಶಿವನ ದೇವಾಲಯಗಳಲ್ಲಿ ಶಿವನಿಗೆ ಅಭಿಷೇಕ ಮಾಡಲಾಗುವುದು. ಹೆಚ್ಚಿನ ಭಕ್ತಾದಿಗಳು ಶಿವನಿಗೆ ಹಾಲಾಭಿಷೇಕ ಮಾಡಿಸುತ್ತಾರೆ. ಹೀಗೆ ಹಾಲಾಭಿಷೇಕ ಮಾಡಿದವರಿಗೆ ಮೊಸರನ್ನು ಪ್ರಸಾದವಾಗಿ ಬೆಂಗಳೂರಿನ ಶಿವನ ದೇವಾಲಯದಲ್ಲಿ ನೀಡಲಾಗುತ್ತಿದೆ.
ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಶಿವನಿಗೆ ಹಾಲಾಭಿಷೇಕ ಮಾಡಿದವರಿಗೆ ಮಜ್ಜಿಗೆಯನ್ನು ಪ್ರಸಾದವಾಗಿ ನೀಡಲಾಗುವುದು.
ಸೋಮವಾರವೆಂದರೆ ಶಿವನ ಆರಾಧನೆಗೆ ಮೀಸಲಿಟ್ಟ ದಿನ. ಈ ದಿನದಂದು ಸುಮಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಒಂದು ಅಂದಾಜು ಪ್ರಕಾರ ಭಕ್ತರು ಹಾಲಾಭಿಷೇಕಕ್ಕೆ ನೀಡುವ ಹಾಲು ಸುಮಾರು 500 ಲೀಟರ್ಗೂ ಅಧಿಕವಿರುತ್ತದೆ.
ಪ್ರದುಷ ವ್ರತ, ಶಿವರಾತ್ರಿ ಮುಂತಾದ ವಿಶೇಷ ದಿನಗಳಲ್ಲಿ ಇನ್ನೂ ಹೆಚ್ಚಿನ ಹಾಲು ಸಂಗ್ರಹವಾಗುತ್ತದೆ. ಈ ಹಾಲು ಶಿವಲಿಂಗಕ್ಕೆ ಅಭಿಷೇಕ ಮಾಡಿದ ಬಳಿಕ ವ್ಯರ್ಥ ಆಗಬಾರದೆಂದು ಅದರಿಂದ ಮೊಸರು ತಯಾರಿಸಿ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆ.
ಹಾಲು ವ್ಯರ್ಥವಾಗಬಾರದೆಂದು ಎಲ್ಲಾ ವ್ಯವಸ್ಥೆ ಮಾಡಿದ್ದು ನೈರ್ಮಲ್ಯ ಕಾಪಾಡಿಕೊಂಡಿದೆ.
ಇಲ್ಲಿ ಮಜ್ಜಿಗೆಯ ಗುಣಮಟ್ಟವನ್ನು ಪರಿಶೀಲಿಸದ ಬಳಿಕ ಭಕ್ತರಿಗೆ ಹಂಚಲಾಗುತ್ತಿದೆ.



Click it and Unblock the Notifications