Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
ಇತಿಹಾಸ ಪುರಾಣಗಳಲ್ಲಿಯೇ 'ವೃಕ್ಷಾರಾಧನೆ' ಬೇರೂರಿದೆ...
ಭಾರತವು ವಿಭಿನ್ನ ಪರಂಪರೆ ಮತ್ತು ಸಂಸ್ಕೃತಿಗಳ ತವರೂರು. ಆದರೆ ಕೆಲವೊಂದು ಸಂಪ್ರದಾಯಗಳು ಮತ್ತು ಆಚರಣೆಗಳು, ಇಡೀ ಭಾರತದಾದ್ಯಂತ ಒಂದೇ ರೀತಿ ಪಾಲಿಸಿಕೊಂಡು ಬರಲಾಗುತ್ತದೆ. ಅದರಲ್ಲಿಯೂ ಪ್ರಕೃತಿಯನ್ನು ಆರಾಧಿಸುವ ಬಗೆಯಂತು ಇಡೀ ದೇಶದಲ್ಲಿ ನಾವು ಎಲ್ಲಾ ಕಡೆಯಲ್ಲೂ ಸಹ ಕಾಣಬಹುದು.
ಅಂತಹ ಆಚರಣೆಗಳಲ್ಲಿ ಮರಗಳ ಅಥವಾ ವೃಕ್ಷಗಳ ಆರಾಧನೆ. ಮರಗಳನ್ನು ಪೂಜಿಸುವುದರ ಹಿಂದೆ ಹಲವಾರು ಕಥೆಗಳನ್ನು ನಾವು, ವಿವಿಧ ಪ್ರಾಂತ್ಯಗಳಲ್ಲಿ ಕಾಣಬಹುದು. ಕೆಲವೊಂದು ಆಯಾ ರಾಜ್ಯ ಹಾಗೂ ಪ್ರಾಂತ್ಯಗಳಿಗೆ ಸೀಮಿತವಾಗಿದ್ದರೆ ಕೆಲವು ದೇಶದಾದ್ಯಂತ ಸಮಾನವಾಗಿವೆ. ಪೂಜನೀಯ ಸ್ಥಾನ ಪಡೆದಿರುವ ಹಲವು ವೃಕ್ಷಗಳು ನಾಡಿನಾದ್ಯಂತ ಜನರಿಗೆ ಪವಿತ್ರವಾಗಿವೆ.

ಅಷ್ಟೇ ಅಲ್ಲದೆ 'ಕಲ್ಪವೃಕ್ಷ' ಎಂದು ನಂಬಲಾಗುವ ಈ ವೃಕ್ಷಗಳು ಕೇವಲ ಧಾರ್ಮಿಕ ಮಹತ್ವ ಮಾತ್ರವಲ್ಲದೇ ತಮ್ಮ ರೋಗಪರಿಹಾರಕ ಗುಣಗಳಿಂದಲೂ ಜನರಿಗೆ ಆಪ್ತವಾಗಿವೆ. ಈ ಪಟ್ಟಿಯಲ್ಲಿ ಪ್ರಮುಖವಾಗಿರುವುದನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಮುಂದೆ ಓದಿ... ದೈವಿಕ ಶಕ್ತಿ ಹೊಂದಿರುವ ಭಾರತದ ಆರು ವೃಕ್ಷಗಳು
ವೃಕ್ಷಗಳು-ಬ್ರಹ್ಮ, ವಿಷ್ಣು ಮತ್ತು ಮಹೇಶ್ವರನಿಗೆ ಸಮಾನ
ಕೆಲವರ ಪ್ರಕಾರ ಪವಿತ್ರ ವೃಕ್ಷಗಳು, ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರ ರೂಪವಂತೆ. ಇವುಗಳ ಆರಾಧನೆಯು ಈ ಮೂವರ ಆರಾಧನೆಗೆ ಸಮ. ಅದಕ್ಕಾಗಿಯೇ "ಮೂಲತಃ ಬ್ರಹ್ಮ ರೂಪಾಯ:, ಮಧ್ಯತಃ ವಿಷ್ಣು ರೂಪಯೇ,ಅಗ್ರತಃ ಶಿವ ರೂಪಾಯಃ ಶ್ರೀ ವೃಕ್ಷ ರಾಜಯೇ ನಮಃ" ಎನ್ನುವ ಮಂತ್ರವು ಹುಟ್ಟಿಕೊಂಡಿತು. ಇದನ್ನು ಪಠಿಸುವುದರಿಂದ ಆಧ್ಯಾತ್ಮಿಕ ಮೋಕ್ಷ ದೊರೆಯುತ್ತದೆ.
