Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
Shravan Purnima 2021 : ಶ್ರಾವಣ ಪೂರ್ಣಿಮೆ ತುಂಬಾ ಪವಿತ್ರವಾದ ದಿನ, ಏಕೆ?
ಹಿಂದೂಗಳಿಗೆ ಶ್ರಾವಣ ಪೂರ್ಣಿಮೆ ತುಂಬಾನೇ ವಿಶೇಷ, ಈ ವರ್ಷ ಶ್ರಾವಣ ಪೂರ್ಣಿಮೆಯನ್ನು ಆಗಸ್ಟ್ 22 ಭಾನುವಾರದಂದು ಆಚರಿಸಲಾಗುವುದು. ಇದನ್ನು ರಾಖಿ ಪೂರ್ಣಿಮೆ ಎಂದು ಕೂಡ ಕರೆಯಲಾಗುವುದು. ಈ ಪವಿತ್ರ ದಿನದಂದು ರಕ್ಷಾ ಬಂಧನ ಆಚರಿಸಲಾಗುವುದು.
ಈ ದಿನದಂದು ದೇಶದ ಬೇರೆ-ಬೇರೆ ಕಡೆ ವಿವಿಧ ರೀತಿಯಲ್ಲಿ ಆಚರಿಸಲಾಗುವುದು. ನಾವಿಲ್ಲಿ ಶ್ರಾವಣ ಪೂರ್ಣಿಮೆಯ ಮಹತ್ವ ಹಾಗೂ ಆಚರಣೆಯ ಬಗ್ಗೆ ಹೇಳಿದ್ದೇವೆ ನೋಡಿ:

ಶ್ರಾವಣ ಪೂರ್ಣಿಮೆ ಮಹತ್ವ
ಹಿಂದೂ ಕ್ಯಾಲೆಂಡರ್ನಲ್ಲಿ ಶ್ರಾವಣ ಪೂರ್ಣಿಮೆಯನ್ನು ತುಂಬಾ ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಉಪನಯನ ಮತ್ತು ಯಜ್ಙೋಪವೀತ ಆಚರಿಸಲಾಗುವುದು. ಬ್ರಾಹ್ಮಣರಾಗಿದ್ದವರಿಗೆ ಅವರ ಅವಿಬಾಜ್ಯ ಅಂಗವೇ ಯಜ್ಙೋಪವೀತ . ಪ್ರತೀ ಹುಣ್ಣಿಮೆ ದಿನ ನೂಲಹುಣ್ಣಿಮೆಯಂದು ಇದನ್ನು ಆಚರಿಸಲಾಗುವುದು. ಬ್ರಾಹ್ಮಣರು ಈ ದಿನ ಶುದ್ಧೀಕರಣ ಸಂಪ್ರದಾಯವನ್ನು ಕೂಡ ಆಚರಿಸುತ್ತಾರೆ. ಇನ್ನು ಶಿವ ಭಕ್ತರು ಈ ದಿನ ವಿಶೇಷ ಪೂಜೆ ಸಲ್ಲಿಸಲಾಗುವುದು, ಹೀಗೆ ಅನೇಕ ಕಾರಣಗಳಿಗೆ ಈ ದಿನ ತುಂಬಾನೇ ಮಹತ್ವದ್ದಾಗಿದೆ.

ಶ್ರಾವಣ ಪೂರ್ಣಿಮೆಯಂದು ಪಾಲಿಸುವ ಆಚರಣೆಗಳು
* ರಕ್ಷಾ ಬಂಧನ: ರಾಖಿ ಹಬ್ಬ
* ಹಯಗ್ರೀವ ಜಯಂತಿ: ಈ ದಿನ ಹಯಗ್ರೀವನ ಪೂಜೆ ಮಾಡಲಾಗುವದುಉ.
* ಉಪಕರ್ಮ: ಜನಿವಾರ ಬದಲಾಯಿಸುವುದು
* ಜಂಧ್ಯಂ ಪೂರ್ಣಿಮೆ: ಉಪಕರ್ಮ ಮಾಡುವುದು
* ನಾರಳಿ ಪೂರ್ಣಿಮೆ : ಈ ದಿನ ಸಮುದ್ರಕ್ಕೆ ತೆಂಗಿನಕಾಯಿ ಒಡೆದು ವರುಣ ದೇವನನ್ನು ಆರಾಧಿಸಲಾಗುವುದು.
* ಅವನಿ ಅವಿಟ್ಟಂ: ಗಾಯತ್ರಿ ಜಪ ಮಾಡುತ್ತಾ ದಕ್ಷಿಣ ಭಾರತದ ಬ್ರಾಹ್ಮಣರು ಜನಿವಾರ ಬದಲಾಯಿಸುವುದು
* ಬಲರಾಮ್ ಜಯಂತಿ: ಬಲರಾಮ ಜನಿಸಿದ ದಿನ
* ಅಮರನಾಥ ಯಾತ್ರೆ ಕೊನೆಯ ದಿನ
* ಪವಿತ್ರೋಪನ: ಈ ದಿನ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು.
* ಕಜರಾಯಿ ಪೂರ್ಣಿಮೆ: ಕೆಲವೊಂದು ಬೆಳೆಯ ಕಟಾವು

ಶ್ರಾವಣ ಪೂರ್ಣಿಮೆ ಆಚರಣೆಯ ಧಾರ್ಮಿಕ ಪ್ರಯೋಜನಗಳು
ಶ್ರಾವಣ ಪೂರ್ಣಿಮೆ ಆಚರಿಸುವುದರಿಂದ ಚಂದ್ರ ದೋಷ ನಿವಾರಣೆಯಾಗುತ್ತದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡುವುದರಿಂದ ವಿಷ್ಣು, ಲಕ್ಷ್ಮಿಯನ್ನು ಪೂಜಿಸುವುದರಿಂದ ಸಂಪತ್ತು ವೃದ್ಧಿಯಾಗುವುದು.
ಈ ದಿನ ಪೂಜೆ ಮಾಡುವಾಗ ನೀವು ಶುಭ ಮುಹೂರ್ತದಲ್ಲಿ ಮಾಡಬೇಕು. ಭದ್ರಾಕಾಲದಲ್ಲಿ ಮಾಡಬೇಡಿ.



Click it and Unblock the Notifications