Just In
Don't Miss
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- News ಕಾಂಗ್ರೆಸ್ ಸರ್ಕಾರ ನೀಡಿತ್ತು ಖಾಲಿ ಚೊಂಬು; ಮೋದಿ ಅದನ್ನು ಅಕ್ಷಯವನ್ನಾಗಿಸಿದ್ದಾರೆ: ಎಚ್ಡಿಡಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಹಾಲಯ ಅಮಾವಾಸ್ಯೆ 2019: ಪೌರಾಣಿಕ ಹಿನ್ನೆಲೆ
ಈ ದಿನದಂದು ನಮ್ಮನ್ನು ಅಗಲಿದ ಹಿರಿಯರಿಗೆ ವಂದಿಸಿ, ಅವರಿಗೆ ಇಷ್ಟವಾದ ಪದಾರ್ಥಗಳನ್ನು ಮಾಡಿ ತಿಲ ದರ್ಪಣವನ್ನು, ಜಲ ದರ್ಪಣವನ್ನು ಹಾಗೂ ಬಲಿಯನ್ನು, ಪಿಂಡವನ್ನು ನೀಡಲಾಗುವುದು. ಇದರಿಂದ ನಮ್ಮ ಪಿತೃಗಳು ತೃಪ್ತರಾಗಿ ಮುಂದಿನ ಪೀಳಿಗೆಗೆ ಹೆಚ್ಚಿನ ಸುಖ ಸಂತೋಷಗಳನ್ನು ನೀಡುತ್ತಾರೆ ಎಂಬುವುದು ನಂಬಿಕೆ.
ಮಹಾಲಯ ಅಮಾವಾಸ್ಯೆಯ ಪೌರಾಣಿಕ ಹಿನ್ನಲೆ:
ಮಹಾಭಾರತ ಕತೆಯಲ್ಲಿ ಕುಂತಿ ಪುತ್ರನಾದ ಕರ್ಣನು, ಕೌರವರರ ಪಡೆಯ ಕಡೆ ನಿಂತು, ಪಾಂಡವರ ವಿರುದ್ಧ ಹೋರಾಡಿದನು. ಈ ಯುದ್ಧದಲ್ಲಿ ಕರ್ಣನು ಅರ್ಜುನನಿಂದ ಹತನಾದನು. ಹೀಗೆ ಹತನಾದ ಕರ್ಣನನ್ನು ದೇವದೂತರು ಸ್ವರ್ಗಕ್ಕೆ ಕರೆದು ಕೊಂಡು ಹೋಗುವಾಗ ಕರ್ಣನಿಗೆ ತುಂಬಾ ಹಸಿವಾಗುತ್ತದೆ. ಆದರೆ ಮಾರ್ಗ ಮಧ್ಯದಲ್ಲಿ ಕರ್ಣನಿಗೆ ತಿನ್ನಲು ಏನೂ ಸಿಗುವುದಿಲ್ಲ.
ಅವನಿಗೆ ಎಲ್ಲೆಲ್ಲೂ ಬಂಗಾರ, ಬೆಳ್ಳಿ ಮುಂತಾದ ಆಭರಣಗಳೇ ಕಾಣುತ್ತವೆ. ಹಸಿವು ತಾಳಲಾರದೆ ಕರ್ಣನು ಯಮಧರ್ಮನನ್ನು ಕುರಿತು ಭಕ್ತಿಯಿಂದ ಪ್ರಾರ್ಥಿಸುತ್ತಾನೆ. ಕರ್ಣನ ಪ್ರಾರ್ಥನೆಗೆ ಯಮನು ಪ್ರತ್ಯಕ್ಷನಾಗಿ ಭಾದ್ರಪದಮಾಸದ ಮಹಾಲಯ ಪಕ್ಷದ ದಿನಗಳಂದು ದಾನವನ್ನು ಮಾಡುವಂತೆ ಹೇಳುತ್ತಾನೆ.
ಯಮನ ಆದೇಶದಂತೆ ಕರ್ಣನು ಮತ್ತೆ ಭೂಮಿಗೆ ಹಿಂತಿರುಗಿ ಭಾದ್ರಪದ ಮಾಸದ ಮಹಾಲಯ ಪಕ್ಷದ ದಿನಗಳಂದು ತನ್ನ ಹಿರಿಯರಿಗೆ ಹಾಗೂ ಬಡವರಿಗೆ ಅನ್ನ ಹಾಗು ವಸ್ತ್ರದಾನವನ್ನು ಮಾಡುತ್ತಾನೆ. ಇದರಿಂದ ಸಂತುಷ್ಟರಾದ ಪಿತೃಗಳು ಅವನನ್ನು ಹರಸುತ್ತಾರೆ. ಹಿರಿಯರ ಆರ್ಶೀವಾದ ಪಡೆದ ಕರ್ಣನು ಯಾವುದೇ ತೊಂದರೆಯಿಲ್ಲದೇ ಸ್ವರ್ಗಕ್ಕೆ ಹೋಗುತ್ತಾನೆ ಎಂದು ಪುರಾಣಗಳಲ್ಲಿ ಹೇಳಿದೆ. ಈ ಕತೆಯ ಆಧಾರದ ಮೇಲೆ ಪ್ರತಿವರ್ಷವೂ ಮಹಾಲಯ ಅಮಾವಾಸ್ಯೆಗೆ ನಮ್ಮನ್ನು ಅಗಲಿದ ಹಿರಿಯರನ್ನು ತಪ್ತಿಪಡಿಸಲು ಅವರಿಗೆ ಇಷ್ಟವಾದ ಅಡುಗೆಗಳನ್ನು (ವೆಜ್ ಹಾಗೂ ನಾನ್ ವೆಜ್) ಹಾಗೂ ವಸ್ತ್ರಗಳನ್ನು ಇಟ್ಟು ಆರ್ಶೀವಾದ ಕೇಳುವ ಆಚರಣೆ ತಲಾತಲಾಂತರಗಳಿಂದ ಪಾಲಿಸಲಾಗುತ್ತಿದೆ.
ಈ ಅಮಾವಾಸ್ಯೆಯ ಮಾರನೆ ದಿನದಿಂದ ನಾಡಹಬ್ಬ ದಸರಾದ ಹಬ್ಬದ ಸಡಗರ ಪ್ರಾರಂಭವಾಗುವುದು.