Latest Updates
-
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ?
ಶ್ರಾವಣ ಮಾಸದಲ್ಲಿ ನಾನ್ವೆಜ್ ತಿನ್ನಲೇಬಾರದು ಎಂಬುವುದರ ಹಿಂದಿದೆ ಈ ಧಾರ್ಮಿಕ, ವೈಜ್ಞಾನಿಕ ಕಾರಣಗಳು
ಕನ್ನಡ ಶ್ರಾವಣ ಮಾಸ ಜುಲೈ 29ಕ್ಕೆ ಪ್ರಾರಂಭವಾಗಿದೆ. ಶ್ರಾವಣ ಮಾಸವೆಂದರೆ ಅದು ಹಬ್ಬಗಳ ಮಾಸ, ಹೌದು ಶ್ರಾವಣ ಮಾಸದ ಬಹುತೇಕ ದಿನಗಳು ವಿಶೇಷತೆಯಿಂದ ಕೂಡಿರುತ್ತೆ. ಶ್ರಾವಣ ಸೋಮವಾರ, ಮಂಗಳ ಗೌರಿ ವ್ರತ, ವರಮಹಾಲಕ್ಷ್ಮಿ ಪೂಜೆ ಹೀಗೆ ಹಲವಾರು ಹಬ್ಬಗಳು ಈ ತಿಂಗಳಿನಲ್ಲಿದೆ.

ಶ್ರಾವಣ ಮಾಸದ ಆಹಾರ ಪದ್ಧತಿಯಲ್ಲೂ ಕೆಲವೊಂದು ನಿಯಮಗಳಿವೆ. ಈ ತಿಂಗಳಿನಲ್ಲಿ ಮಾಂಸಾಹಾರ ಸೇವನೆ ಮಾಡಬಾರದು ಎಮಬ ನಿಯಮವಿದೆ, ಈ ತಿಂಗಳಿನಲ್ಲಿ ಕಡ್ಡಾಯವಾಗಿ ಸಸ್ಯಾಹಾರ ಮಾತ್ರ ಸೇವಿಸಬೇಕು ಎಂದು ಹೇಳಲಾಗುವುದು, ಆದ್ದರಿಂದ ಶ್ರಾವಣ ಮಾಸದ ವ್ರತ ನಿಯಮಗಳನ್ನು ಪಾಲಿಸುವವರು ಸಸ್ಯಾಹಾರ ಮಾತ್ರ ಸೇವಿಸುತ್ತಾರೆ.
ಶ್ರಾವಣ ಮಾಸದಲ್ಲಿ ಸಸ್ಯಾಹಾರ ಮಾತ್ರ ಏಕೆ ಸೇವಿಸಬೇಕು ಎಂಬುವುದಕ್ಕೆ ಕೆಲವೊಂದು ಕಾರಣಗಳಿವೆ, ಇದರ ಹಿಂದೆ ಧಾರ್ಮಿಕ ಕಾರಣಗಳು ಮಾತ್ರವಲ್ಲ, ವೈಜ್ಞಾನಿಕ ಕಾರಣವೂ ಇದೆ. ಅವು ಏನೆಂದು ತಿಳಿಯೋಣ ಬನ್ನಿ:

ಧಾರ್ಮಿಕ ಕಾರಣಗಳು
ಹಿಂದೂ ಧರ್ಮದ ಬಹುತೇಕ ಪೂಜೆ, ಹಬ್ಬಗಳಲ್ಲಿ ಮಾಂಸಾಹಾರ ಸೇವನೆ ನಿರ್ಬಂಧವಾಗಿದೆ. ದೇವರಿಗೆ ಸಾತ್ವಿಕ ಆಹಾರವನ್ನಷ್ಟೇ ಅರ್ಪಿಸಲಾಗುವುದು, ಈ ತಿಂಗಳಿನಲ್ಲಿ ನಾಗರ ಪಂಚಮಿ, ಕೃಷ್ಣ ಜ್ನಮಾಷ್ಟಮಿ, ರಕ್ಷಾ ಬಂಧನ, ವರ ಮಹಾಲಕ್ಷ್ಮಿ ಹೀಗೆ ಅನೇಕ ಹಬ್ಬಗಳಿವೆ, ಈ ಕಾರಣದಿಂದಾಗಿ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಮಾಡುವುದು ತರವಲ್ಲ.

ವೈಜ್ಞಾನಿಕ ಕಾರಣಗಳು
ಈ ತಿಂಗಳಿನಲ್ಲಿ ಸೂರ್ಯನ ಕಿರಣಗಳು ಮೈ ಮೇಲೆ ಬೀಳುವುದು ಕಡಿಮೆ, ಇದರಿಂದ ನಮ್ಮ ಜೀರ್ಣಕ್ರಿಯೆ ದುರ್ಬಲವಾಗಿರುತ್ತೆ, ಆದ್ದರಿಂದ ಮಾಂಸಾಹಾರ ಸೇವನೆ ಮಾಡಿದಾಗ ಜೀರ್ಣಕ್ರಿಯೆಗೆ ಕಷ್ಟವಾಗುವುದು, ಇದರಿಂದಾಗಿ ಶ್ರಾವಣ ಮಾಸದಲ್ಲಿ ಲಘು ಆಹಾರ ಸೇವನೆ ಒಳ್ಳೆಯದು. ಅಲ್ಲದೆ ಪ್ರಾಣಿಗಳ ಮಾಂಸದಲ್ಲಿ ಈ ಸಮಯದಲ್ಲಿ ಬ್ಯಾಕ್ಟಿರಿಯಾ, ವೈರಸ್ ಸೇರಿಕೊಳ್ಳುವ ಸಾಧ್ಯತೆ ಹೆಚ್ಚು, ಇಂಥ ಆಹಾರ ಸೇವನೆ ಮಾಡಿದಾಗ ಅನಾರೋಗ್ಯ ಉಂಟಾಗುವುದು. ಇದರಿಂದ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಒಳ್ಳೆಯದಲ್ಲ.

ಇತರ ಕಾರಣಗಳು
ಇನ್ನು ಮಳೆಗಾಲದಲ್ಲಿ ಮೀನು ಮತ್ತಿತರ ಜಲಚರಗಳು ಹಾಗೂ ಪ್ರಾಣಿಗಳು ಸಂತಾನೋತ್ಪತ್ತಿ ಮಾಡುವ ಸಮಯ. ಅವುಗಳನ್ನು ಈ ಸಮಯದಲ್ಲಿ ಹಿಡಿದು ತಿಂದರೆ ಸಂತಿತಿ ಕಡಿಮೆಯಾಗುವುದು, ಇದರಿಂದ ಪ್ರಕೃತಿಯಲ್ಲಿ ಅಸಮತೋಲನವಾಗುವುದು. ಈ ಕಾರಣದಿಂದ ಕೂಡ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಒಳ್ಳೆಯದಲ್ಲ ಎಂದು ಹೇಳಲಾಗುವುದು.



Click it and Unblock the Notifications











