Just In
- 21 min ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 59 min ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- 2 hrs ago ದಿನ ಭವಿಷ್ಯ ಏಪ್ರಿಲ್ 20: ಶನಿವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
- 4 hrs ago ವೃಷಭ ರಾಶಿಗೆ ಗುರು ಸಂಚಾರ: 10ನೇ ಮನೆಯಲ್ಲಿ ಗುರು ಸಿಂಹ ರಾಶಿಯವರು ಆಸ್ತಿ ಖರೀದಿಸಬಹುದು
Don't Miss
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Movies Srirasthu shubhamasthu: ನಿಧಿ ಹುಡುಕಲು ಹೋದ ಸೊಸೆ ಮಾವನಿಗೆ ಸಿಕ್ಕಿದ್ದು ಬರೀ ಬೂದಿನಾ?
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಂದೂ ಧರ್ಮದಲ್ಲಿ ಅರಿಶಿನ ಹಾಗೂ ಕುಂಕುಮದ ಮಹತ್ವ
ಹಿಂದೂ ಧರ್ಮದಲ್ಲಿ ಕುಂಕುಮ ಮತ್ತು ಅರಿಶಿನಕ್ಕೆ ಪವಿತ್ರ ಸ್ಥಾನವಿದ್ದು ಯಾವುದೇ ಪೂಜೆ ಅಥವಾ ಇನ್ನಿತರ ಶುಭ ಸಮಾರಂಭಗಳಲ್ಲಿ ಇವುಗಳನ್ನು ವಿಶೇಷವಾಗಿ ಬಳಸಿಕೊಳ್ಳುತ್ತಾರೆ ಮತ್ತು ಪೂಜನೀಯ ಸ್ಥಾನವನ್ನು ನೀಡುತ್ತಾರೆ.
ಹಿಂದೂ ಧರ್ಮದಲ್ಲಿ ಕುಂಕುಮ ಮತ್ತು ಅರಿಶಿನಕ್ಕೆ ಪವಿತ್ರ ಸ್ಥಾನವಿದ್ದು ಯಾವುದೇ ಪೂಜೆ ಅಥವಾ ಇನ್ನಿತರ ಶುಭ ಸಮಾರಂಭಗಳಲ್ಲಿ ಇವುಗಳನ್ನು ವಿಶೇಷವಾಗಿ ಬಳಸಿಕೊಳ್ಳುತ್ತಾರೆ ಮತ್ತು ಪೂಜನೀಯ ಸ್ಥಾನವನ್ನು ನೀಡುತ್ತಾರೆ. ವಿವಾಹಿತ ಸ್ತ್ರೀಯರು ತಮ್ಮ ಕೆನ್ನೆಗೆ ಅರಿಶಿನವನ್ನು ಹಣೆಗೆ ಕುಂಕುಮದ ಸಿಂಧೂರವನ್ನಿಟ್ಟು ತಮ್ಮ ಮುತ್ತೈದೆತನವನ್ನು ಸಂಕೇತಿಸುತ್ತಾರೆ. ಹಿಂದೂ ಧರ್ಮದಲ್ಲಿ ಅಡಗಿರುವ 21 ವೈಜ್ಞಾನಿಕ ಸತ್ಯಗಳು
ಇದಿಷ್ಟೇ ಅಲ್ಲದೆ ಕುಂಕುಮ ಮತ್ತು ಅರಿಶಿನ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು ಇಂದಿನ ಲೇಖನದಲ್ಲಿ ಇವುಗಳ ವಿಶೇಷತೆಯ ಏನು ಎಂಬುದನ್ನು ಕಂಡುಕೊಳ್ಳೋಣ. ಅರಿಶಿನವು ಬರಿಯ ಅಲಂಕಾರಿಕ ಇಲ್ಲವೇ ಪೂಜನೀಯ ಸಾಮಾಗ್ರಿಯಾಗಿ ಹೆಸರು ಪಡೆದುಕೊಂಡಿರುವುದು ಮಾತ್ರವಲ್ಲದೆ ಆರೋಗ್ಯ ಕ್ಷೇತ್ರದಲ್ಲಿ ಕೂಡ ಅರಿಶಿನ ಗಣನೀಯ ಸ್ಥಾನವನ್ನು ಪಡೆದುಕೊಂಡಿದೆ. ಮನೆಮದ್ದಾಗಿ ಎಲ್ಲರ ಮನೆಯಲ್ಲೂ ಸ್ಥಾನವನ್ನು ಪಡೆದುಕೊಂಡಿರುವ ಅರಶಿನ ಒಂದು ರೀತಿಯಲ್ಲಿ ಸಂಜೀವಿನಿಯಾಗಿದೆ....
