Just In
- 4 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 5 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 6 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 6 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Shivratri Special: ಬೆಂಗಳೂರಿನ ಈ ಶಿವನ ದೇವಾಲಯವು ಭಕ್ತರಿಗೆ ಪ್ರಸಾದದ ರೂಪದಲ್ಲಿ ಮಜ್ಜಿಗೆ ಕೊಡುತ್ತದೆ
ಶಿವನನ್ನು ಯಾರು ಭಕ್ತಿಯಿಂದ ಆರಾಧಿಸುತ್ತಾರೋ ಅವರನ್ನು ಶಿವ ಎಂದಿಗೂ ಕೈ ಬಿಡಲ್ಲ ಎಂಬುವುದು ಭಕ್ತರ ಬಲವಾದ ನಂಬಿಕೆ. ಶಿವನಿಗೆ ಪೂಜೆಯಲ್ಲಿ ಅಭಿಷೇಕ ಕೂಡ ಪ್ರಮುಖವಾದದ್ದು. ಶಿವನಿಗೆ ಹಾಲು, ನೀರು, ಜೇನು ತುಪ್ಪ, ತುಪ್ಪ, ಸಕ್ಕರೆ, ಎಳನೀರು, ಶ್ರೀಗಂಧ, ಹಣ್ಣಿನ ರಸ ಇವುಗಳಿಂದ ಅಭಿಷೇಕ ಮಾಡಲಾಗುವುದು. ಶಿವನಿಗೆ ಅಭಿಷೇಕ ಮಾಡಿ ಮಾಡುವ ಪೂಜೆಗೆ ಹೆಚ್ಚಿನ ಫಲ ಸಿಗುವುದು ಎಂಬ ನಂಬಿಕೆ.
ಶಿವನಿಗೆ ಅಭಿಷೇಕ ಮಾಡಿ ಮಾಡುವ ಸಂಕಲ್ಪಕ್ಕೆ ಬೇಗ ಫಲ ಸಿಗುವುದು. ಎಲ್ಲಾ ಶಿವನ ದೇವಾಲಯಗಳಲ್ಲಿ ಶಿವನಿಗೆ ಅಭಿಷೇಕ ಮಾಡಲಾಗುವುದು. ಹೆಚ್ಚಿನ ಭಕ್ತಾದಿಗಳು ಶಿವನಿಗೆ ಹಾಲಾಭಿಷೇಕ ಮಾಡಿಸುತ್ತಾರೆ. ಹೀಗೆ ಹಾಲಾಭಿಷೇಕ ಮಾಡಿದವರಿಗೆ ಮೊಸರನ್ನು ಪ್ರಸಾದವಾಗಿ ಬೆಂಗಳೂರಿನ ಶಿವನ ದೇವಾಲಯದಲ್ಲಿ ನೀಡಲಾಗುತ್ತಿದೆ.
ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿರುವ ಗಂಗಾಧರೇಶ್ವರ ದೇವಾಲಯದಲ್ಲಿ ಶಿವನಿಗೆ ಹಾಲಾಭಿಷೇಕ ಮಾಡಿದವರಿಗೆ ಮಜ್ಜಿಗೆಯನ್ನು ಪ್ರಸಾದವಾಗಿ ನೀಡಲಾಗುವುದು.
ಸೋಮವಾರವೆಂದರೆ ಶಿವನ ಆರಾಧನೆಗೆ ಮೀಸಲಿಟ್ಟ ದಿನ. ಈ ದಿನದಂದು ಸುಮಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಒಂದು ಅಂದಾಜು ಪ್ರಕಾರ ಭಕ್ತರು ಹಾಲಾಭಿಷೇಕಕ್ಕೆ ನೀಡುವ ಹಾಲು ಸುಮಾರು 500 ಲೀಟರ್ಗೂ ಅಧಿಕವಿರುತ್ತದೆ.
ಪ್ರದುಷ ವ್ರತ, ಶಿವರಾತ್ರಿ ಮುಂತಾದ ವಿಶೇಷ ದಿನಗಳಲ್ಲಿ ಇನ್ನೂ ಹೆಚ್ಚಿನ ಹಾಲು ಸಂಗ್ರಹವಾಗುತ್ತದೆ. ಈ ಹಾಲು ಶಿವಲಿಂಗಕ್ಕೆ ಅಭಿಷೇಕ ಮಾಡಿದ ಬಳಿಕ ವ್ಯರ್ಥ ಆಗಬಾರದೆಂದು ಅದರಿಂದ ಮೊಸರು ತಯಾರಿಸಿ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆ.
ಹಾಲು
ವ್ಯರ್ಥವಾಗಬಾರದೆಂದು
ಎಲ್ಲಾ
ವ್ಯವಸ್ಥೆ
ಮಾಡಿದ್ದು
ನೈರ್ಮಲ್ಯ
ಕಾಪಾಡಿಕೊಂಡಿದೆ.
ಇಲ್ಲಿ
ಮಜ್ಜಿಗೆಯ
ಗುಣಮಟ್ಟವನ್ನು
ಪರಿಶೀಲಿಸದ
ಬಳಿಕ
ಭಕ್ತರಿಗೆ
ಹಂಚಲಾಗುತ್ತಿದೆ.