Latest Updates
-
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್!
ಈ ಸೂಚನೆಗೆ ಭಯಪಡಲೇ ಬೇಕು...ಯಾಕಂದ್ರೆ ಇದು ಸಾವಿನ ಸೂಚನೆ!!
ಮನುಷ್ಯನ ಹುಟ್ಟು ಸಾವು ಮೇಲ್ನೋಟಕ್ಕೆ ನೈಸರ್ಗಿಕವಾದ್ದು ಎನಿಸಬಹುದು. ಆದರೆ ಅದು ದೈವದತ್ತವಾದದ್ದು ಎನ್ನುವುದನ್ನು ನಾವು ನಂಬಲೇ ಬೇಕು. ಈ ಪ್ರಪಂಚ ಬ್ರಹ್ಮ, ವಿಷ್ಣು, ಮಹೇಶ್ವರ ಎಂಬ ಮೂರು ದೇವತೆಗಳ ಸೃಷ್ಟಿ. ಇಲ್ಲಿ ಏನೇ ನಡೆದರೂ ಅದು ಬ್ರಹ್ಮನ ಸೃಷ್ಟಿ, ವಿಷ್ಣುವಿನ ಪಾಲನೆ ಹಾಗೂ ಶಿವನ ಲಯದ ಕಾರ್ಯದ ಅನುಸಾರ ನಡೆಯುತ್ತದೆ. ಈ ಕುರಿತು ಶಿವ ಪುರಾಣದ ಪವಿತ್ರ ಗ್ರಂಥವು ಹಲವಾರು ನೀತಿ ನಿಯಮಗಳನ್ನು ಸಾರುತ್ತದೆ.
ಪುರಾಣದ ಪ್ರಕಾರ ಪಾರ್ವತಿ ದೇವಿಯು ಒಮ್ಮೆ ವ್ಯಕ್ತಿಯ ಸಾವನ್ನು ಊಹಿಸುವ ಸೂಚನೆಗಳು ಅಥವಾ ಚಿಹ್ನೆಗಳ ಬಗ್ಗೆ ಶಿವನನ್ನು ಕೇಳಿದಳು. ಪಾರ್ವತಿಯ ಪ್ರಶ್ನೆಗೆ ಪ್ರತ್ಯುತ್ತರವಾಗಿ ಕೆಲವು ಜ್ಞಾನದ ವಿವರಣೆ ನೀಡಿದನು. ಆ ವಿವರಣೆ ವ್ಯಕ್ತಿಯು ತನ್ನ ಸಾವಿಗೂ ಮುಂಚೆ ಯಾವೆಲ್ಲ ಲಕ್ಷಣಗಳನ್ನು ಹೊಂದಿರುತ್ತಾನೆ ಎನ್ನುವುದಾಗಿತ್ತು ಎನ್ನಲಾಗುತ್ತದೆ. ಆ ವಿಚಾರದಲ್ಲಿ ಸೂಚಿಸಿದ ಸೂಚನೆಗಳ ವಿವರ ತಿಳಿಯಬೇಕೆನ್ನುವ ಬಯಕೆ ಇದ್ದರೆ ಮುಂದೆ ಓದಿ....
ವಿಶೇಷ ಸೂಚನೆ: ಈ ಸೂಚನೆಗಳು ಗ್ರಂಥಗಳಲ್ಲಿ ಕಂಡುಬಂದ ವಿಷಯಗಳನ್ನು ಆಧರಿಸಿದ್ದೇ ಹೊರತು ಯಾವುದೇ ವ್ಯಕ್ತಿಯ ವೈಯಕ್ತಿಕ ಅನುಭವದಿಂದಲ್ಲ...

ಸೂಚನೆ-1
ಮನುಷ್ಯನ ಬಾಯಿ, ಕಿವಿ, ಕಣ್ಣು ಮತ್ತು ನಾಲಿಗೆ ಇವುಯಾವುದೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಾದರೆ ವ್ಯಕ್ತಿಗೆ 6 ತಿಂಗಳೊಳಗೆ ಸಾವು ಬರುವುದಂತೆ!