ಕುಂಕುಮ
ವಿವಾಹಿತ ಮಹಿಳೆಯರ ಗುರುತು: ಅನಾದಿ ಕಾಲದಿಂದಲೂ, ವಿವಾಹಿತ ಮಹಿಳೆಯರು ಕುಂಕುಮವನ್ನು ಸಿಂಧೂರ ಮತ್ತು ತಿಲಕದಂತೆ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಪತಿಯ ದೀರ್ಘಾಯುಷ್ಯದ ಸಂಕೇತವಾಗಿ ಇವರುಗಳು ಕುಂಕುಮದಿಂದ ಬೈತಲೆಯ ನಡುವೆ ಸಿಂಧೂರವನ್ನು ಹಚ್ಚಿಕೊಳ್ಳುತ್ತಾರೆ.
ಅರಿಶಿನ ಶುದ್ಧೀಕರಣದ ಸಂಕೇತ
ಹಿಂದೂ ವಿವಾಹ ಪದ್ಧತಿಗಳಲ್ಲಿ ಅರಿಶಿನ ಶಾಸ್ತ್ರ ಇದ್ದೇ ಇರುತ್ತದೆ. ಮದುಮಗಳಿಗೆ ಅರಶಿನದ ಮಿಶ್ರಣವನ್ನು ಹಚ್ಚುತ್ತಾರೆ. ವಿವಾಹದಂತಹ ಪರಿಶುದ್ಧ ಶಾಸ್ತ್ರದಲ್ಲಿ ಹುಡುಗಿಯನ್ನು ಎಲ್ಲಾ ಬಗೆಯಲ್ಲೂ ಪುನೀತಳನ್ನಾಗಿ ಮಾಡಲು ಅರಿಶಿನ ಶಾಸ್ತ್ರವನ್ನು ಇಟ್ಟುಕೊಳ್ಳುತ್ತಾರೆ.ಚಿನ್ನದ ದೇವತೆ ಅರಿಶಿನದ ಚಿನ್ನದಂತಹ ಗುಣಗಳು
ಕುಂಕುಮದ ಮಹತ್ವ
ಹಿಂದೂ ಶಾಸ್ತ್ರಗಳು ಹೇಳುವಂತೆ, ಸೌಭಾಗ್ಯ ಮತ್ತು ಅದೃಷ್ಟದ ಸಂಕೇತವಾಗಿ ಕುಂಕುವನ್ನು ಕಾಣಲಾಗುತ್ತದೆ. ಹಣೆಯನ್ನು ಮೇಷ ರಾಶಿಯ ಸ್ಥಾನವಾಗಿ ಹೇಳಲಾಗಿದ್ದು ಮೇಷ ರಾಶಿಯ ದೇವನು ಮಂಗಳನಾಗಿದ್ದಾನೆ. ಆದ್ದರಿಂದಲೇ ಅದೃಷ್ಟವನ್ನು ತರುತ್ತದೆ ಎಂಬ ಕಾರಣಕ್ಕಾಗಿ ವಿವಾಹಿತ ಸ್ತ್ರೀಯರು ತಮ್ಮ ಹಣೆಯನ್ನು ಕುಂಕುಮದಿಂದ ಅಲಂಕರಿಸಿಕೊಳ್ಳುತ್ತಾರೆ.
ಕುಂಕುಮ ಮಹಿಳೆಯರ ಶಕ್ತಿಯ ಸಂಕೇತ
ವಿದ್ವಾನರ ಪ್ರಕಾರ, ಕೆಂಪು ಶಕ್ತಿ ಮತ್ತು ಬಲದ ಸಂಕೇತವಾಗಿದೆ. ಪಾರ್ವತಿ ಮತ್ತು ಸತಿ ದೇವಿಯ ಶಕ್ತಿಗೆ ಸಮನಾಗಿ ಇದನ್ನು ಹೋಲಿಸಲಾಗುತ್ತದೆ. ಹಿಂದೂ ಶಾಸ್ತ್ರಗಳ ಪ್ರಕಾರ, ಸತಿಯು ತನ್ನ ಪತಿಗಾಗಿ ತನ್ನ ಪ್ರಾಣವನ್ನೇ ಅರ್ಪಿಸುತ್ತಾಳೆ. ಅದೇ ರೀತಿಯಲ್ಲಿ ಪ್ರತಿಯೊಬ್ಬ ಪತ್ನಿ ಕೂಡ ತನ್ನ ಪತಿಗಾಗಿ ನಿಷ್ಟತೆಯನ್ನು ತೋರ್ಪಡಿಸಬೇಕು ಮತ್ತು ತನ್ನ ಭಕ್ತಿಯನ್ನು ಆತನ ಪ್ರತಿಯಾಗಿ ತೋರಬೇಕು ಎಂದಾಗಿದೆ. ಸಂಸ್ಕೃತಿಯ ಪ್ರತೀಕ -ಹಣೆಯ ಮೇಲಿನ ಪುಟ್ಟ ಸಿಂಧೂರ
ಅರಿಶಿನ ಹಲವು ಅಂಶಗಳ ಸಂಕೇತ
ಜನಪ್ರಿಯ ನಂಬುಗೆಯ ಪ್ರಕಾರ, ಅರಿಶಿನವು ಸೂರ್ಯ, ಅದೃಷ್ಟ ಫಲವತ್ತತೆಯ ಸಂಕೇತವಾಗಿದೆ. ಮನುಷ್ಯರ ಆಂತರಿಕ ಶಕ್ತಿಯನ್ನು ಇದು ಪ್ರತಿಪಾದಿಸುತ್ತದೆ ಮತ್ತು ಏಳಿಗೆಯನ್ನು ಎತ್ತಿಹಿಡಿಯುತ್ತದೆ. ಆದ್ದರಿಂದಲೇ ಪವಿತ್ರ ಪೂಜಾ ಸಮಯಗಳಲ್ಲಿ ಅರಿಶಿನವನ್ನು ಬಳಸುತ್ತಾರೆ.
