Just In
- 35 min ago ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- 1 hr ago ವೃಷಭ ರಾಶಿಗೆ ಗುರು ಸಂಚಾರ: 11ನೇ ಮನೆಯಲ್ಲಿ ಗುರು ಕರ್ಕ ರಾಶಿಯವರಿಗೆ ಅದೃಷ್ಟವೋ ಅದೃಷ್ಟ
- 3 hrs ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 4 hrs ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
Don't Miss
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಾವಳಿಯಂದು ಬೆಳಗಿಸುವ ದೀಪಗಳಿಗೇಕೆ ಹೆಚ್ಚು ಪ್ರಾಶಸ್ತ್ಯ
ದೀಪಗಳ, ಬೆಳಕಿನ ಹಬ್ಬವಾದ ದೀಪಾವಳಿ ಅಥವಾ ದಿವಾಳಿಯು ಸ೦ತೋಷದ, ಸ೦ಭ್ರಮಾಚರಣೆಯ, ಸಡಗರದ ಸ೦ದರ್ಭವಾಗಿದೆ. ಮಾತ್ರವಲ್ಲ, ಈ ಹಬ್ಬವು ಎಲ್ಲೆ ಮೀರಿದ ಉತ್ಸಾಹ, ಉಲ್ಲಾಸ ಹಾಗೂ ವಿಶ್ವ ಭ್ರಾತೃತ್ವವನ್ನು ಸಾರುವ ಸ೦ದರ್ಭವೂ ಕೂಡ ಹೌದು....
ಹಿಂದೂ ಧರ್ಮದಲ್ಲಿ ದೀಪಗಳ ಹಬ್ಬ ದೀಪಾವಳಿಗೆ ಹೆಚ್ಚಿನ ಸ್ಥಾನಮಾನವಿದೆ. ಅಕ್ಟೋಬರ್ ಇಲ್ಲವೇ ನವೆಂಬರ್ ಮಾಸದಲ್ಲಿ ಬರುವ ಈ ಹಬ್ಬ ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನದ ಜ್ಯೋತಿಯನ್ನು ನಮ್ಮ ಮನೆ ಮನದಲ್ಲಿ ಪಸರಿಸುತ್ತದೆ. ದೀಪಾವಳಿ ಅಂದರೆ 'ದೀಪಗಳ ಸಾಲು" ಎಂದರ್ಥ. ಆದ್ದರಿಂದ ದೀಪಗಳು ಈ ಹಬ್ಬದ ಸಮಯದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸಿಕೊಳ್ಳುತ್ತದೆ.
ದೀಪಾವಳಿ ಸಮಯದಲ್ಲಿ ಪ್ರತಿ ಮನೆಯಲ್ಲಿ ಎಣ್ಣೆ ದೀಪಗಳು, ಮೇಣದ ಬತ್ತಿಗಳು ಮತ್ತು ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಹಚ್ಚಿ ಅಲಂಕರಿಸುತ್ತಾರೆ. ಸಾಮಾನ್ಯವಾಗಿ ಪ್ರತಿಯೊಂದು ಮನೆಗಳಲ್ಲೂ ದೀಪಾವಳಿ ಹಬ್ಬದಂದು ಮಣ್ಣಿನ ಹಣತೆ, ಗೂಡುದೀಪ, ಇಲೆಕ್ಟ್ರಿಕ್ ಬಲ್ಬ್ಗಳ ಸಂಭ್ರಮ ಇದ್ದೇ ಇರುತ್ತದೆ.
ಅದಾಗ್ಯೂ ಮಣ್ಣಿನ ಹಣತೆ ಹಚ್ಚಿಡುವುದೇ ಶುಭ ದೀಪಾವಳಿಯ ಸಂಕೇತವಾಗಿದೆ. ದೀಪಗಳನ್ನು ಹಚ್ಚಿಟ್ಟುಕೊಂಡೇ ದೀಪಾವಳಿಯನ್ನು ಏಕೆ ಆಚರಿಸಬೇಕು ಎಂಬುದು ನಿಮ್ಮ ಮನದಲ್ಲಿ ಮೂಡಿರುವ ಸಂದೇಹವಾಗಿದ್ದರೆ ಇಂದಿನ ಲೇಖನದಲ್ಲಿ ಇದರ ಇತಿಹಾಸವನ್ನು ನಿಮಗೆ ತಿಳಿಸಲಿದ್ದೇವೆ.
ದೀಪಗಳನ್ನು ಹಚ್ಚಿಡುವುದರ ಹಿಂದಿರುವ ದಂತಕಥೆ
ಭಾರತದ ಉತ್ತರ ಭಾಗದಲ್ಲಿ ದೀಪಗಳನ್ನು ಏಕೆ ಹಚ್ಚಿಡುತ್ತಾರೆ ಎಂಬುದಕ್ಕೆ ಇತಿಹಾಸವಿದ್ದು ರಾಮನು 14 ವರ್ಷಗಳ ಕಾಲ ವನವಾಸವನ್ನು ಮುಗಿಸಿಕೊಂಡು ತನ್ನ ಪತ್ನಿ ಮತ್ತು ತಮ್ಮನೊಂದಿಗೆ ಅಯೋಧ್ಯೆಗೆ ಮರಳುವ ಸಂಭ್ರಮಕ್ಕಾಗಿ ದೀಪಗಳನ್ನು ಹಚ್ಚಿ ಪ್ರಜೆಗಳು ಸ್ವಾಗತಿಸುತ್ತಾರೆ ಎಂಬುದಾಗಿ ತಿಳಿಸಲಾಗಿದೆ.
