Just In
- 16 min ago
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- 1 hr ago
ಚರ್ಮದ ಕ್ಯಾನ್ಸರ್ ಯೌವನ ಪ್ರಾಯದವರಲ್ಲಿ ಹೆಚ್ಚು ಯಾಕೆ . .? ತಡೆಗಟ್ಟುವುದು ಹೇಗೆ?
- 2 hrs ago
30 ದಿನ ಸಕ್ಕರೆ ಸೇವಿಸದಿದ್ದರೆ ಇಷ್ಟೆಲ್ಲಾ ಲಾಭವಾಗುತ್ತಾ..? ವೈಟ್ಲಾಸ್ಗೆ ಇದೇ ಬೆಸ್ಟ್..!
- 10 hrs ago
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
Don't Miss
- Sports
IND VS AUS Test: ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪರ್ ಅಲ್ಲ: ಪದಾರ್ಪಣೆ ಮಾಡಲು ಸಜ್ಜಾದ ವಿಕೆಟ್ ಕೀಪರ್
- Movies
'ವಾಮನ'ನಾದ ಧನ್ವೀರ್: ಹೀರೊ ಎಂಟ್ರಿ ಸಾಂಗ್ನಿಂದಲೇ ಶೂಟಿಂಗ್ ಫಿನಿಶ್
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸಾಲ, ಕಷ್ಟಗಳಿಂದ ಪರಿಹಾರ ಹೊಂದಲು ಆಷಾಢ ಶುಕ್ರವಾರ ಲಕ್ಷ್ಮಿ ವ್ರತ ಮಾಡುವ ವಿಧಾನ
ಆಷಾಢ ಮಾಸವೆಂದರೆ ಸಾಮಾನ್ಯವಾಗಿ ಆ ತಿಂಗಳಿನಲ್ಲಿ ಯಾವುದೇ ಶುಭಕಾರ್ಯಗಳನ್ನು ಮಾಡಬಾರದು ಎಂಬ ನಂಬಿಕೆ. ಆದರೆ ಆಷಾಢ ಶುಕ್ರವಾರದ ಪೂಜೆಗೆ ತುಂಬಾನೇ ಮಹತ್ವವಿದೆ. ಆಷಾಢ ಶುಕ್ರವಾರದೆಂದು ದೇವಿಯರನ್ನು ಆರಾಧಿಸಲಾಗುವುದು. ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಆಷಾಢ ಶುಕ್ರವಾರದಂದು ಲಕ್ಷ್ಮಿ ವ್ರತ ಆಚರಿಸಲಾಗುವುದು.
ಆಷಾಢ ಶುಕ್ರವಾರದ ಪೂಜೆ ಈ ವರ್ಷ ಯಾವ ದಿನಾಂಕಗಳಲ್ಲಿ ಬಂದಿದೆ, ಇದರ ಮಹತ್ವವೇನು, ಆಚರಣೆ ಹೇಗೆ ಮಾಡಬೇಕು ನೋಡೋಣ ಬನ್ನಿ:
ಆಷಾಢ ಶುಕ್ರವಾರದ ದಿನಾಂಕಗಳು
ಜುಲೈ 16
ಜುಲೈ 23
ಜುಲೈ 30
ಆಗಸ್ಟ್ 6
ಈ ವ್ರತವನ್ನು ಶಕಾ ವ್ರತ ಎಂದು ಕರೆಯಲಾಗುವುದು. ಈ ದಿನದಂದು ಲಕ್ಷ್ಮಿಯ ಆರಾಧನೆ ಮಾಡಿದರೆ ಸಂಪತ್ತು ವೃದ್ಧಿಯಾಗುವುದು.
ಆಷಾಢ ಲಕ್ಷ್ಮಿ ಪೂಜೆ
ಕೆಲವರು ಲಕ್ಷ್ಮಿ ಪೂಜೆ ವ್ರತವನ್ನು ಆಷಾಢ ಪೂರ್ತಿ ಮಾಡಿದರೆ ಇನ್ನು ಕೆಲವರು ಆಷಾಢ ಶುಕ್ಲ ದಶಮಿಯಂದು ಪೂಜೆ (ಆಷಾಢ ತಿಂಗಳ 10ನೇ ದಿನಕ್ಕೆ) ಪ್ರಾರಂಭಿಸಿ ಶ್ರಾವಣ ಮಾಸ ಶುಕ್ಲ ದಶಮಿಗೆ (ಶ್ರಾವಣ ಮಾಸದ 10ನೇ ದಿನಕ್ಕೆ) ಮುಕ್ತಾಯ ಮಾಡುತ್ತಾರೆ.
