Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ಮಹಾಲಯ ಅಮಾವಾಸ್ಯೆ 2019: ಪೌರಾಣಿಕ ಹಿನ್ನೆಲೆ

ಈ ದಿನದಂದು ನಮ್ಮನ್ನು ಅಗಲಿದ ಹಿರಿಯರಿಗೆ ವಂದಿಸಿ, ಅವರಿಗೆ ಇಷ್ಟವಾದ ಪದಾರ್ಥಗಳನ್ನು ಮಾಡಿ ತಿಲ ದರ್ಪಣವನ್ನು, ಜಲ ದರ್ಪಣವನ್ನು ಹಾಗೂ ಬಲಿಯನ್ನು, ಪಿಂಡವನ್ನು ನೀಡಲಾಗುವುದು. ಇದರಿಂದ ನಮ್ಮ ಪಿತೃಗಳು ತೃಪ್ತರಾಗಿ ಮುಂದಿನ ಪೀಳಿಗೆಗೆ ಹೆಚ್ಚಿನ ಸುಖ ಸಂತೋಷಗಳನ್ನು ನೀಡುತ್ತಾರೆ ಎಂಬುವುದು ನಂಬಿಕೆ.
ಮಹಾಲಯ ಅಮಾವಾಸ್ಯೆಯ ಪೌರಾಣಿಕ ಹಿನ್ನಲೆ:
ಮಹಾಭಾರತ ಕತೆಯಲ್ಲಿ ಕುಂತಿ ಪುತ್ರನಾದ ಕರ್ಣನು, ಕೌರವರರ ಪಡೆಯ ಕಡೆ ನಿಂತು, ಪಾಂಡವರ ವಿರುದ್ಧ ಹೋರಾಡಿದನು. ಈ ಯುದ್ಧದಲ್ಲಿ ಕರ್ಣನು ಅರ್ಜುನನಿಂದ ಹತನಾದನು. ಹೀಗೆ ಹತನಾದ ಕರ್ಣನನ್ನು ದೇವದೂತರು ಸ್ವರ್ಗಕ್ಕೆ ಕರೆದು ಕೊಂಡು ಹೋಗುವಾಗ ಕರ್ಣನಿಗೆ ತುಂಬಾ ಹಸಿವಾಗುತ್ತದೆ. ಆದರೆ ಮಾರ್ಗ ಮಧ್ಯದಲ್ಲಿ ಕರ್ಣನಿಗೆ ತಿನ್ನಲು ಏನೂ ಸಿಗುವುದಿಲ್ಲ.
ಅವನಿಗೆ ಎಲ್ಲೆಲ್ಲೂ ಬಂಗಾರ, ಬೆಳ್ಳಿ ಮುಂತಾದ ಆಭರಣಗಳೇ ಕಾಣುತ್ತವೆ. ಹಸಿವು ತಾಳಲಾರದೆ ಕರ್ಣನು ಯಮಧರ್ಮನನ್ನು ಕುರಿತು ಭಕ್ತಿಯಿಂದ ಪ್ರಾರ್ಥಿಸುತ್ತಾನೆ. ಕರ್ಣನ ಪ್ರಾರ್ಥನೆಗೆ ಯಮನು ಪ್ರತ್ಯಕ್ಷನಾಗಿ ಭಾದ್ರಪದಮಾಸದ ಮಹಾಲಯ ಪಕ್ಷದ ದಿನಗಳಂದು ದಾನವನ್ನು ಮಾಡುವಂತೆ ಹೇಳುತ್ತಾನೆ.
ಯಮನ ಆದೇಶದಂತೆ ಕರ್ಣನು ಮತ್ತೆ ಭೂಮಿಗೆ ಹಿಂತಿರುಗಿ ಭಾದ್ರಪದ ಮಾಸದ ಮಹಾಲಯ ಪಕ್ಷದ ದಿನಗಳಂದು ತನ್ನ ಹಿರಿಯರಿಗೆ ಹಾಗೂ ಬಡವರಿಗೆ ಅನ್ನ ಹಾಗು ವಸ್ತ್ರದಾನವನ್ನು ಮಾಡುತ್ತಾನೆ. ಇದರಿಂದ ಸಂತುಷ್ಟರಾದ ಪಿತೃಗಳು ಅವನನ್ನು ಹರಸುತ್ತಾರೆ. ಹಿರಿಯರ ಆರ್ಶೀವಾದ ಪಡೆದ ಕರ್ಣನು ಯಾವುದೇ ತೊಂದರೆಯಿಲ್ಲದೇ ಸ್ವರ್ಗಕ್ಕೆ ಹೋಗುತ್ತಾನೆ ಎಂದು ಪುರಾಣಗಳಲ್ಲಿ ಹೇಳಿದೆ. ಈ ಕತೆಯ ಆಧಾರದ ಮೇಲೆ ಪ್ರತಿವರ್ಷವೂ ಮಹಾಲಯ ಅಮಾವಾಸ್ಯೆಗೆ ನಮ್ಮನ್ನು ಅಗಲಿದ ಹಿರಿಯರನ್ನು ತಪ್ತಿಪಡಿಸಲು ಅವರಿಗೆ ಇಷ್ಟವಾದ ಅಡುಗೆಗಳನ್ನು (ವೆಜ್ ಹಾಗೂ ನಾನ್ ವೆಜ್) ಹಾಗೂ ವಸ್ತ್ರಗಳನ್ನು ಇಟ್ಟು ಆರ್ಶೀವಾದ ಕೇಳುವ ಆಚರಣೆ ತಲಾತಲಾಂತರಗಳಿಂದ ಪಾಲಿಸಲಾಗುತ್ತಿದೆ.
ಈ ಅಮಾವಾಸ್ಯೆಯ ಮಾರನೆ ದಿನದಿಂದ ನಾಡಹಬ್ಬ ದಸರಾದ ಹಬ್ಬದ ಸಡಗರ ಪ್ರಾರಂಭವಾಗುವುದು.



Click it and Unblock the Notifications