Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಶಿವರಾತ್ರಿ ವಿಶೇಷ-ಕನ್ಯೆಯರಿಗೂ ಕಾದಿದೆ, ಸಿಹಿ ಸುದ್ದಿ!
ಶಿವರಾತ್ರಿ ಅಥವಾ ಮಹಾಶಿವರಾತ್ರಿ ಭಾರತದ ಒಂದು ಪ್ರಮುಖ ಹಬ್ಬವಾಗಿದ್ದು ಮಹಿಳೆಯರಿಗೂ ವಿಶೇಷ ಮಹತ್ವದ್ದಾಗಿದೆ. ಈ ರಾತ್ರಿಯನ್ನು ಶಿವನ ರಾತ್ರಿ ಎಂದು ನಂಬಲಾಗಿದ್ದು ಈ ರಾತ್ರಿಯಲ್ಲಿಯೇ ತ್ರಿದೇವರ ಪೈಕಿ ಓರ್ವ ದೇವರು ಪಾರ್ವತಿ ದೇವತೆಯೊಂದಿಗೆ ವಿವಾಹವಾದರು ಎಂದು ಹೇಳಲಾಗುತ್ತದೆ.
ಪ್ರತಿ ವರ್ಷದ ಫಾಲ್ಗುಣ ಮಾಸದ ಕೃಷ್ಣಪಕ್ಷದ ಹದಿಮೂರನೇ ರಾತ್ರಿ ಮತ್ತು ಹದಿನಾಲ್ಕನೆಯ ದಿನದ ಹಗಲಿನಲ್ಲಿ ಬರುವ ಅವಧಿಯಲ್ಲಿ ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಈ ವಿಶೇಷ ರಾತ್ರಿಯನ್ನು ಭಕ್ತರು ಇಡಿಯ ರಾತ್ರಿ ಜಾಗರಣೆ, ವಿಶೇಷ ಪೂಜೆ, ಧ್ಯಾನದ ಮೂಲಕ ಆಚರಿಸಿ ದೇವನ ಅನುಗ್ರಹ ಪಡೆಯುತ್ತಾರೆ. ಮಹಾ ಶಿವರಾತ್ರಿ: ಕೈಲಾಸವಾಸಿ ಶಿವನಿಗೆ ಇದು ಮಂಗಳಕರ ರಾತ್ರಿ!
ಈ ರಾತ್ರಿಯ ಮುನ್ನಾದಿನದ ಮುಂಜಾನೆಯ ಸಮಯದಲ್ಲಿ ಗಂಗಾನದಿಯಲ್ಲಿ ಮಿಂದು ಇಡಿಯ ದಿನ ಉಪವಾಸವಿರುವುದು ಈ ಹಬ್ಬದ ಒಂದು ವಿಧಿಯಾಗಿದೆ. ಗಂಗಾನದಿಯ ಸಮೀಪವಿರುವ ಜನರು ಈ ಅವಧಿಯನ್ನು ಸರ್ವಥಾ ಕಳೆದುಕೊಳ್ಳಲು ಸಿದ್ಧರಿಲ್ಲ. ಈ ವಿಶೇಷ ಹಬ್ಬ ಮಹಿಳೆಯರಿಗೂ ಹಲವು ರೀತಿಯಲ್ಲಿ ಮಹತ್ವದ್ದಾಗಿದೆ.
ಈ ದಿನದಂದು ಕನ್ಯೆಯರು ಶಿವನಲ್ಲಿ ಭಕ್ತಿಯಿಂದ ಪ್ರಾರ್ಥಿಸಿದರೆ ಆತನಂತಹ ಉತ್ತಮ ಗುಣವುಳ್ಳ ಪತಿ ಸಿಗುತ್ತಾನೆಂಬ ಪ್ರಪೀತಿಯಿದೆ. ವಿವಾಹಿಯ ಮಹಿಳೆಯರು ಈ ದಿನ ಭಕ್ತಿಯಿಂದ ಪ್ರಾರ್ಥಿಸಿದರೆ ಪತಿ, ಪುತ್ರ, ಸಹೋದರರ ಆರೋಗ್ಯ, ಆಯಸ್ಸು ಹೆಚ್ಚುತ್ತದೆ ಎಂದು ನಂಬಲಾಗುತ್ತದೆ. ಬನ್ನಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಮುಂದೆ ಓದಿ...

