Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
Shravana Shanivara : ಶ್ರಾವಣ ಶನಿವಾರ: ಈ ದೇವರುಗಳ ಆರಾಧನೆಯಿಂದ ಸಂಪತ್ತು ವೃದ್ಧಿ
ಶ್ರಾವಣ ಮಾಸದಲ್ಲಿ ಪ್ರತಿಯೊಂದು ದಿನವೂ ವಿಶೇಷವಾದದ್ದೇ. ಸೋಮವಾರ ಶ್ರಾವಣ ಸೋಮವಾರ ಆಚರಿಸಿದರೆ, ಮಂಗಳ ವಾರ ಗೌರಿ ವ್ರತ ಆಚರಿಸಲಾಗುವುದು, ಇನ್ನು ಶುಕ್ರವಾರ, ಶನಿವಾರ ಕೂಡ ಪೂಜೆಗೆ ಶ್ರೇಷ್ಠವಾದ ದಿನವೆಂದು ಹೇಳಲಾಗಿದೆ.

ಶ್ರಾವಣ ಶನಿವಾರ ಹನುಮಂತ, ಶನಿ ದೇವ, ವೆಂಕಟೇಶ್ವರ ಸ್ವಾಮಿಯ ಆರಾಧನೆ ಮಾಡಲಾಗುವುದು. ಈ ವರ್ಷ ಶ್ರಾವಣ ಶನಿವಾರದ ದಿನಾಂಕಗಳು ಹಾಗೂ ಆ ದಿನ ಪಠಿಸಬೇಕಾದ ಮಂತ್ರಗಳ ಬಗ್ಗೆ ಹೇಳಲಾಗಿದೆ ನೋಡಿ:

2021ರಲ್ಲಿ ಶ್ರಾವಣ ಶನಿವಾರದ ದಿನಾಂಕಗಳು
ಆಗಸ್ಟ್ 14
ಆಗಸ್ಟ್ 21
ಆಗಸ್ಟ್ 28
ಸೆಪ್ಟೆಂಬರ್ 4

ಶನಿವಾರ ಅಶ್ವತ್ಥ ಮರಕ್ಕೆ ಪೂಜೆ
ಅಶ್ವತ್ಥ ಮರದಲ್ಲಿ ಲಕ್ಷ್ಮಿ, ವಿಷ್ಣು ವಾಸ ಮಾಡುತ್ತಾರೆ ಎಂದು ಹೇಳಲಾಗುವುದು. ಅಶ್ವತ್ಥ ಮರವನ್ನು ಶ್ರೀ ಕೃಷ್ಣನನ್ನು ತನ್ನದೇ ರೂಪವೆಂದು ವಿವರಿಸಿದ್ದಾನೆ.
ಅಶ್ವತ್ಥ ಮರಕ್ಕೆ ನೀರನ್ನು ಹಾಕಿ ಪ್ರದರ್ಶಣೆ ಬಂದು ಪೂಜೆ ಮಾಡಬೇಕು, ನಂತರ ನೈವೇದ್ಯ ಅರ್ಪಿಸಬೇಕು. ಪೂಜೆ ಸಲ್ಲಿಸುವಾಗ ಲಕ್ಷ್ಮಿ ಹಾಗೂ ವಿಷ್ಣು ಮಂತ್ರ ಪಠಿಸಿ
ಲಕ್ಷ್ಮಿ ಮಂತ್ರ
"ಓಂ ಶ್ರೀಮ್ ಮಹಾ ಲಕ್ಷ್ಮೀಯೇಯ್ ನಮಃ"
"ಓಂ ಹ್ರೀಮ್ ಶ್ರೀಮ್ ಕ್ಲೀಮ್ ಮಹಾಲಕ್ಷ್ಮಿ ನಮಃ"
" ಓಂ ಶ್ರೀಮ್ ಶ್ರೀ-ಆಯ್ ನಮಃ "
" ಓಂ ಮಹಾ ದೇವಿಚ ವಿದ್ಮಾಯ್; ವಿಷ್ಣು ಪ್ರತಿಚಾ ದೇಮಹಿ; ಥನ್ನೋ ಲಕ್ಷ್ಮಿ ಪ್ರಚೋದಯತ್"
ವಿಷ್ಣು ಮೂಲ ಮಂತ್ರ:
ಓಂ ನಮೋ ನಾರಾಯಣಾಯ

ಶನಿ ದೇವನ ಆರಾಧನೆ
ಶನಿ ದೋಷ ನಿವಾರಣೆಗೆ ಶನಿವಾರದಂದು ಶನಿ ದೇವನನ್ನು ಆರಾಧನೆ ಮಾಡಬೇಕು. ಶನಿಗೆ ಎಳ್ಳೆಣ್ಣೆ ಅರ್ಪಿಸಿ, ಶನಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಬೇಕು. ಈ ದಿನ ವ್ರತ ನಿಯಮಗಳನ್ನು ಪಾಲಿಸಿ ಪೂಜೆ ಮಾಡುವುದರಿಂದ ಕಷ್ಟಗಳು ದೂರವಾಗುವುದು.
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿವಾರ ವೆಂಕಟೇಶ್ವರ ಸ್ವಾಮಿಯ ಆರಾಧನೆ
ಶನಿವಾರ ವೆಂಕಟೇಶ್ವರ ಸ್ವಾಮಿಯ ಆರಾಧನೆ ಮಾಡಲಾಗುವುದು. ವೆಂಕಟೇಶ್ವರ ಕೃಪೆಯಿಂದ ಸಂಪತ್ತು ವೃದ್ಧಿಯಾಗುವುದು.

ಓಂ ಶ್ರೀ ವೆಂಕಟೇಶ್ವರಾಯ ನಮಃ |
ಓಂ ಲಕ್ಷ್ಮೀಪತಯೇ ನಮಃ |
ಓಂ ವರಪ್ರದಾಯ ನಮಃ |
ಎಂದು ಪಠಿಸುತ್ತಾ ಪೂಜೆ ಸಲ್ಲಿಸಿ.
ಹೀಗೆ ಶ್ರಾವಣ ಶನಿವಾರ ಪೂಜೆಗೆ ತುಂಬಾ ಶ್ರೇಷ್ಠವಾದ ದಿನವಾಗಿದೆ. ಈ ಶ್ರಾವಣ ಮಾಸದಲ್ಲಿ ಸಲ್ಲಿಸುವ ಪೂಜೆಗೆ ವಿಶೇಷ ಫಲವಿದೆ ಎಂದು ಹೇಳಲಾಗುವುದು.



Click it and Unblock the Notifications