ಮೂರು ಲೋಕಗಳನ್ನು ಸೇರಿಸುವ ಕೊಂಡಿ
ಹಿಂದೂ ಧರ್ಮದಲ್ಲಿ ಮರಗಳು ಸ್ವರ್ಗ, ಭೂಮಿ ಮತ್ತು ಪಾತಾಳಗಳೆಂಬ ಮೂರು ಲೋಕಗಳನ್ನು ಸಂಪರ್ಕಿಸುವ ಕೊಂಡಿ ಎಂದು ಪರಿಗಣಿಸಲಾಗಿದೆ. ಈ ಮರಗಳಿಗೆ ನಾವು ಸಮರ್ಪಿಸುವ ನೈವೇಧ್ಯವು ಮೂರು ಲೋಕಗಳಿಗೆ ಸಲ್ಲುತ್ತದೆ ಎಂಬ ಪ್ರತೀತಿ ಮನೆ ಮಾಡಿದೆ.
ದೇವತೆಗಳೇ ಮರಗಳನ್ನು ಪೂಜಿಸುತ್ತಿದ್ದರು!
ಇಂದ್ರನ ಉದ್ಯಾನವನದಲ್ಲಿ ಮಂದಾರ, ಪಾರಿಜಾತ, ಶಮಂತಕ, ಹರಿಚಂದನ ಮತ್ತು ಕಲ್ಪ ವೃಕ್ಷ ಅಥವಾ ಕಲ್ಪತರು ಎಂಬ ಐದು ವೃಕ್ಷಗಳು ಇವೆಯಂತೆ. ಭಾರತದಲ್ಲಿ ಜನರು ಏಕೆ ಮರಗಳನ್ನು ಪೂಜಿಸುತ್ತಾರೆ ಎಂಬ ಪ್ರಶ್ನೆ ಎದ್ದಾಗ, ಪುರಾಣಗಳಲ್ಲಿ ದೇವತೆಗಳೇ ಮರಗಳನ್ನು ಪೂಜಿಸುತ್ತಿದ್ದ ಉಲ್ಲೇಖಗಳು ನಮಗೆ ದೊರೆಯುತ್ತವೆ.
ಶ್ರೀಗಂಧದ- ಪಾರ್ವತಿಯ ನೆಚ್ಚಿನ ಮರ
ಸುವಾಸನೆ ಹಾಗೂ ಸೌಂದರ್ಯವರ್ಧಕವಾಗಿರುವ ಶ್ರೀಗಂಧದ ಮರವನ್ನು ಪಾರ್ವತಿಯ ನೆಚ್ಚಿನ ಮರವೆಂದು ಹೇಳಲಾಗಿದೆ. ಪಾರ್ವತಿ ಶ್ರೀಗಂಧದ ಕೊರಡನ್ನು ತನ್ನ ಬೆವರಿನೊಂದಿಗೆ ತೇದ ಬಳಿಕ ಪ್ರಾಪ್ತವಾದ ಅರೆಘನರೂಪದ ದ್ರಾವಣದಿಂದ ಗಣೇಶನನ್ನು ಸೃಷ್ಟಿಸಿದಳು ಎನ್ನಲಾಗುತ್ತದೆ. ಈ ನಂಬಿಕೆಯಿಂದ ಇಂದಿಗೂ ಶ್ರೀಗಂಧದ ದ್ರಾವಣವನ್ನು ಹಲವು ದೇವದೇವತೆಗಳ ಪೂಜೆಯಲ್ಲಿ ಬಳಸಲಾಗುತ್ತಿದೆ.
ಬಿಲ್ವಪತ್ರೆ
ಶಿವನಿಗೆ ಅತ್ಯಂತ ಪ್ರಿಯವಾದ ಈ ವೃಕ್ಷದ ಎಲೆಯನ್ನು ಅರ್ಪಿಸುವುದರಿಂದ ಶಿವನ ಅನುಗ್ರಹಕ್ಕೆ ಪಾತ್ರರಾಗಬಹುದು ಎಂಬ ನಂಬಿಕೆಯಿದೆ. ಈ ಮರದ ಎಲೆಯಲ್ಲಿ ಮೂರು ದಳಗಳಿವೆ. ಸೃಷ್ಟಿ, ಸಂರಕ್ಷಣೆ ಹಾಗೂ ವಿನಾಶವನ್ನು ಈ ದಳಗಳು ಪ್ರತಿನಿಧಿಸುತ್ತವೆ ಎಂದು ನಂಬಲಾಗಿದೆ.



Click it and Unblock the Notifications