ಆಷಾಢ ಶುಕ್ರವಾರ ಪೂಜಾ ವಿಧಾನ
ಲಕ್ಷ್ಮಿಯ ಮೂರ್ತಿ ಅಥವಾ ಫೋಟೋ ಇಟ್ಟು ಅದಕ್ಕೆ ಹೂಗಳನ್ನು ಅರ್ಪಿಸಿ, ದೀಪ ಹಚ್ಚಿ ಪೂಜಿಸಲಾಗುವುದು. ಪೂಜೆ ಮಾಡುವಾಗ ಲಕ್ಷ್ಮಿ ಸಹಸ್ರನಾಮ ಪಠಿಸಬೇಕು. ಈ ಪೂಜೆ ಮಾಡುವುದರಿಂದ ಮನೆಯಲ್ಲಿ ಐಶ್ವರ್ಯ ಹೆಚ್ಚುವುದು, ಸಂಪತ್ತು ವೃದ್ಧಿಯಾಗುವುದು.
ಆಷಾಢ ಶುಕ್ರವಾರ ಮನೆಗೆ ಅಕ್ಕಪಕ್ಕದ ಗೃಹಿಣಿಯರನ್ನೂ ಪೂಜೆಗೆ ಆಹ್ವಾನಿಸಲಾಗುವುದು. ನಂತರ ಅವರಿಗೆ ತಾಂಬೂಲ ನೀಡಲಾಗುವುದು.
ಸಾಲಬಾಧೆ, ಕಷ್ಟಗಳಿಗೆ ವ್ರತದಿಂದ ಪರಿಹಾರ ಕಂಡುಕೊಳ್ಳುವುದು ಹೇಗೆ?
ಆಷಾಢ ಶುಕ್ರವಾರ ಪ್ರಾತಃಕಾಲದಲ್ಲಿ ಎದ್ದು ಸ್ನಾನ ಮಾಡಿ ಬಿಳಿ ಬಟ್ಟೆ ಧರಿಸಿ ಉತ್ತರಾಭಿಮುಖವಾಗಿ ಅಥವಾ ಪೂರ್ವಾಭಿಮುಖವಾಗಿ ಕಲಶ ಸ್ಥಾಪನೆ ಮಾಡಬೇಕು. ನಂತರ ಪದ್ಮಪ್ರಿಯೆ, ಪದ್ಮನಿ, ಪದ್ಮ ಹಸ್ತೆ, ಪದ್ಮಾಲಯೆ, ವಿಶ್ವಪ್ರಿಯೆ, ವಿಶ್ವಮನೋನುಕೂಲೆ, ತದ್ಬಾದ ಪದ್ಮಂ ವಹಿ ಸನ್ನಿಧತ್ವ ಎಂದು ಕೆಯನ್ನು ಆರಾಧಿಸಬೇಕು. ಪದ್ಮಾಸನ ಹಾಕಿ ಕುಳಿತಿರುವ ಲಕ್ಷ್ಮಿಯನ್ನು ಆಹ್ವಾನಿಸಬೇಕು. ಅಷ್ಟದಳವನ್ನಿಟ್ಟು, ಅದರ ಮೇಲೆ ಶ್ರೀಚಕ್ರವನ್ನಿಟ್ಟು ಕಲಶ ಸ್ಥಾಪನೆ ಮಾಡಿ ಪ್ರಾಣ ಪ್ರತಿಷ್ಠಪನೆ ಮಾಡಬೇಕು. ಪ್ರಾಣ ಪ್ರತಿಷ್ಠಾಪನೆ ಮಾಡುವಾಗ ವೇದ ಮಂತ್ರಗಳನ್ನು ಹೇಳಬೇಕು. ದೇವಿಗೆ ನೈವೇದ್ಯ ಅರ್ಪಿಸಿ ಮನೆಗೆ ಬಂದ ಸುಮಂಗಲಿಯರಿಗೆ ಅರಿಶಿಣ-ಕುಂಕುಮ ಹಾಗೂ ತಾಂಬೂಲ ನೀಡಿ. ಇದರಿಂದ ಕಷ್ಟಗಳು ನಿವಾರಣೆಯಾಗುವುದು.