ಭಾರತದ ದಕ್ಷಿಣ ಭಾಗಗಳಲ್ಲಿ ನರಕಾಸುರನನ್ನು ದೇವಿಯು ವಧಿಸಿದ ದ್ಯೋತಕವಾಗಿ ವಿಜಯವನ್ನು ಆಚರಿಸಲು ನರಕ ಚತುರ್ದಶಿಯ ದಿನಂದು ದಕ್ಷಿಣ ಭಾಗದ ಜನರು ದೀಪಗಳನ್ನು ಹಚ್ಚಿಡುತ್ತಾರೆ. ಅಸುರೀ ಶಕ್ತಿಯ ವಿರುದ್ಧ ದೈವ ಬಲದ ವಿಜಯ ಎಂಬುದರ ದ್ಯೋತಕವಾಗಿ ದೀಪಗಳನ್ನು ಹಚ್ಚಿಟ್ಟು ಕತ್ತಲೆಯನ್ನು ದೂರಗೊಳಿಸುತ್ತಾರೆ. ದೀಪಾವಳಿ ವಿಶೇಷ: ನರಕ ಚತುರ್ದಶಿ ಹಬ್ಬದ ಹಿನ್ನೆಲೆ
ದೀಪಗಳನ್ನು ಹಚ್ಚುವುದರ ಮಹತ್ವ
ಹಿಂದೂ ಧರ್ಮದಲ್ಲಿ ದೀಪ ಒಂದು ಮಹತ್ವವುಳ್ಳ ವಿಷಯ ಯಾಕೆಂದರೆ ಅದು ಪವಿತ್ರತೆ, ಒಳ್ಳೆಯತನ ಮತ್ತು ಶಕ್ತಿ ಇವುಗಳ ಸಂಕೇತವಾಗಿದೆ. ಬೆಳಕಿದೆಯೆಂದರೆ ಕತ್ತಲೆ ಮತ್ತು ದುಷ್ಟ ಶಕ್ತಿಗಳ ಇರುವುದಿಲ್ಲ ಎನ್ನುವ ನಂಬಿಕೆ. ಅಮಾವಾಸ್ಯೆಯ ರಾತ್ರಿ ಎಲ್ಲೆಡೆಯಲ್ಲೂ ಸಂಪೂರ್ಣ ಕತ್ತಲೆ ಇರುವಾಗ ಜನರು ಲಕ್ಷಾಂತರ ದೀಪಗಳನ್ನು ಬೆಳಗಿ ಕತ್ತಲನ್ನು ತೊಡೆದುಹಾಕಲು ದೀಪಾವಳಿಯನ್ನು ಆಚರಿಸುತ್ತಾರೆ.
ದುಷ್ಟ ಶಕ್ತಿಗಳು ಮತ್ತು ಅವುಗಳ ಪಡೆಗಳು ಕತ್ತಲಲ್ಲಿ ಸಕ್ರಿಯವಾಗುತ್ತಾರೆಂಬ ನಂಬಿಕೆ ಜನರಿಗೆ ಇದೆ. ಆದ್ದರಿಂದ ದುಷ್ಟಶಕ್ತಿಗಳನ್ನು ದುರ್ಬಲಗೊಳಿಸಲು ಮನೆಯ ಪ್ರತಿಯೊಂದು ಮೂಲೆಯಲ್ಲೂ ದೀಪಗಳನ್ನು ಬೆಳಗುತ್ತಾರೆ. ವ್ಯಕ್ತಿಯ ಅಂತರಿಕ ಆಧ್ಯಾತ್ಮಿಕ ಬೆಳಕು ಹೊರಗೂ ಸೂಚಿಸಬೇಕೆಂಬ ಸಂದೇಶವನ್ನು ಸಾರಲು ಪ್ರತಿ ಮನೆಯ ಬಾಗಿಲ ಹೊರಗೆ ದೀಪಗಳನ್ನು ಬೆಳಗುತ್ತಾರೆ. ಈ ದೀಪಾವಳಿಗೆ 8 ಸೂಪರ್ ರಂಗೋಲಿ ಐಡಿಯಾ
ಒಂದು ದೀಪದಿಂದ ಹಲವಾರು ದೀಪಗಳನ್ನು ತನ್ನ ಬೆಳಕಿಗೆ ಧಕ್ಕೆಯಾಗದಂತೆ ಬೆಳಗಲು ಸಮರ್ಥವಾಗಿದೆ. ಆದ್ದರಿಂದ ದೀಪಾವಳಿಯ ಸಮಯದಲ್ಲಿ ದೀಪಗಳನ್ನು ಬೆಳಗುವುದು ಆಧ್ಯಾತ್ಮಿಕವಾಗಿ ಹಾಗೂ ಸಾಮಾಜಿಕವಾಗಿ ಎಲ್ಲಾ ಮನುಷ್ಯರಿಗೆ ಗಮನಾರ್ಹವಾಗಿ ಅನ್ವಯಿಸುತ್ತದೆ.