Latest Updates
-
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ -
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ! -
ಮಳೆಗಾಲದ ಜಾರುವ ರಸ್ತೆಗಳಲ್ಲಿ ನಡೆಯುವಾಗ ಎಚ್ಚರ: ಸುರಕ್ಷಿತವಾಗಿರಲು 8 ನಿಮಿಷಗಳ ಈ ವ್ಯಾಯಾಮ ಮಾಡಿ!
ಸೂರಸಂಹಾರ: ಸ್ಕಂದ ಷಷ್ಠಿಯ ದಿನಾಂಕ ಹಾಗೂ ಮಹತ್ವ
ಮುರುಗ, ಕಾರ್ತಿಕೇಯ ಹೀಗೆ ಹಲವು ನಾಮದಿಂದ ಕರೆಯಲ್ಪಡುವ ಸುಬ್ರಹ್ಮಣ್ಯ ಸ್ವಾಮಿಯ ಭಕ್ತರಿಗೆ ಸೂರಸಂಹಾರ ತುಂಬಾ ಮಹತ್ವವಾದ ದಿನ. ಸೂರ ಸಂಹಾರವನ್ನು ಸ್ಕಂದ ಷಷ್ಟಿಯೆಂದು ಆಚರಿಸಲಾಗುವುದು. ದಕ್ಷಿಣ ಭಾರತದ ಪ್ರಮುಖ ಆಚರಣೆಗಳಲ್ಲಿ ಒಂದಾಗಿರುವ ಸ್ಕಂದ ಷಷ್ಠಿಯನ್ನು 6 ದಿನಗಳವರೆಗೆ ಆಚರಿಸಲಾಗುವುದು. ಈ ವರ್ಷ ನವೆಂಬರ್9ರಿಂದು ಆಚರಿಸಲಾಗುವುದು.

ಕಾರ್ತಿಕ ಮಾಸದ ಹುಣ್ಣಿಮೆಯಂದು ಪ್ರಾರಂಭವಾಗುವ ಹಬ್ಬ
ಕಾರ್ತಿಕ ಮಾಸದ ಹುಣ್ಣಿಮೆಯಂದು ಈ ಹಬ್ಬ ಪ್ರಾರಂಭವಾಗುತ್ತದೆ. ಈ ಹಬ್ಬದಲ್ಲಿ ದೇವರಿಗೆ ರಥೋತ್ಸವ ಹಾಗು ವಿಶೇಷ ಪೂಜೆಗಳು ನಡೆಯುತ್ತವೆ. ಸ್ಕಂದ ಅಥವಾ ಸುಬ್ರಹ್ಮಣ್ಯನು ತನ್ನ ಆಯುಧವನ್ನು(ಭರ್ಜಿಯನ್ನು) ಪಡೆಯುವ ಮೂಲಕ ಕತ್ತಲೆಯ ಮೇಲೆ ಆಧ್ಯಾತ್ಮದ ಬೆಳಕಿನ ಗೆಲ್ಲುವ ಹಬ್ಬ ಇದಾಗಿದೆ.

ಸೂರ ಸಂಹಾರ ದಿನಾಂಕ
ಷಷ್ಠಿ ತಿಥಿ ಪ್ರಾರಂಭ: ನವೆಂಬರ್ 9 ಬೆಳಗ್ಗೆ10:35ಕ್ಕೆ
ಷಷ್ಠಿ ತಿಥಿ ಮುಕ್ತಾಯ: ನವೆಂಬರ್ 10, 8:25ಕ್ಕೆ

ಆಚರಣೆ ಹೇಗೆ ಮಾಡಲಾಗುವುದು?
ಈ ಆಚರಣೆಯಲ್ಲಿ ಭಕ್ತರು ಉಪವಾಸವಿದ್ದು ಸುಬ್ರಮಣ್ಯಸ್ವಾಮಿಯ ಜಪ ಮಾಡುತ್ತಾ ನಿಷ್ಠೆಯಿಂದ ಆಚರಿಸುತ್ತಾರೆ. ಸೂರ ಸಂಹಾರ ಆಚರಿಸುವುದರಿಂದ ಭಕ್ತರಿಗೆ ಒಳ್ಳೆಯ ಫಲ ಸಿಗುವುದು ಎಂಬುವುದು ಸುಬ್ರಮಣ್ಯ ಸ್ವಾಮಿಯ ಭಕ್ತರ ಅಚಲ ನಂಬಿಕೆಯಾಗಿದೆ.

ಸೂರ ಸಂಹಾರದ ಹಿಂದಿರುವ ಪೌರಾಣಿಕ ಕತೆ
ಅತಿ ದೊಡ್ಡದಾದ ಹಾಗು 18 ಮಹಾಪುರಾಣಗಳಲ್ಲಿ ಒಂದಾದ ಸ್ಕಂದ ಪುರಾಣದ ಪ್ರಕಾರ, ಸೂರಪದ್ಮ, ಸಿಂಹಮುಖ ಹಾಗು ತಾರಕಾಸುರ ರಾಕ್ಷಸರು ತಮ್ಮ ಸೈನ್ಯ ಕಟ್ಟಿಕೊಂಡು ದೇವತೆಗೆಳ ಮೇಲೆ ಯುದ್ಧ ಮಾಡಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಾರೆ. ರಾಕ್ಷಸರು ದೇವತೆಗಳನ್ನು ಹಾಗೂ ಮನುಷ್ಯರನ್ನು ಹಿಂಸೆ ನೀಡುತ್ತಾರೆ. ರಾಕ್ಷಸ ಸೂರಪದ್ಮನು ಶಿವನು ಸತಿಯ ನಂತರ ಐಹಿಕ ಜೀವನವನ್ನು ತ್ಯಜಿಸಿ, ಗಂಭೀರವಾದ ತಪ್ಪಸ್ಸಿನಲ್ಲಿ ಮುಳುಗಿದ್ದಾನೆಂಬುದನ್ನು ಅರಿತು, ತನಗೆ ಶಿವನ ಮಗನಿಂದಲೇ ಸಾವಾಗ ಬೇಕು ಎಂಬ ವರವನ್ನು ತೆಗೆದುಕೊಂಡಿರುತ್ತಾನೆ. ದೇವತೆಗಳು ತಪ್ಪಸ್ಸಿನಲ್ಲಿದ್ದ ಶಿವನ ಪಾದಕ್ಕೆ ಬಿದ್ದು ತಮ್ಮನ್ನು ರಕ್ಷಿಸುವಂತೆ ಕೇಳುತ್ತಾರೆ. ಬ್ರಹ್ಮ ದೇವನ ಸಲಹೆಯ ಮೇರೆಗೆ ದೇವತೆಗಳು ಮನ್ಮಥನ ಸಹಾಯ ಪಡುತ್ತಾರೆ. ಮನ್ಮಥ ಶಿವನಲ್ಲಿ ಕಾಮದ ಇಚ್ಚೆಯನ್ನು ಪ್ರಚೋದಿಸುತ್ತಾನೆ. ಇದರಿಂದ ಕೋಪಗೊಂಡ ಶಿವನು ಮನ್ಮಥನನ್ನು ಸುಟ್ಟು ಬೂದಿ ಮಾಡುತ್ತಾನೆ.



Click it and Unblock the Notifications