Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಸೂರಸಂಹಾರ: ಸ್ಕಂದ ಷಷ್ಠಿಯ ದಿನಾಂಕ ಹಾಗೂ ಮಹತ್ವ
ಮುರುಗ, ಕಾರ್ತಿಕೇಯ ಹೀಗೆ ಹಲವು ನಾಮದಿಂದ ಕರೆಯಲ್ಪಡುವ ಸುಬ್ರಹ್ಮಣ್ಯ ಸ್ವಾಮಿಯ ಭಕ್ತರಿಗೆ ಸೂರಸಂಹಾರ ತುಂಬಾ ಮಹತ್ವವಾದ ದಿನ. ಸೂರ ಸಂಹಾರವನ್ನು ಸ್ಕಂದ ಷಷ್ಟಿಯೆಂದು ಆಚರಿಸಲಾಗುವುದು. ದಕ್ಷಿಣ ಭಾರತದ ಪ್ರಮುಖ ಆಚರಣೆಗಳಲ್ಲಿ ಒಂದಾಗಿರುವ ಸ್ಕಂದ ಷಷ್ಠಿಯನ್ನು 6 ದಿನಗಳವರೆಗೆ ಆಚರಿಸಲಾಗುವುದು. ಈ ವರ್ಷ ನವೆಂಬರ್9ರಿಂದು ಆಚರಿಸಲಾಗುವುದು.

ಕಾರ್ತಿಕ ಮಾಸದ ಹುಣ್ಣಿಮೆಯಂದು ಪ್ರಾರಂಭವಾಗುವ ಹಬ್ಬ
ಕಾರ್ತಿಕ ಮಾಸದ ಹುಣ್ಣಿಮೆಯಂದು ಈ ಹಬ್ಬ ಪ್ರಾರಂಭವಾಗುತ್ತದೆ. ಈ ಹಬ್ಬದಲ್ಲಿ ದೇವರಿಗೆ ರಥೋತ್ಸವ ಹಾಗು ವಿಶೇಷ ಪೂಜೆಗಳು ನಡೆಯುತ್ತವೆ. ಸ್ಕಂದ ಅಥವಾ ಸುಬ್ರಹ್ಮಣ್ಯನು ತನ್ನ ಆಯುಧವನ್ನು(ಭರ್ಜಿಯನ್ನು) ಪಡೆಯುವ ಮೂಲಕ ಕತ್ತಲೆಯ ಮೇಲೆ ಆಧ್ಯಾತ್ಮದ ಬೆಳಕಿನ ಗೆಲ್ಲುವ ಹಬ್ಬ ಇದಾಗಿದೆ.

ಸೂರ ಸಂಹಾರ ದಿನಾಂಕ
ಷಷ್ಠಿ ತಿಥಿ ಪ್ರಾರಂಭ: ನವೆಂಬರ್ 9 ಬೆಳಗ್ಗೆ10:35ಕ್ಕೆ
ಷಷ್ಠಿ ತಿಥಿ ಮುಕ್ತಾಯ: ನವೆಂಬರ್ 10, 8:25ಕ್ಕೆ

ಆಚರಣೆ ಹೇಗೆ ಮಾಡಲಾಗುವುದು?
ಈ ಆಚರಣೆಯಲ್ಲಿ ಭಕ್ತರು ಉಪವಾಸವಿದ್ದು ಸುಬ್ರಮಣ್ಯಸ್ವಾಮಿಯ ಜಪ ಮಾಡುತ್ತಾ ನಿಷ್ಠೆಯಿಂದ ಆಚರಿಸುತ್ತಾರೆ. ಸೂರ ಸಂಹಾರ ಆಚರಿಸುವುದರಿಂದ ಭಕ್ತರಿಗೆ ಒಳ್ಳೆಯ ಫಲ ಸಿಗುವುದು ಎಂಬುವುದು ಸುಬ್ರಮಣ್ಯ ಸ್ವಾಮಿಯ ಭಕ್ತರ ಅಚಲ ನಂಬಿಕೆಯಾಗಿದೆ.

ಸೂರ ಸಂಹಾರದ ಹಿಂದಿರುವ ಪೌರಾಣಿಕ ಕತೆ
ಅತಿ ದೊಡ್ಡದಾದ ಹಾಗು 18 ಮಹಾಪುರಾಣಗಳಲ್ಲಿ ಒಂದಾದ ಸ್ಕಂದ ಪುರಾಣದ ಪ್ರಕಾರ, ಸೂರಪದ್ಮ, ಸಿಂಹಮುಖ ಹಾಗು ತಾರಕಾಸುರ ರಾಕ್ಷಸರು ತಮ್ಮ ಸೈನ್ಯ ಕಟ್ಟಿಕೊಂಡು ದೇವತೆಗೆಳ ಮೇಲೆ ಯುದ್ಧ ಮಾಡಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಾರೆ. ರಾಕ್ಷಸರು ದೇವತೆಗಳನ್ನು ಹಾಗೂ ಮನುಷ್ಯರನ್ನು ಹಿಂಸೆ ನೀಡುತ್ತಾರೆ. ರಾಕ್ಷಸ ಸೂರಪದ್ಮನು ಶಿವನು ಸತಿಯ ನಂತರ ಐಹಿಕ ಜೀವನವನ್ನು ತ್ಯಜಿಸಿ, ಗಂಭೀರವಾದ ತಪ್ಪಸ್ಸಿನಲ್ಲಿ ಮುಳುಗಿದ್ದಾನೆಂಬುದನ್ನು ಅರಿತು, ತನಗೆ ಶಿವನ ಮಗನಿಂದಲೇ ಸಾವಾಗ ಬೇಕು ಎಂಬ ವರವನ್ನು ತೆಗೆದುಕೊಂಡಿರುತ್ತಾನೆ. ದೇವತೆಗಳು ತಪ್ಪಸ್ಸಿನಲ್ಲಿದ್ದ ಶಿವನ ಪಾದಕ್ಕೆ ಬಿದ್ದು ತಮ್ಮನ್ನು ರಕ್ಷಿಸುವಂತೆ ಕೇಳುತ್ತಾರೆ. ಬ್ರಹ್ಮ ದೇವನ ಸಲಹೆಯ ಮೇರೆಗೆ ದೇವತೆಗಳು ಮನ್ಮಥನ ಸಹಾಯ ಪಡುತ್ತಾರೆ. ಮನ್ಮಥ ಶಿವನಲ್ಲಿ ಕಾಮದ ಇಚ್ಚೆಯನ್ನು ಪ್ರಚೋದಿಸುತ್ತಾನೆ. ಇದರಿಂದ ಕೋಪಗೊಂಡ ಶಿವನು ಮನ್ಮಥನನ್ನು ಸುಟ್ಟು ಬೂದಿ ಮಾಡುತ್ತಾನೆ.



Click it and Unblock the Notifications