Latest Updates
-
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ!
ಸೂರಸಂಹಾರ: ಸ್ಕಂದ ಷಷ್ಠಿಯ ದಿನಾಂಕ ಹಾಗೂ ಮಹತ್ವ
ಮುರುಗ, ಕಾರ್ತಿಕೇಯ ಹೀಗೆ ಹಲವು ನಾಮದಿಂದ ಕರೆಯಲ್ಪಡುವ ಸುಬ್ರಹ್ಮಣ್ಯ ಸ್ವಾಮಿಯ ಭಕ್ತರಿಗೆ ಸೂರಸಂಹಾರ ತುಂಬಾ ಮಹತ್ವವಾದ ದಿನ. ಸೂರ ಸಂಹಾರವನ್ನು ಸ್ಕಂದ ಷಷ್ಟಿಯೆಂದು ಆಚರಿಸಲಾಗುವುದು. ದಕ್ಷಿಣ ಭಾರತದ ಪ್ರಮುಖ ಆಚರಣೆಗಳಲ್ಲಿ ಒಂದಾಗಿರುವ ಸ್ಕಂದ ಷಷ್ಠಿಯನ್ನು 6 ದಿನಗಳವರೆಗೆ ಆಚರಿಸಲಾಗುವುದು. ಈ ವರ್ಷ ನವೆಂಬರ್9ರಿಂದು ಆಚರಿಸಲಾಗುವುದು.

ಕಾರ್ತಿಕ ಮಾಸದ ಹುಣ್ಣಿಮೆಯಂದು ಪ್ರಾರಂಭವಾಗುವ ಹಬ್ಬ
ಕಾರ್ತಿಕ ಮಾಸದ ಹುಣ್ಣಿಮೆಯಂದು ಈ ಹಬ್ಬ ಪ್ರಾರಂಭವಾಗುತ್ತದೆ. ಈ ಹಬ್ಬದಲ್ಲಿ ದೇವರಿಗೆ ರಥೋತ್ಸವ ಹಾಗು ವಿಶೇಷ ಪೂಜೆಗಳು ನಡೆಯುತ್ತವೆ. ಸ್ಕಂದ ಅಥವಾ ಸುಬ್ರಹ್ಮಣ್ಯನು ತನ್ನ ಆಯುಧವನ್ನು(ಭರ್ಜಿಯನ್ನು) ಪಡೆಯುವ ಮೂಲಕ ಕತ್ತಲೆಯ ಮೇಲೆ ಆಧ್ಯಾತ್ಮದ ಬೆಳಕಿನ ಗೆಲ್ಲುವ ಹಬ್ಬ ಇದಾಗಿದೆ.

ಸೂರ ಸಂಹಾರ ದಿನಾಂಕ
ಷಷ್ಠಿ ತಿಥಿ ಪ್ರಾರಂಭ: ನವೆಂಬರ್ 9 ಬೆಳಗ್ಗೆ10:35ಕ್ಕೆ
ಷಷ್ಠಿ ತಿಥಿ ಮುಕ್ತಾಯ: ನವೆಂಬರ್ 10, 8:25ಕ್ಕೆ

ಆಚರಣೆ ಹೇಗೆ ಮಾಡಲಾಗುವುದು?
ಈ ಆಚರಣೆಯಲ್ಲಿ ಭಕ್ತರು ಉಪವಾಸವಿದ್ದು ಸುಬ್ರಮಣ್ಯಸ್ವಾಮಿಯ ಜಪ ಮಾಡುತ್ತಾ ನಿಷ್ಠೆಯಿಂದ ಆಚರಿಸುತ್ತಾರೆ. ಸೂರ ಸಂಹಾರ ಆಚರಿಸುವುದರಿಂದ ಭಕ್ತರಿಗೆ ಒಳ್ಳೆಯ ಫಲ ಸಿಗುವುದು ಎಂಬುವುದು ಸುಬ್ರಮಣ್ಯ ಸ್ವಾಮಿಯ ಭಕ್ತರ ಅಚಲ ನಂಬಿಕೆಯಾಗಿದೆ.

ಸೂರ ಸಂಹಾರದ ಹಿಂದಿರುವ ಪೌರಾಣಿಕ ಕತೆ
ಅತಿ ದೊಡ್ಡದಾದ ಹಾಗು 18 ಮಹಾಪುರಾಣಗಳಲ್ಲಿ ಒಂದಾದ ಸ್ಕಂದ ಪುರಾಣದ ಪ್ರಕಾರ, ಸೂರಪದ್ಮ, ಸಿಂಹಮುಖ ಹಾಗು ತಾರಕಾಸುರ ರಾಕ್ಷಸರು ತಮ್ಮ ಸೈನ್ಯ ಕಟ್ಟಿಕೊಂಡು ದೇವತೆಗೆಳ ಮೇಲೆ ಯುದ್ಧ ಮಾಡಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಾರೆ. ರಾಕ್ಷಸರು ದೇವತೆಗಳನ್ನು ಹಾಗೂ ಮನುಷ್ಯರನ್ನು ಹಿಂಸೆ ನೀಡುತ್ತಾರೆ. ರಾಕ್ಷಸ ಸೂರಪದ್ಮನು ಶಿವನು ಸತಿಯ ನಂತರ ಐಹಿಕ ಜೀವನವನ್ನು ತ್ಯಜಿಸಿ, ಗಂಭೀರವಾದ ತಪ್ಪಸ್ಸಿನಲ್ಲಿ ಮುಳುಗಿದ್ದಾನೆಂಬುದನ್ನು ಅರಿತು, ತನಗೆ ಶಿವನ ಮಗನಿಂದಲೇ ಸಾವಾಗ ಬೇಕು ಎಂಬ ವರವನ್ನು ತೆಗೆದುಕೊಂಡಿರುತ್ತಾನೆ. ದೇವತೆಗಳು ತಪ್ಪಸ್ಸಿನಲ್ಲಿದ್ದ ಶಿವನ ಪಾದಕ್ಕೆ ಬಿದ್ದು ತಮ್ಮನ್ನು ರಕ್ಷಿಸುವಂತೆ ಕೇಳುತ್ತಾರೆ. ಬ್ರಹ್ಮ ದೇವನ ಸಲಹೆಯ ಮೇರೆಗೆ ದೇವತೆಗಳು ಮನ್ಮಥನ ಸಹಾಯ ಪಡುತ್ತಾರೆ. ಮನ್ಮಥ ಶಿವನಲ್ಲಿ ಕಾಮದ ಇಚ್ಚೆಯನ್ನು ಪ್ರಚೋದಿಸುತ್ತಾನೆ. ಇದರಿಂದ ಕೋಪಗೊಂಡ ಶಿವನು ಮನ್ಮಥನನ್ನು ಸುಟ್ಟು ಬೂದಿ ಮಾಡುತ್ತಾನೆ.



Click it and Unblock the Notifications