Latest Updates
-
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ?
Shravan Purnima 2021 : ಶ್ರಾವಣ ಪೂರ್ಣಿಮೆ ತುಂಬಾ ಪವಿತ್ರವಾದ ದಿನ, ಏಕೆ?
ಹಿಂದೂಗಳಿಗೆ ಶ್ರಾವಣ ಪೂರ್ಣಿಮೆ ತುಂಬಾನೇ ವಿಶೇಷ, ಈ ವರ್ಷ ಶ್ರಾವಣ ಪೂರ್ಣಿಮೆಯನ್ನು ಆಗಸ್ಟ್ 22 ಭಾನುವಾರದಂದು ಆಚರಿಸಲಾಗುವುದು. ಇದನ್ನು ರಾಖಿ ಪೂರ್ಣಿಮೆ ಎಂದು ಕೂಡ ಕರೆಯಲಾಗುವುದು. ಈ ಪವಿತ್ರ ದಿನದಂದು ರಕ್ಷಾ ಬಂಧನ ಆಚರಿಸಲಾಗುವುದು.
ಈ ದಿನದಂದು ದೇಶದ ಬೇರೆ-ಬೇರೆ ಕಡೆ ವಿವಿಧ ರೀತಿಯಲ್ಲಿ ಆಚರಿಸಲಾಗುವುದು. ನಾವಿಲ್ಲಿ ಶ್ರಾವಣ ಪೂರ್ಣಿಮೆಯ ಮಹತ್ವ ಹಾಗೂ ಆಚರಣೆಯ ಬಗ್ಗೆ ಹೇಳಿದ್ದೇವೆ ನೋಡಿ:

ಶ್ರಾವಣ ಪೂರ್ಣಿಮೆ ಮಹತ್ವ
ಹಿಂದೂ ಕ್ಯಾಲೆಂಡರ್ನಲ್ಲಿ ಶ್ರಾವಣ ಪೂರ್ಣಿಮೆಯನ್ನು ತುಂಬಾ ಮಹತ್ವದ ದಿನವೆಂದು ಪರಿಗಣಿಸಲಾಗಿದೆ. ಉಪನಯನ ಮತ್ತು ಯಜ್ಙೋಪವೀತ ಆಚರಿಸಲಾಗುವುದು. ಬ್ರಾಹ್ಮಣರಾಗಿದ್ದವರಿಗೆ ಅವರ ಅವಿಬಾಜ್ಯ ಅಂಗವೇ ಯಜ್ಙೋಪವೀತ . ಪ್ರತೀ ಹುಣ್ಣಿಮೆ ದಿನ ನೂಲಹುಣ್ಣಿಮೆಯಂದು ಇದನ್ನು ಆಚರಿಸಲಾಗುವುದು. ಬ್ರಾಹ್ಮಣರು ಈ ದಿನ ಶುದ್ಧೀಕರಣ ಸಂಪ್ರದಾಯವನ್ನು ಕೂಡ ಆಚರಿಸುತ್ತಾರೆ. ಇನ್ನು ಶಿವ ಭಕ್ತರು ಈ ದಿನ ವಿಶೇಷ ಪೂಜೆ ಸಲ್ಲಿಸಲಾಗುವುದು, ಹೀಗೆ ಅನೇಕ ಕಾರಣಗಳಿಗೆ ಈ ದಿನ ತುಂಬಾನೇ ಮಹತ್ವದ್ದಾಗಿದೆ.

ಶ್ರಾವಣ ಪೂರ್ಣಿಮೆಯಂದು ಪಾಲಿಸುವ ಆಚರಣೆಗಳು
* ರಕ್ಷಾ ಬಂಧನ: ರಾಖಿ ಹಬ್ಬ
* ಹಯಗ್ರೀವ ಜಯಂತಿ: ಈ ದಿನ ಹಯಗ್ರೀವನ ಪೂಜೆ ಮಾಡಲಾಗುವದುಉ.
* ಉಪಕರ್ಮ: ಜನಿವಾರ ಬದಲಾಯಿಸುವುದು
* ಜಂಧ್ಯಂ ಪೂರ್ಣಿಮೆ: ಉಪಕರ್ಮ ಮಾಡುವುದು
* ನಾರಳಿ ಪೂರ್ಣಿಮೆ : ಈ ದಿನ ಸಮುದ್ರಕ್ಕೆ ತೆಂಗಿನಕಾಯಿ ಒಡೆದು ವರುಣ ದೇವನನ್ನು ಆರಾಧಿಸಲಾಗುವುದು.
* ಅವನಿ ಅವಿಟ್ಟಂ: ಗಾಯತ್ರಿ ಜಪ ಮಾಡುತ್ತಾ ದಕ್ಷಿಣ ಭಾರತದ ಬ್ರಾಹ್ಮಣರು ಜನಿವಾರ ಬದಲಾಯಿಸುವುದು
* ಬಲರಾಮ್ ಜಯಂತಿ: ಬಲರಾಮ ಜನಿಸಿದ ದಿನ
* ಅಮರನಾಥ ಯಾತ್ರೆ ಕೊನೆಯ ದಿನ
* ಪವಿತ್ರೋಪನ: ಈ ದಿನ ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು.
* ಕಜರಾಯಿ ಪೂರ್ಣಿಮೆ: ಕೆಲವೊಂದು ಬೆಳೆಯ ಕಟಾವು

ಶ್ರಾವಣ ಪೂರ್ಣಿಮೆ ಆಚರಣೆಯ ಧಾರ್ಮಿಕ ಪ್ರಯೋಜನಗಳು
ಶ್ರಾವಣ ಪೂರ್ಣಿಮೆ ಆಚರಿಸುವುದರಿಂದ ಚಂದ್ರ ದೋಷ ನಿವಾರಣೆಯಾಗುತ್ತದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡುವುದರಿಂದ ವಿಷ್ಣು, ಲಕ್ಷ್ಮಿಯನ್ನು ಪೂಜಿಸುವುದರಿಂದ ಸಂಪತ್ತು ವೃದ್ಧಿಯಾಗುವುದು.
ಈ ದಿನ ಪೂಜೆ ಮಾಡುವಾಗ ನೀವು ಶುಭ ಮುಹೂರ್ತದಲ್ಲಿ ಮಾಡಬೇಕು. ಭದ್ರಾಕಾಲದಲ್ಲಿ ಮಾಡಬೇಡಿ.



Click it and Unblock the Notifications











