Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
Shravan Purnima 2021 : ಶ್ರಾವಣ ಪೂರ್ಣಿಮೆ ತುಂಬಾ ಪವಿತ್ರವಾದ ದಿನ, ಏಕೆ?
ಹಿಂದೂಗಳಿಗೆ ಶ್ರಾವಣ ಪೂರ್ಣಿಮೆ ತುಂಬಾನೇ ವಿಶೇಷ, ಈ ವರ್ಷ ಶ್ರಾವಣ ಪೂರ್ಣಿಮೆಯನ್ನು ಆಗಸ್ಟ್ 22 ಭಾನುವಾರದಂದು ಆಚರಿಸಲಾಗುವುದು. ಇದನ್ನು ರಾಖಿ ಪೂರ್ಣಿಮೆ ಎಂದು ಕೂಡ ಕರೆಯಲಾಗುವುದು. ಈ ಪವಿತ್ರ ದಿನದಂದು ರಕ್ಷಾ ಬಂಧನ ಆಚರಿಸಲಾಗುವುದು.
ಈ ದಿನದಂದು ದೇಶದ ಬೇರೆ-ಬೇರೆ ಕಡೆ ವಿವಿಧ ರೀತಿಯಲ್ಲಿ ಆಚರಿಸಲಾಗುವುದು. ನಾವಿಲ್ಲಿ ಶ್ರಾವಣ ಪೂರ್ಣಿಮೆಯ ಮಹತ್ವ ಹಾಗೂ ಆಚರಣೆಯ ಬಗ್ಗೆ ಹೇಳಿದ್ದೇವೆ ನೋಡಿ:

ಶ್ರಾವಣ ಪೂರ್ಣಿಮೆ ಮಹತ್ವ
ಹಿಂದೂ ಕ್ಯಾಲೆಂಡರ್ನಲ್ಲಿ ಶ್ರಾವಣ ಪೂರ್ಣಿಮೆಯನ್ನು ತುಂಬಾ ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಉಪನಯನ ಮತ್ತು ಯಜ್ಙೋಪವೀತ ಆಚರಿಸಲಾಗುವುದು. ಬ್ರಾಹ್ಮಣರಾಗಿದ್ದವರಿಗೆ ಅವರ ಅವಿಬಾಜ್ಯ ಅಂಗವೇ ಯಜ್ಙೋಪವೀತ . ಪ್ರತೀ ಹುಣ್ಣಿಮೆ ದಿನ ನೂಲಹುಣ್ಣಿಮೆಯಂದು ಇದನ್ನು ಆಚರಿಸಲಾಗುವುದು. ಬ್ರಾಹ್ಮಣರು ಈ ದಿನ ಶುದ್ಧೀಕರಣ ಸಂಪ್ರದಾಯವನ್ನು ಕೂಡ ಆಚರಿಸುತ್ತಾರೆ. ಇನ್ನು ಶಿವ ಭಕ್ತರು ಈ ದಿನ ವಿಶೇಷ ಪೂಜೆ ಸಲ್ಲಿಸಲಾಗುವುದು, ಹೀಗೆ ಅನೇಕ ಕಾರಣಗಳಿಗೆ ಈ ದಿನ ತುಂಬಾನೇ ಮಹತ್ವದ್ದಾಗಿದೆ.

ಶ್ರಾವಣ ಪೂರ್ಣಿಮೆಯಂದು ಪಾಲಿಸುವ ಆಚರಣೆಗಳು
* ರಕ್ಷಾ ಬಂಧನ: ರಾಖಿ ಹಬ್ಬ
* ಹಯಗ್ರೀವ ಜಯಂತಿ: ಈ ದಿನ ಹಯಗ್ರೀವನ ಪೂಜೆ ಮಾಡಲಾಗುವದುಉ.
* ಉಪಕರ್ಮ: ಜನಿವಾರ ಬದಲಾಯಿಸುವುದು
* ಜಂಧ್ಯಂ ಪೂರ್ಣಿಮೆ: ಉಪಕರ್ಮ ಮಾಡುವುದು
* ನಾರಳಿ ಪೂರ್ಣಿಮೆ : ಈ ದಿನ ಸಮುದ್ರಕ್ಕೆ ತೆಂಗಿನಕಾಯಿ ಒಡೆದು ವರುಣ ದೇವನನ್ನು ಆರಾಧಿಸಲಾಗುವುದು.
* ಅವನಿ ಅವಿಟ್ಟಂ: ಗಾಯತ್ರಿ ಜಪ ಮಾಡುತ್ತಾ ದಕ್ಷಿಣ ಭಾರತದ ಬ್ರಾಹ್ಮಣರು ಜನಿವಾರ ಬದಲಾಯಿಸುವುದು
* ಬಲರಾಮ್ ಜಯಂತಿ: ಬಲರಾಮ ಜನಿಸಿದ ದಿನ
* ಅಮರನಾಥ ಯಾತ್ರೆ ಕೊನೆಯ ದಿನ
* ಪವಿತ್ರೋಪನ: ಈ ದಿನ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು.
* ಕಜರಾಯಿ ಪೂರ್ಣಿಮೆ: ಕೆಲವೊಂದು ಬೆಳೆಯ ಕಟಾವು

ಶ್ರಾವಣ ಪೂರ್ಣಿಮೆ ಆಚರಣೆಯ ಧಾರ್ಮಿಕ ಪ್ರಯೋಜನಗಳು
ಶ್ರಾವಣ ಪೂರ್ಣಿಮೆ ಆಚರಿಸುವುದರಿಂದ ಚಂದ್ರ ದೋಷ ನಿವಾರಣೆಯಾಗುತ್ತದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡುವುದರಿಂದ ವಿಷ್ಣು, ಲಕ್ಷ್ಮಿಯನ್ನು ಪೂಜಿಸುವುದರಿಂದ ಸಂಪತ್ತು ವೃದ್ಧಿಯಾಗುವುದು.
ಈ ದಿನ ಪೂಜೆ ಮಾಡುವಾಗ ನೀವು ಶುಭ ಮುಹೂರ್ತದಲ್ಲಿ ಮಾಡಬೇಕು. ಭದ್ರಾಕಾಲದಲ್ಲಿ ಮಾಡಬೇಡಿ.



Click it and Unblock the Notifications
