Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ಮಹಾಲಯ ಅಮಾವಾಸ್ಯೆ 2019: ಪೌರಾಣಿಕ ಹಿನ್ನೆಲೆ

ಈ ದಿನದಂದು ನಮ್ಮನ್ನು ಅಗಲಿದ ಹಿರಿಯರಿಗೆ ವಂದಿಸಿ, ಅವರಿಗೆ ಇಷ್ಟವಾದ ಪದಾರ್ಥಗಳನ್ನು ಮಾಡಿ ತಿಲ ದರ್ಪಣವನ್ನು, ಜಲ ದರ್ಪಣವನ್ನು ಹಾಗೂ ಬಲಿಯನ್ನು, ಪಿಂಡವನ್ನು ನೀಡಲಾಗುವುದು. ಇದರಿಂದ ನಮ್ಮ ಪಿತೃಗಳು ತೃಪ್ತರಾಗಿ ಮುಂದಿನ ಪೀಳಿಗೆಗೆ ಹೆಚ್ಚಿನ ಸುಖ ಸಂತೋಷಗಳನ್ನು ನೀಡುತ್ತಾರೆ ಎಂಬುವುದು ನಂಬಿಕೆ.
ಮಹಾಲಯ ಅಮಾವಾಸ್ಯೆಯ ಪೌರಾಣಿಕ ಹಿನ್ನಲೆ:
ಮಹಾಭಾರತ ಕತೆಯಲ್ಲಿ ಕುಂತಿ ಪುತ್ರನಾದ ಕರ್ಣನು, ಕೌರವರರ ಪಡೆಯ ಕಡೆ ನಿಂತು, ಪಾಂಡವರ ವಿರುದ್ಧ ಹೋರಾಡಿದನು. ಈ ಯುದ್ಧದಲ್ಲಿ ಕರ್ಣನು ಅರ್ಜುನನಿಂದ ಹತನಾದನು. ಹೀಗೆ ಹತನಾದ ಕರ್ಣನನ್ನು ದೇವದೂತರು ಸ್ವರ್ಗಕ್ಕೆ ಕರೆದು ಕೊಂಡು ಹೋಗುವಾಗ ಕರ್ಣನಿಗೆ ತುಂಬಾ ಹಸಿವಾಗುತ್ತದೆ. ಆದರೆ ಮಾರ್ಗ ಮಧ್ಯದಲ್ಲಿ ಕರ್ಣನಿಗೆ ತಿನ್ನಲು ಏನೂ ಸಿಗುವುದಿಲ್ಲ.
ಅವನಿಗೆ ಎಲ್ಲೆಲ್ಲೂ ಬಂಗಾರ, ಬೆಳ್ಳಿ ಮುಂತಾದ ಆಭರಣಗಳೇ ಕಾಣುತ್ತವೆ. ಹಸಿವು ತಾಳಲಾರದೆ ಕರ್ಣನು ಯಮಧರ್ಮನನ್ನು ಕುರಿತು ಭಕ್ತಿಯಿಂದ ಪ್ರಾರ್ಥಿಸುತ್ತಾನೆ. ಕರ್ಣನ ಪ್ರಾರ್ಥನೆಗೆ ಯಮನು ಪ್ರತ್ಯಕ್ಷನಾಗಿ ಭಾದ್ರಪದಮಾಸದ ಮಹಾಲಯ ಪಕ್ಷದ ದಿನಗಳಂದು ದಾನವನ್ನು ಮಾಡುವಂತೆ ಹೇಳುತ್ತಾನೆ.
ಯಮನ ಆದೇಶದಂತೆ ಕರ್ಣನು ಮತ್ತೆ ಭೂಮಿಗೆ ಹಿಂತಿರುಗಿ ಭಾದ್ರಪದ ಮಾಸದ ಮಹಾಲಯ ಪಕ್ಷದ ದಿನಗಳಂದು ತನ್ನ ಹಿರಿಯರಿಗೆ ಹಾಗೂ ಬಡವರಿಗೆ ಅನ್ನ ಹಾಗು ವಸ್ತ್ರದಾನವನ್ನು ಮಾಡುತ್ತಾನೆ. ಇದರಿಂದ ಸಂತುಷ್ಟರಾದ ಪಿತೃಗಳು ಅವನನ್ನು ಹರಸುತ್ತಾರೆ. ಹಿರಿಯರ ಆರ್ಶೀವಾದ ಪಡೆದ ಕರ್ಣನು ಯಾವುದೇ ತೊಂದರೆಯಿಲ್ಲದೇ ಸ್ವರ್ಗಕ್ಕೆ ಹೋಗುತ್ತಾನೆ ಎಂದು ಪುರಾಣಗಳಲ್ಲಿ ಹೇಳಿದೆ. ಈ ಕತೆಯ ಆಧಾರದ ಮೇಲೆ ಪ್ರತಿವರ್ಷವೂ ಮಹಾಲಯ ಅಮಾವಾಸ್ಯೆಗೆ ನಮ್ಮನ್ನು ಅಗಲಿದ ಹಿರಿಯರನ್ನು ತಪ್ತಿಪಡಿಸಲು ಅವರಿಗೆ ಇಷ್ಟವಾದ ಅಡುಗೆಗಳನ್ನು (ವೆಜ್ ಹಾಗೂ ನಾನ್ ವೆಜ್) ಹಾಗೂ ವಸ್ತ್ರಗಳನ್ನು ಇಟ್ಟು ಆರ್ಶೀವಾದ ಕೇಳುವ ಆಚರಣೆ ತಲಾತಲಾಂತರಗಳಿಂದ ಪಾಲಿಸಲಾಗುತ್ತಿದೆ.
ಈ ಅಮಾವಾಸ್ಯೆಯ ಮಾರನೆ ದಿನದಿಂದ ನಾಡಹಬ್ಬ ದಸರಾದ ಹಬ್ಬದ ಸಡಗರ ಪ್ರಾರಂಭವಾಗುವುದು.



Click it and Unblock the Notifications