Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಶ್ರಾವಣ ಮಾಸ 2021: ಯಾವಾಗ ಪ್ರಾರಂಭ? ಈ ತಿಂಗಳ ಮಹತ್ವ ಹಾಗೂ ಪೂಜಾ ವಿಧಿಗಳೇನು?
ಹಿಂದೂಗಳಿಗೆ ಆಷಾಢ ಕಳೆದು ಬರುವ ಶ್ರಾವಣ ತುಂಬಾ ವಿಶೇಷಗಳನ್ನು ಹೊತ್ತು ತರುವ ತಿಂಗಳಾಗಿದೆ. ಹಿಂದೂ ಕನ್ನಡ ಕ್ಯಾಲೆಂಡರ್ನಲ್ಲಿ ಶ್ರಾವಣ 5ನೇ ತಿಂಗಳಾಗಿದೆ.
ಶ್ರಾವಣ ಎಂದರೆ ಸಾಲು-ಸಾಲು ಹಬ್ಬಗಳನ್ನು ಹೊತ್ತು ಬರುವ ಮಾಸವಾಗಿದೆ. ಶ್ರಾವಣದಲ್ಲಿ ನಾಗರ ಪಂಚಮಿ, ವರಲಕ್ಷ್ಮಿ ವ್ರತ, ರಿಗ್ ಮತ್ತು ಯುಜುರ್ ಉಪಕರ್ಮ, ಶ್ರೀ ಕೃಷ್ಣ ಜಯಂತಿ ಹೀಗೆ ಅನೇಕ ಹಬ್ಬಗಳು-ಆಚರಣೆಗಳಿವೆ. ಇನ್ನು ಶ್ರಾವಣ ಮಾಸದ ಎಲ್ಲಾ ಮಂಗಳವಾರದಂದು ಮಂಗಳಗೌರಿ ಪೂಜೆ ಮಾಡಲಾಗುವುದು. ಶ್ರಾವಣ ಸೋಮವಾರ ಕೂಡ ಆಚರಿಸಲಾಗುವುದು.
ಶ್ರಾವಣ ಯಾವಾಗ?
ಆಗಸ್ಟ್ 9ರಿಂದ ಶ್ರಾವಣ ಪ್ರಾರಂಭ, ಸೆಪ್ಟೆಂಬರ್ 7ಕ್ಕೆ ಮುಕ್ತಾಯ

ಶ್ರಾವಣದಲ್ಲಿ ಶ್ರಾವಣ ಸೋಮವಾರದ ಮಹತ್ವ
ಶ್ರಾವಣದಲ್ಲಿ ಶ್ರಾವಣ ಸೋಮವಾರ ತುಂಬಾ ವಿಶೇಷ ದಿನವಾಗಿದೆ. ಈ ದಿನ ಶಿವಲಿಂಗಕ್ಕೆ ನೀರಿನ ಅಭಿಷೇಕ ಮಾಡಿ ಶಿವನನ್ನು ಆರಾಧಿಸಲಾಗುವುದು.
ಪೌರಾಣಿಕ ಕತೆಗಳ ಪ್ರಕಾರ ದೇವತೆಗಳು ಹಾಗೂ ಅಸುರರ ನಡುವೆ ಯುದ್ಧ ನಡೆದಾಗ ನೀರಿನಲ್ಲಿ ವಿಷ ಉತ್ಪತ್ತಿಯಾಗುತ್ತೆ, ಆಗ ಶಿವ ಮನುಕುಲದ ರಕ್ಷಣೆಗೆ ವಿಷವನ್ನು ಕುಡಿಯುತ್ತಾನೆ, ಶಿವನಿಗೆ ವಿಷವನ್ನು ಕುಡಿದಾಗ ಉರಿ ತಾಳಲಾಗದೆ ಚಂದ್ರನೊಳಗೆ ತನ್ನ ತಲೆ ಇಡುತ್ತಾನೆ, ಇಂದ್ರನು ಶಿವನ ಮೇಲೆ ಮಳೆಯನ್ನು ಸರಿಸುತ್ತಾನೆ, ಎಲ್ಲಾ ದೇವತೆಗಳು ಶಿವನ ಮೇಲೆ ಗಂಗಾಜಲ ಸುರಿದು ಶಿವನ ದೇಹದ ಉರಿಯನ್ನು ಕಡಿಮೆ ಮಾಡುತ್ತಾರೆ. ಇದೆಲ್ಲಾ ನಡೆದಿರುವುದು ಶ್ರಾವನ ಮಾಸದಲ್ಲಿ. ಹೀಗಾಗಿ ಶ್ರಾವಣ ಮಾಸ ಅದರಲ್ಲೂ ಶ್ರಾವಣ ಸೋಮವಾರ ಶಿವನಿಗೆ ಮೀಸಲಿಟ್ಟ ದಿನವಾಗಿದೆ.
ಶ್ರಾವಣ ಸೋಮವಾರದಂದು ಶಿವ ಲಿಂಗವನ್ನು ಗಂಗಾ ಜಲದಿಂದ ಅಭಿಷೇಕ ಮಾಡಿ ಆರಾಧಿಸಲಾಗುವುದು.

