Shravan Purnima 2021 : ಶ್ರಾವಣ ಪೂರ್ಣಿಮೆ ತುಂಬಾ ಪವಿತ್ರವಾದ ದಿನ, ಏಕೆ?

ಹಿಂದೂಗಳಿಗೆ ಶ್ರಾವಣ ಪೂರ್ಣಿಮೆ ತುಂಬಾನೇ ವಿಶೇಷ, ಈ ವರ್ಷ ಶ್ರಾವಣ ಪೂರ್ಣಿಮೆಯನ್ನು ಆಗಸ್ಟ್‌ 22 ಭಾನುವಾರದಂದು ಆಚರಿಸಲಾಗುವುದು. ಇದನ್ನು ರಾಖಿ ಪೂರ್ಣಿಮೆ ಎಂದು ಕೂಡ ಕರೆಯಲಾಗುವುದು. ಈ ಪವಿತ್ರ ದಿನದಂದು ರಕ್ಷಾ ಬಂಧನ ಆಚರಿಸಲಾಗುವುದು.

ಈ ದಿನದಂದು ದೇಶದ ಬೇರೆ-ಬೇರೆ ಕಡೆ ವಿವಿಧ ರೀತಿಯಲ್ಲಿ ಆಚರಿಸಲಾಗುವುದು. ನಾವಿಲ್ಲಿ ಶ್ರಾವಣ ಪೂರ್ಣಿಮೆಯ ಮಹತ್ವ ಹಾಗೂ ಆಚರಣೆಯ ಬಗ್ಗೆ ಹೇಳಿದ್ದೇವೆ ನೋಡಿ:

ಶ್ರಾವಣ ಪೂರ್ಣಿಮೆ ಮಹತ್ವ

ಶ್ರಾವಣ ಪೂರ್ಣಿಮೆ ಮಹತ್ವ

ಹಿಂದೂ ಕ್ಯಾಲೆಂಡರ್‌ನಲ್ಲಿ ಶ್ರಾವಣ ಪೂರ್ಣಿಮೆಯನ್ನು ತುಂಬಾ ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಉಪನಯನ ಮತ್ತು ಯಜ್ಙೋಪವೀತ ಆಚರಿಸಲಾಗುವುದು. ಬ್ರಾಹ್ಮಣರಾಗಿದ್ದವರಿಗೆ ಅವರ ಅವಿಬಾಜ್ಯ ಅಂಗವೇ ಯಜ್ಙೋಪವೀತ . ಪ್ರತೀ ಹುಣ್ಣಿಮೆ ದಿನ ನೂಲಹುಣ್ಣಿಮೆಯಂದು ಇದನ್ನು ಆಚರಿಸಲಾಗುವುದು. ಬ್ರಾಹ್ಮಣರು ಈ ದಿನ ಶುದ್ಧೀಕರಣ ಸಂಪ್ರದಾಯವನ್ನು ಕೂಡ ಆಚರಿಸುತ್ತಾರೆ. ಇನ್ನು ಶಿವ ಭಕ್ತರು ಈ ದಿನ ವಿಶೇಷ ಪೂಜೆ ಸಲ್ಲಿಸಲಾಗುವುದು, ಹೀಗೆ ಅನೇಕ ಕಾರಣಗಳಿಗೆ ಈ ದಿನ ತುಂಬಾನೇ ಮಹತ್ವದ್ದಾಗಿದೆ.

ಶ್ರಾವಣ ಪೂರ್ಣಿಮೆಯಂದು ಪಾಲಿಸುವ ಆಚರಣೆಗಳು

ಶ್ರಾವಣ ಪೂರ್ಣಿಮೆಯಂದು ಪಾಲಿಸುವ ಆಚರಣೆಗಳು

* ರಕ್ಷಾ ಬಂಧನ: ರಾಖಿ ಹಬ್ಬ

* ಹಯಗ್ರೀವ ಜಯಂತಿ: ಈ ದಿನ ಹಯಗ್ರೀವನ ಪೂಜೆ ಮಾಡಲಾಗುವದುಉ.

* ಉಪಕರ್ಮ: ಜನಿವಾರ ಬದಲಾಯಿಸುವುದು

* ಜಂಧ್ಯಂ ಪೂರ್ಣಿಮೆ: ಉಪಕರ್ಮ ಮಾಡುವುದು

* ನಾರಳಿ ಪೂರ್ಣಿಮೆ : ಈ ದಿನ ಸಮುದ್ರಕ್ಕೆ ತೆಂಗಿನಕಾಯಿ ಒಡೆದು ವರುಣ ದೇವನನ್ನು ಆರಾಧಿಸಲಾಗುವುದು.

* ಅವನಿ ಅವಿಟ್ಟಂ: ಗಾಯತ್ರಿ ಜಪ ಮಾಡುತ್ತಾ ದಕ್ಷಿಣ ಭಾರತದ ಬ್ರಾಹ್ಮಣರು ಜನಿವಾರ ಬದಲಾಯಿಸುವುದು

* ಬಲರಾಮ್ ಜಯಂತಿ: ಬಲರಾಮ ಜನಿಸಿದ ದಿನ

* ಅಮರನಾಥ ಯಾತ್ರೆ ಕೊನೆಯ ದಿನ

* ಪವಿತ್ರೋಪನ: ಈ ದಿನ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು.

* ಕಜರಾಯಿ ಪೂರ್ಣಿಮೆ: ಕೆಲವೊಂದು ಬೆಳೆಯ ಕಟಾವು

ಶ್ರಾವಣ ಪೂರ್ಣಿಮೆ ಆಚರಣೆಯ ಧಾರ್ಮಿಕ ಪ್ರಯೋಜನಗಳು

ಶ್ರಾವಣ ಪೂರ್ಣಿಮೆ ಆಚರಣೆಯ ಧಾರ್ಮಿಕ ಪ್ರಯೋಜನಗಳು

ಶ್ರಾವಣ ಪೂರ್ಣಿಮೆ ಆಚರಿಸುವುದರಿಂದ ಚಂದ್ರ ದೋಷ ನಿವಾರಣೆಯಾಗುತ್ತದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡುವುದರಿಂದ ವಿಷ್ಣು, ಲಕ್ಷ್ಮಿಯನ್ನು ಪೂಜಿಸುವುದರಿಂದ ಸಂಪತ್ತು ವೃದ್ಧಿಯಾಗುವುದು.

ಈ ದಿನ ಪೂಜೆ ಮಾಡುವಾಗ ನೀವು ಶುಭ ಮುಹೂರ್ತದಲ್ಲಿ ಮಾಡಬೇಕು. ಭದ್ರಾಕಾಲದಲ್ಲಿ ಮಾಡಬೇಡಿ.

English summary

Shravan Purnima 2021 : Date, History and Significance in Kannada

Shravan Purnima 2021: Date, History and Significance in Kannada, read on,
X
Desktop Bottom Promotion