Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಮಹಾಲಯ ಅಮಾವಾಸ್ಯೆ 2019: ಪೌರಾಣಿಕ ಹಿನ್ನೆಲೆ

ಈ ದಿನದಂದು ನಮ್ಮನ್ನು ಅಗಲಿದ ಹಿರಿಯರಿಗೆ ವಂದಿಸಿ, ಅವರಿಗೆ ಇಷ್ಟವಾದ ಪದಾರ್ಥಗಳನ್ನು ಮಾಡಿ ತಿಲ ದರ್ಪಣವನ್ನು, ಜಲ ದರ್ಪಣವನ್ನು ಹಾಗೂ ಬಲಿಯನ್ನು, ಪಿಂಡವನ್ನು ನೀಡಲಾಗುವುದು. ಇದರಿಂದ ನಮ್ಮ ಪಿತೃಗಳು ತೃಪ್ತರಾಗಿ ಮುಂದಿನ ಪೀಳಿಗೆಗೆ ಹೆಚ್ಚಿನ ಸುಖ ಸಂತೋಷಗಳನ್ನು ನೀಡುತ್ತಾರೆ ಎಂಬುವುದು ನಂಬಿಕೆ.
ಮಹಾಲಯ ಅಮಾವಾಸ್ಯೆಯ ಪೌರಾಣಿಕ ಹಿನ್ನಲೆ:
ಮಹಾಭಾರತ ಕತೆಯಲ್ಲಿ ಕುಂತಿ ಪುತ್ರನಾದ ಕರ್ಣನು, ಕೌರವರರ ಪಡೆಯ ಕಡೆ ನಿಂತು, ಪಾಂಡವರ ವಿರುದ್ಧ ಹೋರಾಡಿದನು. ಈ ಯುದ್ಧದಲ್ಲಿ ಕರ್ಣನು ಅರ್ಜುನನಿಂದ ಹತನಾದನು. ಹೀಗೆ ಹತನಾದ ಕರ್ಣನನ್ನು ದೇವದೂತರು ಸ್ವರ್ಗಕ್ಕೆ ಕರೆದು ಕೊಂಡು ಹೋಗುವಾಗ ಕರ್ಣನಿಗೆ ತುಂಬಾ ಹಸಿವಾಗುತ್ತದೆ. ಆದರೆ ಮಾರ್ಗ ಮಧ್ಯದಲ್ಲಿ ಕರ್ಣನಿಗೆ ತಿನ್ನಲು ಏನೂ ಸಿಗುವುದಿಲ್ಲ.
ಅವನಿಗೆ ಎಲ್ಲೆಲ್ಲೂ ಬಂಗಾರ, ಬೆಳ್ಳಿ ಮುಂತಾದ ಆಭರಣಗಳೇ ಕಾಣುತ್ತವೆ. ಹಸಿವು ತಾಳಲಾರದೆ ಕರ್ಣನು ಯಮಧರ್ಮನನ್ನು ಕುರಿತು ಭಕ್ತಿಯಿಂದ ಪ್ರಾರ್ಥಿಸುತ್ತಾನೆ. ಕರ್ಣನ ಪ್ರಾರ್ಥನೆಗೆ ಯಮನು ಪ್ರತ್ಯಕ್ಷನಾಗಿ ಭಾದ್ರಪದಮಾಸದ ಮಹಾಲಯ ಪಕ್ಷದ ದಿನಗಳಂದು ದಾನವನ್ನು ಮಾಡುವಂತೆ ಹೇಳುತ್ತಾನೆ.
ಯಮನ ಆದೇಶದಂತೆ ಕರ್ಣನು ಮತ್ತೆ ಭೂಮಿಗೆ ಹಿಂತಿರುಗಿ ಭಾದ್ರಪದ ಮಾಸದ ಮಹಾಲಯ ಪಕ್ಷದ ದಿನಗಳಂದು ತನ್ನ ಹಿರಿಯರಿಗೆ ಹಾಗೂ ಬಡವರಿಗೆ ಅನ್ನ ಹಾಗು ವಸ್ತ್ರದಾನವನ್ನು ಮಾಡುತ್ತಾನೆ. ಇದರಿಂದ ಸಂತುಷ್ಟರಾದ ಪಿತೃಗಳು ಅವನನ್ನು ಹರಸುತ್ತಾರೆ. ಹಿರಿಯರ ಆರ್ಶೀವಾದ ಪಡೆದ ಕರ್ಣನು ಯಾವುದೇ ತೊಂದರೆಯಿಲ್ಲದೇ ಸ್ವರ್ಗಕ್ಕೆ ಹೋಗುತ್ತಾನೆ ಎಂದು ಪುರಾಣಗಳಲ್ಲಿ ಹೇಳಿದೆ. ಈ ಕತೆಯ ಆಧಾರದ ಮೇಲೆ ಪ್ರತಿವರ್ಷವೂ ಮಹಾಲಯ ಅಮಾವಾಸ್ಯೆಗೆ ನಮ್ಮನ್ನು ಅಗಲಿದ ಹಿರಿಯರನ್ನು ತಪ್ತಿಪಡಿಸಲು ಅವರಿಗೆ ಇಷ್ಟವಾದ ಅಡುಗೆಗಳನ್ನು (ವೆಜ್ ಹಾಗೂ ನಾನ್ ವೆಜ್) ಹಾಗೂ ವಸ್ತ್ರಗಳನ್ನು ಇಟ್ಟು ಆರ್ಶೀವಾದ ಕೇಳುವ ಆಚರಣೆ ತಲಾತಲಾಂತರಗಳಿಂದ ಪಾಲಿಸಲಾಗುತ್ತಿದೆ.
ಈ ಅಮಾವಾಸ್ಯೆಯ ಮಾರನೆ ದಿನದಿಂದ ನಾಡಹಬ್ಬ ದಸರಾದ ಹಬ್ಬದ ಸಡಗರ ಪ್ರಾರಂಭವಾಗುವುದು.



Click it and Unblock the Notifications