ಶಿವಲಿಂಗಕ್ಕೆ ಅಭಿಷೇಕ
ಈ ದಿನದಂದು ಮಹಿಳೆಯರು ಶಿವನನ್ನು ಪ್ರಾರ್ಥಿಸಿ ಆತನ ಮತ್ತು ಪಾರ್ವತಿಯ ಅನುಗ್ರಹ ಪಡೆಯಲು ಯತ್ನಿಸುತ್ತಾರೆ. ಮುಂಜಾನೆಯೇ ಮಿಂದು ಶಿವಲಿಂಗವನ್ನು ಹಾಲು, ನೀರು ಮತ್ತು ಜೇನಿನಿಂದ ಅಭಿಶೇಕ ಮಾಡುತ್ತಾರೆ. ಶಿವನಿಗೆ ಪ್ರಿಯವಾದ ಬಿಲ್ವಪತ್ರೆ, ಖೀರು, ಹಣ್ಣುಗಳು, ದತ್ತೂರಿ, ಅಖಂಡಪುಷ್ಪ ಮೊದಲಾದವುಗಳನ್ನು ಅರ್ಪಿಸುತ್ತಾರೆ. ಇಡಿಯ ದಿನ ಮಹಿಳೆಯರು ಉಪವಾಸವಿದ್ದು ಭಕ್ತಿಗೀತೆಗಳನ್ನು ಹಾಡುತ್ತಾ ಭಜನೆ ಮತ್ತು ಧ್ಯಾನದಲ್ಲಿ ದಿನ ಕಳೆಯುತ್ತಾರೆ. ಈ ದಿನ ಪೂರ್ಣ ಭಕ್ತಿಭಾವದಿಂದ ಶಿವನನ್ನು ಪೂಜಿಸಿದರೆ ಇಷ್ಟಾರ್ಥಗಳು ಸಿದ್ಧಿಸುವುದು ಎಂದು ನಂಬಲಾಗುತ್ತದೆ. ಅಲ್ಲದೇ ಜನ್ಮಜನ್ಮಾಂತರದ ಆವರ್ತದಿಂದ ಮುಕ್ತಿ ಪಡೆಯಲು ಸಾಧ್ಯ ಎಂದೂ ಹೇಳಲಾಗುತ್ತದೆ.
ಶಿವನಂತಹ ಪತಿಗಾಗಿ ಪ್ರಾರ್ಥನೆ
ಈ ದಿನದಂದು ಕನ್ಯೆಯರು ಶಿವನಲ್ಲಿ ವಿಶೇಷವಾಗಿ ಪ್ರಾರ್ಥಿಸುವ ಮೂಲ ಶಿವನ ಗುಣವುಳ್ಳ ಪತಿಯೇ ದೊರಕುತ್ತಾನೆ ಎಂಬ ನಂಬಿಕೆಯಿದೆ. ಕನ್ಯೆಯರೂ ವಿವಾಹಿತ ಮಹಿಳೆಯರೂ ಇಡಿಯ ದಿನ ಉಪವಾಸವನ್ನು ಆಚರಿಸುತ್ತಾರೆ. ವಿವಾಹಿತೆಯರ ಪ್ರಾರ್ಥನೆಯಿಂದ ಶಿವ ಮತ್ತು ಪಾರ್ವತಿಯರ ಅನುಗ್ರಹ ಪಡೆಯುವ ಮೂಲಕ ವೈವಾಹಿಕ ಜೀವನ ಸುಮಧುರವಾಗಿರಲು ಮತ್ತು ಆರೋಗ್ಯಕರವಾಗಿರಲು ಸಾಧ್ಯ ಎಂದು ನಂಬಲಾಗಿದೆ.
ಅಷ್ಟೇ ಅಲ್ಲ, ಸೂಕ್ತ ಜೀವನ ಸಂಗಾತಿಯನ್ನು ಪಡೆಯಲು ಅಸಮರ್ಥರಾದ ಕನ್ಯೆಯರಿಗೆ ಬೇಗನೇ ಸೂಕ್ತ ಜೀವನಸಂಗಾತಿ ಸಿಗಲೂ ಈ ದಿನ ಭಕ್ತಿಯಿಂದ ಮಾಡುವ ಪಾರ್ಥನೆ ಫಲ ನೀಡುತ್ತದೆ ಎಂದು ಹಿರಿಯರು ಹೇಳುತ್ತಾರೆ. ಶಿವರಾತ್ರಿಯ ಈ ಶುಭಸಂದರ್ಭದಲ್ಲಿ ಶಿವನ ಮತ್ತು ಪಾರ್ವತಿಯ ಅನುಗ್ರಹ ಪಡೆಯುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಲು ಮಹಿಳೆಯರು ಮತ್ತು ಕನ್ಯೆಯರು ಹೆಚ್ಚು ಉತ್ಸುಕರಾಗಿರುತ್ತಾರೆ.



Click it and Unblock the Notifications
