Just In
- 3 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 3 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 4 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 5 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರಾವಣ ಮಾಸದಲ್ಲಿ ನಾನ್ವೆಜ್ ತಿನ್ನಲೇಬಾರದು ಎಂಬುವುದರ ಹಿಂದಿದೆ ಈ ಧಾರ್ಮಿಕ, ವೈಜ್ಞಾನಿಕ ಕಾರಣಗಳು
ಕನ್ನಡ ಶ್ರಾವಣ ಮಾಸ ಜುಲೈ 29ಕ್ಕೆ ಪ್ರಾರಂಭವಾಗಿದೆ. ಶ್ರಾವಣ ಮಾಸವೆಂದರೆ ಅದು ಹಬ್ಬಗಳ ಮಾಸ, ಹೌದು ಶ್ರಾವಣ ಮಾಸದ ಬಹುತೇಕ ದಿನಗಳು ವಿಶೇಷತೆಯಿಂದ ಕೂಡಿರುತ್ತೆ. ಶ್ರಾವಣ ಸೋಮವಾರ, ಮಂಗಳ ಗೌರಿ ವ್ರತ, ವರಮಹಾಲಕ್ಷ್ಮಿ ಪೂಜೆ ಹೀಗೆ ಹಲವಾರು ಹಬ್ಬಗಳು ಈ ತಿಂಗಳಿನಲ್ಲಿದೆ.
ಶ್ರಾವಣ ಮಾಸದ ಆಹಾರ ಪದ್ಧತಿಯಲ್ಲೂ ಕೆಲವೊಂದು ನಿಯಮಗಳಿವೆ. ಈ ತಿಂಗಳಿನಲ್ಲಿ ಮಾಂಸಾಹಾರ ಸೇವನೆ ಮಾಡಬಾರದು ಎಮಬ ನಿಯಮವಿದೆ, ಈ ತಿಂಗಳಿನಲ್ಲಿ ಕಡ್ಡಾಯವಾಗಿ ಸಸ್ಯಾಹಾರ ಮಾತ್ರ ಸೇವಿಸಬೇಕು ಎಂದು ಹೇಳಲಾಗುವುದು, ಆದ್ದರಿಂದ ಶ್ರಾವಣ ಮಾಸದ ವ್ರತ ನಿಯಮಗಳನ್ನು ಪಾಲಿಸುವವರು ಸಸ್ಯಾಹಾರ ಮಾತ್ರ ಸೇವಿಸುತ್ತಾರೆ.
ಶ್ರಾವಣ ಮಾಸದಲ್ಲಿ ಸಸ್ಯಾಹಾರ ಮಾತ್ರ ಏಕೆ ಸೇವಿಸಬೇಕು ಎಂಬುವುದಕ್ಕೆ ಕೆಲವೊಂದು ಕಾರಣಗಳಿವೆ, ಇದರ ಹಿಂದೆ ಧಾರ್ಮಿಕ ಕಾರಣಗಳು ಮಾತ್ರವಲ್ಲ, ವೈಜ್ಞಾನಿಕ ಕಾರಣವೂ ಇದೆ. ಅವು ಏನೆಂದು ತಿಳಿಯೋಣ ಬನ್ನಿ:
ಧಾರ್ಮಿಕ ಕಾರಣಗಳು
ಹಿಂದೂ ಧರ್ಮದ ಬಹುತೇಕ ಪೂಜೆ, ಹಬ್ಬಗಳಲ್ಲಿ ಮಾಂಸಾಹಾರ ಸೇವನೆ ನಿರ್ಬಂಧವಾಗಿದೆ. ದೇವರಿಗೆ ಸಾತ್ವಿಕ ಆಹಾರವನ್ನಷ್ಟೇ ಅರ್ಪಿಸಲಾಗುವುದು, ಈ ತಿಂಗಳಿನಲ್ಲಿ ನಾಗರ ಪಂಚಮಿ, ಕೃಷ್ಣ ಜ್ನಮಾಷ್ಟಮಿ, ರಕ್ಷಾ ಬಂಧನ, ವರ ಮಹಾಲಕ್ಷ್ಮಿ ಹೀಗೆ ಅನೇಕ ಹಬ್ಬಗಳಿವೆ, ಈ ಕಾರಣದಿಂದಾಗಿ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಮಾಡುವುದು ತರವಲ್ಲ.
ವೈಜ್ಞಾನಿಕ ಕಾರಣಗಳು
ಈ ತಿಂಗಳಿನಲ್ಲಿ ಸೂರ್ಯನ ಕಿರಣಗಳು ಮೈ ಮೇಲೆ ಬೀಳುವುದು ಕಡಿಮೆ, ಇದರಿಂದ ನಮ್ಮ ಜೀರ್ಣಕ್ರಿಯೆ ದುರ್ಬಲವಾಗಿರುತ್ತೆ, ಆದ್ದರಿಂದ ಮಾಂಸಾಹಾರ ಸೇವನೆ ಮಾಡಿದಾಗ ಜೀರ್ಣಕ್ರಿಯೆಗೆ ಕಷ್ಟವಾಗುವುದು, ಇದರಿಂದಾಗಿ ಶ್ರಾವಣ ಮಾಸದಲ್ಲಿ ಲಘು ಆಹಾರ ಸೇವನೆ ಒಳ್ಳೆಯದು. ಅಲ್ಲದೆ ಪ್ರಾಣಿಗಳ ಮಾಂಸದಲ್ಲಿ ಈ ಸಮಯದಲ್ಲಿ ಬ್ಯಾಕ್ಟಿರಿಯಾ, ವೈರಸ್ ಸೇರಿಕೊಳ್ಳುವ ಸಾಧ್ಯತೆ ಹೆಚ್ಚು, ಇಂಥ ಆಹಾರ ಸೇವನೆ ಮಾಡಿದಾಗ ಅನಾರೋಗ್ಯ ಉಂಟಾಗುವುದು. ಇದರಿಂದ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಒಳ್ಳೆಯದಲ್ಲ.
ಇತರ ಕಾರಣಗಳು
ಇನ್ನು ಮಳೆಗಾಲದಲ್ಲಿ ಮೀನು ಮತ್ತಿತರ ಜಲಚರಗಳು ಹಾಗೂ ಪ್ರಾಣಿಗಳು ಸಂತಾನೋತ್ಪತ್ತಿ ಮಾಡುವ ಸಮಯ. ಅವುಗಳನ್ನು ಈ ಸಮಯದಲ್ಲಿ ಹಿಡಿದು ತಿಂದರೆ ಸಂತಿತಿ ಕಡಿಮೆಯಾಗುವುದು, ಇದರಿಂದ ಪ್ರಕೃತಿಯಲ್ಲಿ ಅಸಮತೋಲನವಾಗುವುದು. ಈ ಕಾರಣದಿಂದ ಕೂಡ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಒಳ್ಳೆಯದಲ್ಲ ಎಂದು ಹೇಳಲಾಗುವುದು.