Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಹಾಲಯ ಅಮಾವಾಸ್ಯೆ 2019: ಪೌರಾಣಿಕ ಹಿನ್ನೆಲೆ

ಈ ದಿನದಂದು ನಮ್ಮನ್ನು ಅಗಲಿದ ಹಿರಿಯರಿಗೆ ವಂದಿಸಿ, ಅವರಿಗೆ ಇಷ್ಟವಾದ ಪದಾರ್ಥಗಳನ್ನು ಮಾಡಿ ತಿಲ ದರ್ಪಣವನ್ನು, ಜಲ ದರ್ಪಣವನ್ನು ಹಾಗೂ ಬಲಿಯನ್ನು, ಪಿಂಡವನ್ನು ನೀಡಲಾಗುವುದು. ಇದರಿಂದ ನಮ್ಮ ಪಿತೃಗಳು ತೃಪ್ತರಾಗಿ ಮುಂದಿನ ಪೀಳಿಗೆಗೆ ಹೆಚ್ಚಿನ ಸುಖ ಸಂತೋಷಗಳನ್ನು ನೀಡುತ್ತಾರೆ ಎಂಬುವುದು ನಂಬಿಕೆ.
ಮಹಾಲಯ ಅಮಾವಾಸ್ಯೆಯ ಪೌರಾಣಿಕ ಹಿನ್ನಲೆ:
ಮಹಾಭಾರತ ಕತೆಯಲ್ಲಿ ಕುಂತಿ ಪುತ್ರನಾದ ಕರ್ಣನು, ಕೌರವರರ ಪಡೆಯ ಕಡೆ ನಿಂತು, ಪಾಂಡವರ ವಿರುದ್ಧ ಹೋರಾಡಿದನು. ಈ ಯುದ್ಧದಲ್ಲಿ ಕರ್ಣನು ಅರ್ಜುನನಿಂದ ಹತನಾದನು. ಹೀಗೆ ಹತನಾದ ಕರ್ಣನನ್ನು ದೇವದೂತರು ಸ್ವರ್ಗಕ್ಕೆ ಕರೆದು ಕೊಂಡು ಹೋಗುವಾಗ ಕರ್ಣನಿಗೆ ತುಂಬಾ ಹಸಿವಾಗುತ್ತದೆ. ಆದರೆ ಮಾರ್ಗ ಮಧ್ಯದಲ್ಲಿ ಕರ್ಣನಿಗೆ ತಿನ್ನಲು ಏನೂ ಸಿಗುವುದಿಲ್ಲ.
ಅವನಿಗೆ ಎಲ್ಲೆಲ್ಲೂ ಬಂಗಾರ, ಬೆಳ್ಳಿ ಮುಂತಾದ ಆಭರಣಗಳೇ ಕಾಣುತ್ತವೆ. ಹಸಿವು ತಾಳಲಾರದೆ ಕರ್ಣನು ಯಮಧರ್ಮನನ್ನು ಕುರಿತು ಭಕ್ತಿಯಿಂದ ಪ್ರಾರ್ಥಿಸುತ್ತಾನೆ. ಕರ್ಣನ ಪ್ರಾರ್ಥನೆಗೆ ಯಮನು ಪ್ರತ್ಯಕ್ಷನಾಗಿ ಭಾದ್ರಪದಮಾಸದ ಮಹಾಲಯ ಪಕ್ಷದ ದಿನಗಳಂದು ದಾನವನ್ನು ಮಾಡುವಂತೆ ಹೇಳುತ್ತಾನೆ.
ಯಮನ ಆದೇಶದಂತೆ ಕರ್ಣನು ಮತ್ತೆ ಭೂಮಿಗೆ ಹಿಂತಿರುಗಿ ಭಾದ್ರಪದ ಮಾಸದ ಮಹಾಲಯ ಪಕ್ಷದ ದಿನಗಳಂದು ತನ್ನ ಹಿರಿಯರಿಗೆ ಹಾಗೂ ಬಡವರಿಗೆ ಅನ್ನ ಹಾಗು ವಸ್ತ್ರದಾನವನ್ನು ಮಾಡುತ್ತಾನೆ. ಇದರಿಂದ ಸಂತುಷ್ಟರಾದ ಪಿತೃಗಳು ಅವನನ್ನು ಹರಸುತ್ತಾರೆ. ಹಿರಿಯರ ಆರ್ಶೀವಾದ ಪಡೆದ ಕರ್ಣನು ಯಾವುದೇ ತೊಂದರೆಯಿಲ್ಲದೇ ಸ್ವರ್ಗಕ್ಕೆ ಹೋಗುತ್ತಾನೆ ಎಂದು ಪುರಾಣಗಳಲ್ಲಿ ಹೇಳಿದೆ. ಈ ಕತೆಯ ಆಧಾರದ ಮೇಲೆ ಪ್ರತಿವರ್ಷವೂ ಮಹಾಲಯ ಅಮಾವಾಸ್ಯೆಗೆ ನಮ್ಮನ್ನು ಅಗಲಿದ ಹಿರಿಯರನ್ನು ತಪ್ತಿಪಡಿಸಲು ಅವರಿಗೆ ಇಷ್ಟವಾದ ಅಡುಗೆಗಳನ್ನು (ವೆಜ್ ಹಾಗೂ ನಾನ್ ವೆಜ್) ಹಾಗೂ ವಸ್ತ್ರಗಳನ್ನು ಇಟ್ಟು ಆರ್ಶೀವಾದ ಕೇಳುವ ಆಚರಣೆ ತಲಾತಲಾಂತರಗಳಿಂದ ಪಾಲಿಸಲಾಗುತ್ತಿದೆ.
ಈ ಅಮಾವಾಸ್ಯೆಯ ಮಾರನೆ ದಿನದಿಂದ ನಾಡಹಬ್ಬ ದಸರಾದ ಹಬ್ಬದ ಸಡಗರ ಪ್ರಾರಂಭವಾಗುವುದು.



Click it and Unblock the Notifications