Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
Shravana Shanivara : ಶ್ರಾವಣ ಶನಿವಾರ: ಈ ದೇವರುಗಳ ಆರಾಧನೆಯಿಂದ ಸಂಪತ್ತು ವೃದ್ಧಿ
ಶ್ರಾವಣ ಮಾಸದಲ್ಲಿ ಪ್ರತಿಯೊಂದು ದಿನವೂ ವಿಶೇಷವಾದದ್ದೇ. ಸೋಮವಾರ ಶ್ರಾವಣ ಸೋಮವಾರ ಆಚರಿಸಿದರೆ, ಮಂಗಳ ವಾರ ಗೌರಿ ವ್ರತ ಆಚರಿಸಲಾಗುವುದು, ಇನ್ನು ಶುಕ್ರವಾರ, ಶನಿವಾರ ಕೂಡ ಪೂಜೆಗೆ ಶ್ರೇಷ್ಠವಾದ ದಿನವೆಂದು ಹೇಳಲಾಗಿದೆ.

ಶ್ರಾವಣ ಶನಿವಾರ ಹನುಮಂತ, ಶನಿ ದೇವ, ವೆಂಕಟೇಶ್ವರ ಸ್ವಾಮಿಯ ಆರಾಧನೆ ಮಾಡಲಾಗುವುದು. ಈ ವರ್ಷ ಶ್ರಾವಣ ಶನಿವಾರದ ದಿನಾಂಕಗಳು ಹಾಗೂ ಆ ದಿನ ಪಠಿಸಬೇಕಾದ ಮಂತ್ರಗಳ ಬಗ್ಗೆ ಹೇಳಲಾಗಿದೆ ನೋಡಿ:

2021ರಲ್ಲಿ ಶ್ರಾವಣ ಶನಿವಾರದ ದಿನಾಂಕಗಳು
ಆಗಸ್ಟ್ 14
ಆಗಸ್ಟ್ 21
ಆಗಸ್ಟ್ 28
ಸೆಪ್ಟೆಂಬರ್ 4

ಶನಿವಾರ ಅಶ್ವತ್ಥ ಮರಕ್ಕೆ ಪೂಜೆ
ಅಶ್ವತ್ಥ ಮರದಲ್ಲಿ ಲಕ್ಷ್ಮಿ, ವಿಷ್ಣು ವಾಸ ಮಾಡುತ್ತಾರೆ ಎಂದು ಹೇಳಲಾಗುವುದು. ಅಶ್ವತ್ಥ ಮರವನ್ನು ಶ್ರೀ ಕೃಷ್ಣನನ್ನು ತನ್ನದೇ ರೂಪವೆಂದು ವಿವರಿಸಿದ್ದಾನೆ.
ಅಶ್ವತ್ಥ ಮರಕ್ಕೆ ನೀರನ್ನು ಹಾಕಿ ಪ್ರದರ್ಶಣೆ ಬಂದು ಪೂಜೆ ಮಾಡಬೇಕು, ನಂತರ ನೈವೇದ್ಯ ಅರ್ಪಿಸಬೇಕು. ಪೂಜೆ ಸಲ್ಲಿಸುವಾಗ ಲಕ್ಷ್ಮಿ ಹಾಗೂ ವಿಷ್ಣು ಮಂತ್ರ ಪಠಿಸಿ
ಲಕ್ಷ್ಮಿ ಮಂತ್ರ
"ಓಂ ಶ್ರೀಮ್ ಮಹಾ ಲಕ್ಷ್ಮೀಯೇಯ್ ನಮಃ"
"ಓಂ ಹ್ರೀಮ್ ಶ್ರೀಮ್ ಕ್ಲೀಮ್ ಮಹಾಲಕ್ಷ್ಮಿ ನಮಃ"
" ಓಂ ಶ್ರೀಮ್ ಶ್ರೀ-ಆಯ್ ನಮಃ "
" ಓಂ ಮಹಾ ದೇವಿಚ ವಿದ್ಮಾಯ್; ವಿಷ್ಣು ಪ್ರತಿಚಾ ದೇಮಹಿ; ಥನ್ನೋ ಲಕ್ಷ್ಮಿ ಪ್ರಚೋದಯತ್"
ವಿಷ್ಣು ಮೂಲ ಮಂತ್ರ:
ಓಂ ನಮೋ ನಾರಾಯಣಾಯ

ಶನಿ ದೇವನ ಆರಾಧನೆ
ಶನಿ ದೋಷ ನಿವಾರಣೆಗೆ ಶನಿವಾರದಂದು ಶನಿ ದೇವನನ್ನು ಆರಾಧನೆ ಮಾಡಬೇಕು. ಶನಿಗೆ ಎಳ್ಳೆಣ್ಣೆ ಅರ್ಪಿಸಿ, ಶನಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಬೇಕು. ಈ ದಿನ ವ್ರತ ನಿಯಮಗಳನ್ನು ಪಾಲಿಸಿ ಪೂಜೆ ಮಾಡುವುದರಿಂದ ಕಷ್ಟಗಳು ದೂರವಾಗುವುದು.
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿವಾರ ವೆಂಕಟೇಶ್ವರ ಸ್ವಾಮಿಯ ಆರಾಧನೆ
ಶನಿವಾರ ವೆಂಕಟೇಶ್ವರ ಸ್ವಾಮಿಯ ಆರಾಧನೆ ಮಾಡಲಾಗುವುದು. ವೆಂಕಟೇಶ್ವರ ಕೃಪೆಯಿಂದ ಸಂಪತ್ತು ವೃದ್ಧಿಯಾಗುವುದು.

ಓಂ ಶ್ರೀ ವೆಂಕಟೇಶ್ವರಾಯ ನಮಃ |
ಓಂ ಲಕ್ಷ್ಮೀಪತಯೇ ನಮಃ |
ಓಂ ವರಪ್ರದಾಯ ನಮಃ |
ಎಂದು ಪಠಿಸುತ್ತಾ ಪೂಜೆ ಸಲ್ಲಿಸಿ.
ಹೀಗೆ ಶ್ರಾವಣ ಶನಿವಾರ ಪೂಜೆಗೆ ತುಂಬಾ ಶ್ರೇಷ್ಠವಾದ ದಿನವಾಗಿದೆ. ಈ ಶ್ರಾವಣ ಮಾಸದಲ್ಲಿ ಸಲ್ಲಿಸುವ ಪೂಜೆಗೆ ವಿಶೇಷ ಫಲವಿದೆ ಎಂದು ಹೇಳಲಾಗುವುದು.



Click it and Unblock the Notifications