Latest Updates
-
ತೀವ್ರ ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಆರೋಗ್ಯವಾಗಿರಲು ಈ ಸುರಕ್ಷತಾ ಕ್ರಮಗಳನ್ನು ಮಿಸ್ ಮಾಡ್ಬೇಡಿ! -
ಲಿವ್-ಇನ್ ಸಂಬಂಧದಲ್ಲಿರುವ ಯುವ ಜೋಡಿಗಳಿಗೆ ಶಾಕ್: ಹೈಕೋರ್ಟ್ನಿಂದ ಹೊಸ ಆದೇಶ, ಇನ್ನು ರಕ್ಷಣೆ ಸಿಗಲ್ಲ! -
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಅಡುಗೆ ಮನೆಯಲ್ಲಿರುವ ಈ ಪದಾರ್ಥಗಳೇ ಸಾಕು, ಇಂದೇ ಟ್ರೈ ಮಾಡಿ! -
ಕಾನ್ 2026 ರೆಡ್ ಕಾರ್ಪೆಟ್ನಲ್ಲಿ ಭಾರತೀಯ ತಾರೆಯರ ಮಿಂಚಿನ ಸಂಚಲನ: ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ!
ಶ್ರಾವಣ ಮಾಸದಲ್ಲಿ ನಾನ್ವೆಜ್ ತಿನ್ನಲೇಬಾರದು ಎಂಬುವುದರ ಹಿಂದಿದೆ ಈ ಧಾರ್ಮಿಕ, ವೈಜ್ಞಾನಿಕ ಕಾರಣಗಳು
ಕನ್ನಡ ಶ್ರಾವಣ ಮಾಸ ಜುಲೈ 29ಕ್ಕೆ ಪ್ರಾರಂಭವಾಗಿದೆ. ಶ್ರಾವಣ ಮಾಸವೆಂದರೆ ಅದು ಹಬ್ಬಗಳ ಮಾಸ, ಹೌದು ಶ್ರಾವಣ ಮಾಸದ ಬಹುತೇಕ ದಿನಗಳು ವಿಶೇಷತೆಯಿಂದ ಕೂಡಿರುತ್ತೆ. ಶ್ರಾವಣ ಸೋಮವಾರ, ಮಂಗಳ ಗೌರಿ ವ್ರತ, ವರಮಹಾಲಕ್ಷ್ಮಿ ಪೂಜೆ ಹೀಗೆ ಹಲವಾರು ಹಬ್ಬಗಳು ಈ ತಿಂಗಳಿನಲ್ಲಿದೆ.

ಶ್ರಾವಣ ಮಾಸದ ಆಹಾರ ಪದ್ಧತಿಯಲ್ಲೂ ಕೆಲವೊಂದು ನಿಯಮಗಳಿವೆ. ಈ ತಿಂಗಳಿನಲ್ಲಿ ಮಾಂಸಾಹಾರ ಸೇವನೆ ಮಾಡಬಾರದು ಎಮಬ ನಿಯಮವಿದೆ, ಈ ತಿಂಗಳಿನಲ್ಲಿ ಕಡ್ಡಾಯವಾಗಿ ಸಸ್ಯಾಹಾರ ಮಾತ್ರ ಸೇವಿಸಬೇಕು ಎಂದು ಹೇಳಲಾಗುವುದು, ಆದ್ದರಿಂದ ಶ್ರಾವಣ ಮಾಸದ ವ್ರತ ನಿಯಮಗಳನ್ನು ಪಾಲಿಸುವವರು ಸಸ್ಯಾಹಾರ ಮಾತ್ರ ಸೇವಿಸುತ್ತಾರೆ.
ಶ್ರಾವಣ ಮಾಸದಲ್ಲಿ ಸಸ್ಯಾಹಾರ ಮಾತ್ರ ಏಕೆ ಸೇವಿಸಬೇಕು ಎಂಬುವುದಕ್ಕೆ ಕೆಲವೊಂದು ಕಾರಣಗಳಿವೆ, ಇದರ ಹಿಂದೆ ಧಾರ್ಮಿಕ ಕಾರಣಗಳು ಮಾತ್ರವಲ್ಲ, ವೈಜ್ಞಾನಿಕ ಕಾರಣವೂ ಇದೆ. ಅವು ಏನೆಂದು ತಿಳಿಯೋಣ ಬನ್ನಿ:

ಧಾರ್ಮಿಕ ಕಾರಣಗಳು
ಹಿಂದೂ ಧರ್ಮದ ಬಹುತೇಕ ಪೂಜೆ, ಹಬ್ಬಗಳಲ್ಲಿ ಮಾಂಸಾಹಾರ ಸೇವನೆ ನಿರ್ಬಂಧವಾಗಿದೆ. ದೇವರಿಗೆ ಸಾತ್ವಿಕ ಆಹಾರವನ್ನಷ್ಟೇ ಅರ್ಪಿಸಲಾಗುವುದು, ಈ ತಿಂಗಳಿನಲ್ಲಿ ನಾಗರ ಪಂಚಮಿ, ಕೃಷ್ಣ ಜ್ನಮಾಷ್ಟಮಿ, ರಕ್ಷಾ ಬಂಧನ, ವರ ಮಹಾಲಕ್ಷ್ಮಿ ಹೀಗೆ ಅನೇಕ ಹಬ್ಬಗಳಿವೆ, ಈ ಕಾರಣದಿಂದಾಗಿ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಮಾಡುವುದು ತರವಲ್ಲ.

ವೈಜ್ಞಾನಿಕ ಕಾರಣಗಳು
ಈ ತಿಂಗಳಿನಲ್ಲಿ ಸೂರ್ಯನ ಕಿರಣಗಳು ಮೈ ಮೇಲೆ ಬೀಳುವುದು ಕಡಿಮೆ, ಇದರಿಂದ ನಮ್ಮ ಜೀರ್ಣಕ್ರಿಯೆ ದುರ್ಬಲವಾಗಿರುತ್ತೆ, ಆದ್ದರಿಂದ ಮಾಂಸಾಹಾರ ಸೇವನೆ ಮಾಡಿದಾಗ ಜೀರ್ಣಕ್ರಿಯೆಗೆ ಕಷ್ಟವಾಗುವುದು, ಇದರಿಂದಾಗಿ ಶ್ರಾವಣ ಮಾಸದಲ್ಲಿ ಲಘು ಆಹಾರ ಸೇವನೆ ಒಳ್ಳೆಯದು. ಅಲ್ಲದೆ ಪ್ರಾಣಿಗಳ ಮಾಂಸದಲ್ಲಿ ಈ ಸಮಯದಲ್ಲಿ ಬ್ಯಾಕ್ಟಿರಿಯಾ, ವೈರಸ್ ಸೇರಿಕೊಳ್ಳುವ ಸಾಧ್ಯತೆ ಹೆಚ್ಚು, ಇಂಥ ಆಹಾರ ಸೇವನೆ ಮಾಡಿದಾಗ ಅನಾರೋಗ್ಯ ಉಂಟಾಗುವುದು. ಇದರಿಂದ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಒಳ್ಳೆಯದಲ್ಲ.

ಇತರ ಕಾರಣಗಳು
ಇನ್ನು ಮಳೆಗಾಲದಲ್ಲಿ ಮೀನು ಮತ್ತಿತರ ಜಲಚರಗಳು ಹಾಗೂ ಪ್ರಾಣಿಗಳು ಸಂತಾನೋತ್ಪತ್ತಿ ಮಾಡುವ ಸಮಯ. ಅವುಗಳನ್ನು ಈ ಸಮಯದಲ್ಲಿ ಹಿಡಿದು ತಿಂದರೆ ಸಂತಿತಿ ಕಡಿಮೆಯಾಗುವುದು, ಇದರಿಂದ ಪ್ರಕೃತಿಯಲ್ಲಿ ಅಸಮತೋಲನವಾಗುವುದು. ಈ ಕಾರಣದಿಂದ ಕೂಡ ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಒಳ್ಳೆಯದಲ್ಲ ಎಂದು ಹೇಳಲಾಗುವುದು.



Click it and Unblock the Notifications