ಶ್ರಾವಣ ಸೋಮವಾರದ ಪೂಜಾವಿಧಿ
* ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಬೇಕು
* ನಂತರ ಶಿವನ ದೇವಾಲಯಕ್ಕೆ ಹೋಗಿ ರುದ್ರಾಭಿಷೇಕ ಪೂಜೆ ಮಾಡಿಸಿ, ಮೆಯಲ್ಲಿಯೇ ಮಾಡುವುದಾದರೆ ಸರಿಯಾದ ಕ್ರಮದಲ್ಲಿ ಮಾಡಬೇಕು.
* ಶಿವಲಿಂಗಕ್ಕೆ ಬಿಲ್ವೆ ಪತ್ರೆ ಅರ್ಪಿಸಿ.
* ಶಿವನಿಗೆ ನೈವೇದ್ಯ ಅರ್ಪಿಸಿ
* ನಂತರ ಶಿವನ ಮಂತ್ರಗಳನ್ನು ಪಠಿಸಿ, ನಂತರ ಆರತಿ ಮಾಡಿ.
* ಪೂಜೆ ಮುಗಿದ ಬಳಿಕ ಪ್ರಸಾದವನ್ನು ಹಂಚಿ.
ಸೂಚನೆ: ಶ್ರಾವಣ ಸೋಮವಾರದಂದು ಉಪವಾಸ ವ್ರತ ಪಾಲಿಸಿ ಶಿವನ ಆರಾಧನೆ ಮಾಡಿದರೆ ಹೆಚ್ಚು ಫಲ ಸಿಗುವುದು.

ಶ್ರಾವಣ ಮಾಸದಲ್ಲಿ ಶಿವ ಪೂಜೆ ಮಾಡುವುದರಿಂದ ದೊರೆಯುವ ಪ್ರಯೋಜನಗಳು
* ಶಿವನ ಆರಾಧನೆಯಿಂದ ಗ್ರಹಗಳ ದೋಷವಿದ್ದರೆ ಅದು ದೂರವಾಗುವುದು.
* ಶಿವನಿಗೆ ರುದ್ರಾಭಿಷೇಕ ಮಾಡುವುದರಿಂದ ಕಾಯಿಲೆಯಿಂದ ಗುಣಮುಖರಾಗುವಿರಿ, ಆರ್ಥಿಕ ಸಮಸ್ಯೆಯಿದ್ದರೆ ದೂರವಾಗುವುದು, ಪಾಪ ಕರ್ಮಗಳಿಂದ ಮೋಕ್ಷ ಸಿಗುವುದು.
* ಶಿವನ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.
* ಉದ್ಯಮ ಹಾಗೂ ವೃತ್ತಿ ಜೀವನದಲ್ಲಿ ಯಶಸ್ಸು ಉಂಟಾಗುವುದು.

ಈ ವರ್ಷ ಶ್ರಾವಣ ಸೋಮವಾರದ ದಿನಾಂಕಗಳು
ಆಗಸ್ಟ್ 9 , 2021
ಆಗಸ್ಟ್ 16, 2021
ಆಗಸ್ಟ್ 23, 2021
ಆಗಸ್ಟ್ 30, 2021
ಸೆಪ್ಟೆಂಬರ್ 6, 2021



Click it and Unblock the Notifications