Latest Updates
-
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ
Shravana Shanivara : ಶ್ರಾವಣ ಶನಿವಾರ: ಈ ದೇವರುಗಳ ಆರಾಧನೆಯಿಂದ ಸಂಪತ್ತು ವೃದ್ಧಿ
ಶ್ರಾವಣ ಮಾಸದಲ್ಲಿ ಪ್ರತಿಯೊಂದು ದಿನವೂ ವಿಶೇಷವಾದದ್ದೇ. ಸೋಮವಾರ ಶ್ರಾವಣ ಸೋಮವಾರ ಆಚರಿಸಿದರೆ, ಮಂಗಳ ವಾರ ಗೌರಿ ವ್ರತ ಆಚರಿಸಲಾಗುವುದು, ಇನ್ನು ಶುಕ್ರವಾರ, ಶನಿವಾರ ಕೂಡ ಪೂಜೆಗೆ ಶ್ರೇಷ್ಠವಾದ ದಿನವೆಂದು ಹೇಳಲಾಗಿದೆ.

ಶ್ರಾವಣ ಶನಿವಾರ ಹನುಮಂತ, ಶನಿ ದೇವ, ವೆಂಕಟೇಶ್ವರ ಸ್ವಾಮಿಯ ಆರಾಧನೆ ಮಾಡಲಾಗುವುದು. ಈ ವರ್ಷ ಶ್ರಾವಣ ಶನಿವಾರದ ದಿನಾಂಕಗಳು ಹಾಗೂ ಆ ದಿನ ಪಠಿಸಬೇಕಾದ ಮಂತ್ರಗಳ ಬಗ್ಗೆ ಹೇಳಲಾಗಿದೆ ನೋಡಿ:

2021ರಲ್ಲಿ ಶ್ರಾವಣ ಶನಿವಾರದ ದಿನಾಂಕಗಳು
ಆಗಸ್ಟ್ 14
ಆಗಸ್ಟ್ 21
ಆಗಸ್ಟ್ 28
ಸೆಪ್ಟೆಂಬರ್ 4

ಶನಿವಾರ ಅಶ್ವತ್ಥ ಮರಕ್ಕೆ ಪೂಜೆ
ಅಶ್ವತ್ಥ ಮರದಲ್ಲಿ ಲಕ್ಷ್ಮಿ, ವಿಷ್ಣು ವಾಸ ಮಾಡುತ್ತಾರೆ ಎಂದು ಹೇಳಲಾಗುವುದು. ಅಶ್ವತ್ಥ ಮರವನ್ನು ಶ್ರೀ ಕೃಷ್ಣನನ್ನು ತನ್ನದೇ ರೂಪವೆಂದು ವಿವರಿಸಿದ್ದಾನೆ.
ಅಶ್ವತ್ಥ ಮರಕ್ಕೆ ನೀರನ್ನು ಹಾಕಿ ಪ್ರದರ್ಶಣೆ ಬಂದು ಪೂಜೆ ಮಾಡಬೇಕು, ನಂತರ ನೈವೇದ್ಯ ಅರ್ಪಿಸಬೇಕು. ಪೂಜೆ ಸಲ್ಲಿಸುವಾಗ ಲಕ್ಷ್ಮಿ ಹಾಗೂ ವಿಷ್ಣು ಮಂತ್ರ ಪಠಿಸಿ
ಲಕ್ಷ್ಮಿ ಮಂತ್ರ
"ಓಂ ಶ್ರೀಮ್ ಮಹಾ ಲಕ್ಷ್ಮೀಯೇಯ್ ನಮಃ"
"ಓಂ ಹ್ರೀಮ್ ಶ್ರೀಮ್ ಕ್ಲೀಮ್ ಮಹಾಲಕ್ಷ್ಮಿ ನಮಃ"
" ಓಂ ಶ್ರೀಮ್ ಶ್ರೀ-ಆಯ್ ನಮಃ "
" ಓಂ ಮಹಾ ದೇವಿಚ ವಿದ್ಮಾಯ್; ವಿಷ್ಣು ಪ್ರತಿಚಾ ದೇಮಹಿ; ಥನ್ನೋ ಲಕ್ಷ್ಮಿ ಪ್ರಚೋದಯತ್"
ವಿಷ್ಣು ಮೂಲ ಮಂತ್ರ:
ಓಂ ನಮೋ ನಾರಾಯಣಾಯ

ಶನಿ ದೇವನ ಆರಾಧನೆ
ಶನಿ ದೋಷ ನಿವಾರಣೆಗೆ ಶನಿವಾರದಂದು ಶನಿ ದೇವನನ್ನು ಆರಾಧನೆ ಮಾಡಬೇಕು. ಶನಿಗೆ ಎಳ್ಳೆಣ್ಣೆ ಅರ್ಪಿಸಿ, ಶನಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಬೇಕು. ಈ ದಿನ ವ್ರತ ನಿಯಮಗಳನ್ನು ಪಾಲಿಸಿ ಪೂಜೆ ಮಾಡುವುದರಿಂದ ಕಷ್ಟಗಳು ದೂರವಾಗುವುದು.
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿವಾರ ವೆಂಕಟೇಶ್ವರ ಸ್ವಾಮಿಯ ಆರಾಧನೆ
ಶನಿವಾರ ವೆಂಕಟೇಶ್ವರ ಸ್ವಾಮಿಯ ಆರಾಧನೆ ಮಾಡಲಾಗುವುದು. ವೆಂಕಟೇಶ್ವರ ಕೃಪೆಯಿಂದ ಸಂಪತ್ತು ವೃದ್ಧಿಯಾಗುವುದು.

ಓಂ ಶ್ರೀ ವೆಂಕಟೇಶ್ವರಾಯ ನಮಃ |
ಓಂ ಲಕ್ಷ್ಮೀಪತಯೇ ನಮಃ |
ಓಂ ವರಪ್ರದಾಯ ನಮಃ |
ಎಂದು ಪಠಿಸುತ್ತಾ ಪೂಜೆ ಸಲ್ಲಿಸಿ.
ಹೀಗೆ ಶ್ರಾವಣ ಶನಿವಾರ ಪೂಜೆಗೆ ತುಂಬಾ ಶ್ರೇಷ್ಠವಾದ ದಿನವಾಗಿದೆ. ಈ ಶ್ರಾವಣ ಮಾಸದಲ್ಲಿ ಸಲ್ಲಿಸುವ ಪೂಜೆಗೆ ವಿಶೇಷ ಫಲವಿದೆ ಎಂದು ಹೇಳಲಾಗುವುದು.



Click it and Unblock the Notifications