ಸೂಚನೆ-2
ವ್ಯಕ್ತಿಯು ಎಣ್ಣೆಯಲ್ಲಿ, ನೀರಿನಲ್ಲಿ ಅಥವಾ ಕನ್ನಡಿಯಲ್ಲಿ ತನ್ನ ಪ್ರತಿಬಿಂಬವನ್ನು ನೋಡಿದಾಗ, ಅದು ಕಾಣದಿದ್ದರೆ ಆತ ತನ್ನ ಜೀವನವನ್ನು 6 ತಿಂಗಳಿಗಿಂತ ಹೆಚ್ಚುಕಾಲ ನಡೆಸಲಾರ.

ಸೂಚನೆ-3
ವ್ಯಕ್ತಿಗೆ ಅಚಾನಕ್ ಎನ್ನುವ ರೀತಿಯಲ್ಲಿ ಜಗತ್ತೆಲ್ಲಾ ನೀಲಿಮಯವಾಗಿ ಕಂಡರೆ, ಅವನ ಸಾವು ಒಂದು ತಿಂಗಳಲ್ಲೇ ಬರುವುದು.

ಸೂಚನೆ-4
ವ್ಯಕ್ತಿ ಓರ್ವನಿಗೆ ಅವನ ನೆರಳಲ್ಲಿ ತಲೆಯ ಭಾಗ ಕಾಣದಿದ್ದರೆ, ಅದು ಸಾವಿನ ಸೂಚನೆಯಾಗುತ್ತದೆ.

ಸೂಚನೆ-5
ಯಾರಿಗೆ ತಮ್ಮ ನೆರಳು ಕಾಣುವುದಿಲ್ಲವೋ ಅಥವಾ ತಲೆ ಇಲ್ಲದ ನೆರಳು ಕಾಣುತ್ತದೆಯೋ ಅವರು ಒಂದು ತಿಂಗಳಿಗಿಂತ ಹೆಚ್ಚು ಕಾಲ ಬದುಕುಳಿಯಲಾರರು.

ಸೂಚನೆ-6
ಹದ್ದು, ಪಾರಿವಾಳ ಮತ್ತು ಕಾಗೆ ಇವುಗಳಲ್ಲಿ ಯಾವುದಾದರೊಂದು ತಲೆಯಮೇಲೆ ಕುಳಿತುಕೊಂಡರೆ ಅದು ಸಾವಿನ ಸೂಚನೆಯನ್ನು ನೀಡಿದಂತೆ.

ಸೂಚನೆ-7
ಇದ್ದಕ್ಕಿದ್ದಂತೆಯೇ ದೇಹವು ಹೆಚ್ಚು ಬಿಳುಪು, ಹಳದಿ ಅಥವಾ ಕೆಂಪು ಕಲೆಗಳಿಂದ ಆವರಿಸಿಕೊಂಡರೆ, ವ್ಯಕ್ತಿ 6 ತಿಂಗಳೊಳಗೆ ಸಾಯುತ್ತಾನಂತೆ!

ಸೂಚನೆ-8
ಗಂಟಲು ಮತ್ತು ನಾಲಿಗೆ ಪದೇ ಪದೇ ಒಣಗಲು ಪ್ರಾರಂಭಿಸಿದರೆ ಅದು ಸಾವಿನ ಶಕುನವನ್ನು ಹೇಳಿದಂತೆ.

ಸೂಚನೆ-9
ಎಂದು ಸೂರ್ಯನ ಕಿರಣ, ಚಂದ್ರನ ಕಿರಣ ಅಥವಾ ಬೆಂಕಿಯನ್ನು ನೋಡುವ ಶಕ್ತಿಯನ್ನು ಕಳೆದುಕೊಂಡಿರುತ್ತೀರೋ, ಆಗ ಸಾವು ನಿಮ್ಮ ಸುತ್ತ ಒಂದು ಮೂಲೆಯಲ್ಲಿ ನಿಂತಿದೆ ಎಂದು ಪರಿಗಣಿಸಬಹುದು.

ಸೂಚನೆ-10
ವ್ಯಕ್ತಿಗೆ ಉತ್ತರ ದಿಕ್ಕಿನ ನಕ್ಷತ್ರ ಕಾಣದಿರುವುದು ಅಥವಾ ಆಕಾಶ, ಸೂರ್ಯ, ಚಂದ್ರರೆಲ್ಲರೂ ಕೆಂಪು ಬಣ್ಣದಲ್ಲಿ ಕಂಡರೆ ಇದು ಸ್ಪಷ್ಟವಾದ ಸಾವಿನ ಸೂಚನೆ ಎನ್ನಲಾಗುತ್ತದೆ.



Click it and Unblock the Notifications