Latest Updates
-
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ
ಮಹಾಲಯ ಅಮಾವಾಸ್ಯೆ 2019: ಪೌರಾಣಿಕ ಹಿನ್ನೆಲೆ

ಈ ದಿನದಂದು ನಮ್ಮನ್ನು ಅಗಲಿದ ಹಿರಿಯರಿಗೆ ವಂದಿಸಿ, ಅವರಿಗೆ ಇಷ್ಟವಾದ ಪದಾರ್ಥಗಳನ್ನು ಮಾಡಿ ತಿಲ ದರ್ಪಣವನ್ನು, ಜಲ ದರ್ಪಣವನ್ನು ಹಾಗೂ ಬಲಿಯನ್ನು, ಪಿಂಡವನ್ನು ನೀಡಲಾಗುವುದು. ಇದರಿಂದ ನಮ್ಮ ಪಿತೃಗಳು ತೃಪ್ತರಾಗಿ ಮುಂದಿನ ಪೀಳಿಗೆಗೆ ಹೆಚ್ಚಿನ ಸುಖ ಸಂತೋಷಗಳನ್ನು ನೀಡುತ್ತಾರೆ ಎಂಬುವುದು ನಂಬಿಕೆ.
ಮಹಾಲಯ ಅಮಾವಾಸ್ಯೆಯ ಪೌರಾಣಿಕ ಹಿನ್ನಲೆ:
ಮಹಾಭಾರತ ಕತೆಯಲ್ಲಿ ಕುಂತಿ ಪುತ್ರನಾದ ಕರ್ಣನು, ಕೌರವರರ ಪಡೆಯ ಕಡೆ ನಿಂತು, ಪಾಂಡವರ ವಿರುದ್ಧ ಹೋರಾಡಿದನು. ಈ ಯುದ್ಧದಲ್ಲಿ ಕರ್ಣನು ಅರ್ಜುನನಿಂದ ಹತನಾದನು. ಹೀಗೆ ಹತನಾದ ಕರ್ಣನನ್ನು ದೇವದೂತರು ಸ್ವರ್ಗಕ್ಕೆ ಕರೆದು ಕೊಂಡು ಹೋಗುವಾಗ ಕರ್ಣನಿಗೆ ತುಂಬಾ ಹಸಿವಾಗುತ್ತದೆ. ಆದರೆ ಮಾರ್ಗ ಮಧ್ಯದಲ್ಲಿ ಕರ್ಣನಿಗೆ ತಿನ್ನಲು ಏನೂ ಸಿಗುವುದಿಲ್ಲ.
ಅವನಿಗೆ ಎಲ್ಲೆಲ್ಲೂ ಬಂಗಾರ, ಬೆಳ್ಳಿ ಮುಂತಾದ ಆಭರಣಗಳೇ ಕಾಣುತ್ತವೆ. ಹಸಿವು ತಾಳಲಾರದೆ ಕರ್ಣನು ಯಮಧರ್ಮನನ್ನು ಕುರಿತು ಭಕ್ತಿಯಿಂದ ಪ್ರಾರ್ಥಿಸುತ್ತಾನೆ. ಕರ್ಣನ ಪ್ರಾರ್ಥನೆಗೆ ಯಮನು ಪ್ರತ್ಯಕ್ಷನಾಗಿ ಭಾದ್ರಪದಮಾಸದ ಮಹಾಲಯ ಪಕ್ಷದ ದಿನಗಳಂದು ದಾನವನ್ನು ಮಾಡುವಂತೆ ಹೇಳುತ್ತಾನೆ.
ಯಮನ ಆದೇಶದಂತೆ ಕರ್ಣನು ಮತ್ತೆ ಭೂಮಿಗೆ ಹಿಂತಿರುಗಿ ಭಾದ್ರಪದ ಮಾಸದ ಮಹಾಲಯ ಪಕ್ಷದ ದಿನಗಳಂದು ತನ್ನ ಹಿರಿಯರಿಗೆ ಹಾಗೂ ಬಡವರಿಗೆ ಅನ್ನ ಹಾಗು ವಸ್ತ್ರದಾನವನ್ನು ಮಾಡುತ್ತಾನೆ. ಇದರಿಂದ ಸಂತುಷ್ಟರಾದ ಪಿತೃಗಳು ಅವನನ್ನು ಹರಸುತ್ತಾರೆ. ಹಿರಿಯರ ಆರ್ಶೀವಾದ ಪಡೆದ ಕರ್ಣನು ಯಾವುದೇ ತೊಂದರೆಯಿಲ್ಲದೇ ಸ್ವರ್ಗಕ್ಕೆ ಹೋಗುತ್ತಾನೆ ಎಂದು ಪುರಾಣಗಳಲ್ಲಿ ಹೇಳಿದೆ. ಈ ಕತೆಯ ಆಧಾರದ ಮೇಲೆ ಪ್ರತಿವರ್ಷವೂ ಮಹಾಲಯ ಅಮಾವಾಸ್ಯೆಗೆ ನಮ್ಮನ್ನು ಅಗಲಿದ ಹಿರಿಯರನ್ನು ತಪ್ತಿಪಡಿಸಲು ಅವರಿಗೆ ಇಷ್ಟವಾದ ಅಡುಗೆಗಳನ್ನು (ವೆಜ್ ಹಾಗೂ ನಾನ್ ವೆಜ್) ಹಾಗೂ ವಸ್ತ್ರಗಳನ್ನು ಇಟ್ಟು ಆರ್ಶೀವಾದ ಕೇಳುವ ಆಚರಣೆ ತಲಾತಲಾಂತರಗಳಿಂದ ಪಾಲಿಸಲಾಗುತ್ತಿದೆ.
ಈ ಅಮಾವಾಸ್ಯೆಯ ಮಾರನೆ ದಿನದಿಂದ ನಾಡಹಬ್ಬ ದಸರಾದ ಹಬ್ಬದ ಸಡಗರ ಪ್ರಾರಂಭವಾಗುವುದು.



Click it and Unblock the Notifications