Just In
- 17 min ago ಬಿಲ್ಗೇಟ್ಸ್ ಟೀ ಕೇಳಿದ್ದಕ್ಕೆ ಟೀ ಮಾಡುತ್ತಿರುವ ನಾಯಿ: ಕ್ಯೂಟ್ ವೀಡಿಯೋ ವೈರಲ್
- 1 hr ago ಬದಲಾಯ್ತು ಡಿಡಿ ಲೋಗೋ: ಕೇಸರಿ ಬಣ್ಣಕ್ಕೆ ತಿರುಗಿರುವುದಕ್ಕೆ ಕೆಲವರ ಮೆಚ್ಚುಗೆ, ಕೆಲವರ ಟೀಕೆ
- 2 hrs ago ದಿನ ಭವಿಷ್ಯ ಏಪ್ರಿಲ್ 18: ಗುರುವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
- 5 hrs ago ಇದು ಮಾಮೂಲಿ ರೈಸ್ ಅಲ್ಲ..ತೆಂಗಿನಕಾಯಿ ರೈಸ್..! ಮಾಡೋದು ಸುಲಭ.!
Don't Miss
- Movies Lakshmibaramma: ಕೀರ್ತಿಯಿಂದ ಸತ್ಯ ತಿಳಿಬೇಕಂದ್ರೆ ಲಕ್ಷ್ಮೀ ಏನ್ ಮಾಡ್ಬೇಕು? ನೆಟ್ಟಿಗರು ಏನಂತಾರೆ?
- News ಐಯ್ಯಯ್ಯೋ.. ಶುರುವಾಯ್ತು ಗುರೂ ಮತ್ತೊಂದು ಮಹಾಯುದ್ಧ!
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Sports GT vs DC: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾಲಯ ಅಮಾವಾಸ್ಯೆ 2019: ಪೌರಾಣಿಕ ಹಿನ್ನೆಲೆ
ಈ ದಿನದಂದು ನಮ್ಮನ್ನು ಅಗಲಿದ ಹಿರಿಯರಿಗೆ ವಂದಿಸಿ, ಅವರಿಗೆ ಇಷ್ಟವಾದ ಪದಾರ್ಥಗಳನ್ನು ಮಾಡಿ ತಿಲ ದರ್ಪಣವನ್ನು, ಜಲ ದರ್ಪಣವನ್ನು ಹಾಗೂ ಬಲಿಯನ್ನು, ಪಿಂಡವನ್ನು ನೀಡಲಾಗುವುದು. ಇದರಿಂದ ನಮ್ಮ ಪಿತೃಗಳು ತೃಪ್ತರಾಗಿ ಮುಂದಿನ ಪೀಳಿಗೆಗೆ ಹೆಚ್ಚಿನ ಸುಖ ಸಂತೋಷಗಳನ್ನು ನೀಡುತ್ತಾರೆ ಎಂಬುವುದು ನಂಬಿಕೆ.
ಮಹಾಲಯ ಅಮಾವಾಸ್ಯೆಯ ಪೌರಾಣಿಕ ಹಿನ್ನಲೆ:
ಮಹಾಭಾರತ ಕತೆಯಲ್ಲಿ ಕುಂತಿ ಪುತ್ರನಾದ ಕರ್ಣನು, ಕೌರವರರ ಪಡೆಯ ಕಡೆ ನಿಂತು, ಪಾಂಡವರ ವಿರುದ್ಧ ಹೋರಾಡಿದನು. ಈ ಯುದ್ಧದಲ್ಲಿ ಕರ್ಣನು ಅರ್ಜುನನಿಂದ ಹತನಾದನು. ಹೀಗೆ ಹತನಾದ ಕರ್ಣನನ್ನು ದೇವದೂತರು ಸ್ವರ್ಗಕ್ಕೆ ಕರೆದು ಕೊಂಡು ಹೋಗುವಾಗ ಕರ್ಣನಿಗೆ ತುಂಬಾ ಹಸಿವಾಗುತ್ತದೆ. ಆದರೆ ಮಾರ್ಗ ಮಧ್ಯದಲ್ಲಿ ಕರ್ಣನಿಗೆ ತಿನ್ನಲು ಏನೂ ಸಿಗುವುದಿಲ್ಲ.
ಅವನಿಗೆ ಎಲ್ಲೆಲ್ಲೂ ಬಂಗಾರ, ಬೆಳ್ಳಿ ಮುಂತಾದ ಆಭರಣಗಳೇ ಕಾಣುತ್ತವೆ. ಹಸಿವು ತಾಳಲಾರದೆ ಕರ್ಣನು ಯಮಧರ್ಮನನ್ನು ಕುರಿತು ಭಕ್ತಿಯಿಂದ ಪ್ರಾರ್ಥಿಸುತ್ತಾನೆ. ಕರ್ಣನ ಪ್ರಾರ್ಥನೆಗೆ ಯಮನು ಪ್ರತ್ಯಕ್ಷನಾಗಿ ಭಾದ್ರಪದಮಾಸದ ಮಹಾಲಯ ಪಕ್ಷದ ದಿನಗಳಂದು ದಾನವನ್ನು ಮಾಡುವಂತೆ ಹೇಳುತ್ತಾನೆ.
ಯಮನ ಆದೇಶದಂತೆ ಕರ್ಣನು ಮತ್ತೆ ಭೂಮಿಗೆ ಹಿಂತಿರುಗಿ ಭಾದ್ರಪದ ಮಾಸದ ಮಹಾಲಯ ಪಕ್ಷದ ದಿನಗಳಂದು ತನ್ನ ಹಿರಿಯರಿಗೆ ಹಾಗೂ ಬಡವರಿಗೆ ಅನ್ನ ಹಾಗು ವಸ್ತ್ರದಾನವನ್ನು ಮಾಡುತ್ತಾನೆ. ಇದರಿಂದ ಸಂತುಷ್ಟರಾದ ಪಿತೃಗಳು ಅವನನ್ನು ಹರಸುತ್ತಾರೆ. ಹಿರಿಯರ ಆರ್ಶೀವಾದ ಪಡೆದ ಕರ್ಣನು ಯಾವುದೇ ತೊಂದರೆಯಿಲ್ಲದೇ ಸ್ವರ್ಗಕ್ಕೆ ಹೋಗುತ್ತಾನೆ ಎಂದು ಪುರಾಣಗಳಲ್ಲಿ ಹೇಳಿದೆ. ಈ ಕತೆಯ ಆಧಾರದ ಮೇಲೆ ಪ್ರತಿವರ್ಷವೂ ಮಹಾಲಯ ಅಮಾವಾಸ್ಯೆಗೆ ನಮ್ಮನ್ನು ಅಗಲಿದ ಹಿರಿಯರನ್ನು ತಪ್ತಿಪಡಿಸಲು ಅವರಿಗೆ ಇಷ್ಟವಾದ ಅಡುಗೆಗಳನ್ನು (ವೆಜ್ ಹಾಗೂ ನಾನ್ ವೆಜ್) ಹಾಗೂ ವಸ್ತ್ರಗಳನ್ನು ಇಟ್ಟು ಆರ್ಶೀವಾದ ಕೇಳುವ ಆಚರಣೆ ತಲಾತಲಾಂತರಗಳಿಂದ ಪಾಲಿಸಲಾಗುತ್ತಿದೆ.
ಈ ಅಮಾವಾಸ್ಯೆಯ ಮಾರನೆ ದಿನದಿಂದ ನಾಡಹಬ್ಬ ದಸರಾದ ಹಬ್ಬದ ಸಡಗರ ಪ್ರಾರಂಭವಾಗುವುದು.