Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
Shivratri Special: ಬೆಂಗಳೂರಿನ ಈ ಶಿವನ ದೇವಾಲಯವು ಭಕ್ತರಿಗೆ ಪ್ರಸಾದದ ರೂಪದಲ್ಲಿ ಮಜ್ಜಿಗೆ ಕೊಡುತ್ತದೆ
ಶಿವನನ್ನು ಯಾರು ಭಕ್ತಿಯಿಂದ ಆರಾಧಿಸುತ್ತಾರೋ ಅವರನ್ನು ಶಿವ ಎಂದಿಗೂ ಕೈ ಬಿಡಲ್ಲ ಎಂಬುವುದು ಭಕ್ತರ ಬಲವಾದ ನಂಬಿಕೆ. ಶಿವನಿಗೆ ಪೂಜೆಯಲ್ಲಿ ಅಭಿಷೇಕ ಕೂಡ ಪ್ರಮುಖವಾದದ್ದು. ಶಿವನಿಗೆ ಹಾಲು, ನೀರು, ಜೇನು ತುಪ್ಪ, ತುಪ್ಪ, ಸಕ್ಕರೆ, ಎಳನೀರು, ಶ್ರೀಗಂಧ, ಹಣ್ಣಿನ ರಸ ಇವುಗಳಿಂದ ಅಭಿಷೇಕ ಮಾಡಲಾಗುವುದು. ಶಿವನಿಗೆ ಅಭಿಷೇಕ ಮಾಡಿ ಮಾಡುವ ಪೂಜೆಗೆ ಹೆಚ್ಚಿನ ಫಲ ಸಿಗುವುದು ಎಂಬ ನಂಬಿಕೆ.

ಶಿವನಿಗೆ ಅಭಿಷೇಕ ಮಾಡಿ ಮಾಡುವ ಸಂಕಲ್ಪಕ್ಕೆ ಬೇಗ ಫಲ ಸಿಗುವುದು. ಎಲ್ಲಾ ಶಿವನ ದೇವಾಲಯಗಳಲ್ಲಿ ಶಿವನಿಗೆ ಅಭಿಷೇಕ ಮಾಡಲಾಗುವುದು. ಹೆಚ್ಚಿನ ಭಕ್ತಾದಿಗಳು ಶಿವನಿಗೆ ಹಾಲಾಭಿಷೇಕ ಮಾಡಿಸುತ್ತಾರೆ. ಹೀಗೆ ಹಾಲಾಭಿಷೇಕ ಮಾಡಿದವರಿಗೆ ಮೊಸರನ್ನು ಪ್ರಸಾದವಾಗಿ ಬೆಂಗಳೂರಿನ ಶಿವನ ದೇವಾಲಯದಲ್ಲಿ ನೀಡಲಾಗುತ್ತಿದೆ.
ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಶಿವನಿಗೆ ಹಾಲಾಭಿಷೇಕ ಮಾಡಿದವರಿಗೆ ಮಜ್ಜಿಗೆಯನ್ನು ಪ್ರಸಾದವಾಗಿ ನೀಡಲಾಗುವುದು.
ಸೋಮವಾರವೆಂದರೆ ಶಿವನ ಆರಾಧನೆಗೆ ಮೀಸಲಿಟ್ಟ ದಿನ. ಈ ದಿನದಂದು ಸುಮಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಒಂದು ಅಂದಾಜು ಪ್ರಕಾರ ಭಕ್ತರು ಹಾಲಾಭಿಷೇಕಕ್ಕೆ ನೀಡುವ ಹಾಲು ಸುಮಾರು 500 ಲೀಟರ್ಗೂ ಅಧಿಕವಿರುತ್ತದೆ.
ಪ್ರದುಷ ವ್ರತ, ಶಿವರಾತ್ರಿ ಮುಂತಾದ ವಿಶೇಷ ದಿನಗಳಲ್ಲಿ ಇನ್ನೂ ಹೆಚ್ಚಿನ ಹಾಲು ಸಂಗ್ರಹವಾಗುತ್ತದೆ. ಈ ಹಾಲು ಶಿವಲಿಂಗಕ್ಕೆ ಅಭಿಷೇಕ ಮಾಡಿದ ಬಳಿಕ ವ್ಯರ್ಥ ಆಗಬಾರದೆಂದು ಅದರಿಂದ ಮೊಸರು ತಯಾರಿಸಿ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆ.
ಹಾಲು ವ್ಯರ್ಥವಾಗಬಾರದೆಂದು ಎಲ್ಲಾ ವ್ಯವಸ್ಥೆ ಮಾಡಿದ್ದು ನೈರ್ಮಲ್ಯ ಕಾಪಾಡಿಕೊಂಡಿದೆ.
ಇಲ್ಲಿ ಮಜ್ಜಿಗೆಯ ಗುಣಮಟ್ಟವನ್ನು ಪರಿಶೀಲಿಸದ ಬಳಿಕ ಭಕ್ತರಿಗೆ ಹಂಚಲಾಗುತ್ತಿದೆ.



Click it and Unblock the Notifications