ಕುಂಕುಮದ ಮಹತ್ವ
ಹಿಂದೂ ಶಾಸ್ತ್ರಗಳು ಹೇಳುವಂತೆ, ಸೌಭಾಗ್ಯ ಮತ್ತು ಅದೃಷ್ಟದ ಸಂಕೇತವಾಗಿ ಕುಂಕುವನ್ನು ಕಾಣಲಾಗುತ್ತದೆ. ಹಣೆಯನ್ನು ಮೇಷ ರಾಶಿಯ ಸ್ಥಾನವಾಗಿ ಹೇಳಲಾಗಿದ್ದು ಮೇಷ ರಾಶಿಯ ದೇವನು ಮಂಗಳನಾಗಿದ್ದಾನೆ. ಆದ್ದರಿಂದಲೇ ಅದೃಷ್ಟವನ್ನು ತರುತ್ತದೆ ಎಂಬ ಕಾರಣಕ್ಕಾಗಿ ವಿವಾಹಿತ ಸ್ತ್ರೀಯರು ತಮ್ಮ ಹಣೆಯನ್ನು ಕುಂಕುಮದಿಂದ ಅಲಂಕರಿಸಿಕೊಳ್ಳುತ್ತಾರೆ.
ಅರಿಶಿನದ ಬಣ್ಣದ ಮಹತ್ವ
ಅರಿಶಿನವು ಹಳದಿ ಮತ್ತು ಕಿತ್ತಳೆ ಬಣ್ಣದಲ್ಲಿ ಲಭ್ಯವಿದೆ. ಈ ಎರಡೂ ಬಣ್ಣಗಳು ಕೂಡ ತಮ್ಮದೇ ಆದ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ಹಳದಿ ಬಣ್ಣವು ಕನ್ಯತ್ವ ಹಾಗೂ ಇಂದ್ರಿಯ ನಿಗ್ರಹದ ದ್ಯೋತಕವಾಗಿದ್ದರೆ ಕಿತ್ತಳೆ ಬಣ್ಣವು ಸೂರ್ಯ, ಧೈರ್ಯ ಮತ್ತು ತ್ಯಾಗದ ಸಂಕೇತವಾಗಿದೆ.
ಕುಂಕುಮದ ಪೌರಾಣಿಕ ಮಹತ್ವ
ಕುಂಕುಮವನ್ನು ಅರಿಶಿನ ಮತ್ತು ಪ್ರಮುಖ ವಸ್ತುಗಳಿಂದ ಸಿದ್ಧಪಡಿಸಲಾಗಿದೆ. ಅನಾದಿ ಕಾಲದಲ್ಲಿ ಕುಂಕುಮವು ಲೈಂಗಿಕ ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂಬುದಾಗಿ ನಂಬಲಾಗಿತ್ತು. ಅದಕ್ಕಾಗಿಯೇ ವಿವಾಹಿತ ಸ್ತ್ರೀಯರು ಕುಂಕುಮವನ್ನು ಹಚ್ಚಿಕೊಳ್ಳುತ್ತಿದ್ದರು. ಮದುವೆಯಾಗದವರು ಮತ್ತು ವಿಧವೆಯರು ಕುಂಕುಮವನ್ನು ಹಚ್ಚಿಕೊಳ್ಳುವಂತಿಲ್ಲ.
ಆರೋಗ್ಯದ ದೃಷ್ಟಿಯಲ್ಲಿ ಅರಿಶಿನದ ಪಾತ್ರ
ಬೆಚ್ಚನೆಯ ಹಾಲಿನಲ್ಲಿ ಅರಿಶಿನವನ್ನು ಮಿಶ್ರಮಾಡಿ ಸೇವಿಸುವುದು ನಿಮ್ಮನ್ನು ಹಿತವಾಗಿರಿಸುತ್ತದೆ. ಇಷ್ಟಲ್ಲದೆ ಅರಿಶಿನ ಹಾಲು ನಿಮ್ಮ ದೇಹದಲ್ಲಿರುವ ಆಮ್ಲ ಹಿಮ್ಮುಖ ಹರಿವು ಮತ್ತು ಯಾವುದೇ ನೋವನ್ನೂ ನಿವಾರಿಸುತ್ತದೆ. ಅರಿಶಿನವನ್ನು ಹಚ್ಚಿಕೊಳ್ಳುವುದರಿಂದ ತ್ವಚೆಯು ಹೊಳಪನ್ನು ಪಡೆದುಕೊಳ್ಳುತ್ತದೆ. ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