Latest Updates
-
ರಕ್ಷಾಬಂಧನ ವಿಶೇಷ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪ್ರಯಾಣಕ್ಕೂ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು!
ಶಬರಿಮಲೆಯ 18 ಪವಿತ್ರ ಮೆಟ್ಟಿಲುಗಳು ಏನನ್ನು ಸೂಚಿಸುತ್ತದೆ?
ಕೇರಳದ ಪುಣ್ಯ ಕ್ಷೇತ್ರಗಳಲ್ಲೊಂದು ಶಬರಿಮಲೆ ಅಯ್ಯಪ್ಪ. ಅಯ್ಯಪ್ಪನ ದರ್ಶನಕ್ಕೆ ಅದರಲ್ಲೂ ಮಕರ ಜ್ಯೋತಿಯಂದು ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಶಬರಿ ಮಲೆಗೆ ಹೋಗುವವರು 41 ದಿನಗಳ ಕಠಿಣ ವ್ರತವನ್ನು ಪಾಲಿಸಬೇಕು. ಸಾತ್ವಿಕ ಆಹಾರಗಳನ್ನಷ್ಟೇ ಸೇವಿಸಬೇಕು, ಬ್ರಹ್ಮಚರ್ಯ ಕಾಪಾಡಿಕೊಳ್ಳಬೇಕು, ಮಾಂಸ-ಮದ್ಯ, ಧೂಮಪಾನ ಇವುಗಳಿಂದ ದೂರವಿರಬೇಕು.
ಅಯ್ಯಪ್ಪ ಭಕ್ತರು ಈ ವ್ರತದ ಸಮಯದಲ್ಲಿ ಕಾಲಿಗೆ ಚಪ್ಪಲಿ ಕೂಡ ಧರಿಸುವುದಿಲ್ಲ, ಕಪ್ಪು ಅಥವಾ ಖಾವಿ ಪಂಚೆ, ಕುತ್ತಿಗೆಗೆ ಒಂದು ಒಂದು ಟವಲ್ ಸುತ್ತಿರುತ್ತಾರೆ, ಕೊರಳಿಗೆ ರುದ್ರಾಕ್ಷಿಯ ಮಾಲೆಗಳನ್ನು ಧರಿಸುತ್ತಾರೆ. ಸ್ವಾಮಿ ಅಯ್ಯಪ್ಪನಿಗೆ ಮಾಲೆ ಹಾಕಿದವರನ್ನು ಯಾರೂ ಹೆಸರಿಡಿದು ಕೂಗುವಿದಿಲ್ಲ, ಅವರನ್ನು ಸ್ವಾಮಿಯೆಂದೇ ಗೌರವಿಸುತ್ತಾರೆ. ಕನ್ನಿ ಸ್ವಾಮಿಗಳು ಕಪ್ಪು ಪಂಚೆ ಧರಿಸಿದರೆ, ಗುರು ಸ್ವಾಮಿಗಳು ಖಾವಿ ವಸ್ತ್ರವನ್ನು ಧರಿಸಿರುತ್ತಾರೆ.
ಅಯ್ಯಪ್ಪ ಸ್ವಾಮಿ ದೇವಾಲಯದ ಮೆಟ್ಟಿಲುಗಳನ್ನು ಏರಲು 10 ವರ್ಷಕ್ಕಿಂತ ಚಿಕ್ಕ ಪ್ರಾಯದ ಹುಡುಗಿಯರಿಗೆ ಹಾಗೂ 50 ವರ್ಷ ಮೇಲ್ಪಟ್ಟ ಮಹಿಳೆಯರಿಗಷ್ಟೇ (ಮುಟ್ಟು ನಿಂತ) ಅವಕಾಶ. ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ತಣ್ನೀರ ಸ್ನಾನ ಮಾಡಿ ಅಯ್ಯಪ್ಪನ ಭಜನೆಗಳನ್ನು ಹಾಡುತ್ತಾ ಸದಾ ಅಯ್ಯಪ್ಪನ ಧ್ಯಾನದಲ್ಲಿಯೇ ಇರುತ್ತಾರೆ ಅಯ್ಯಪ್ಪ ಭಕ್ತರು. 41ನೇ ದಿನ ಇರುಮುಡಿ ಹೊತ್ತುಕೊಂಡು ಅಯ್ಯಪ್ಪನ ದರ್ಶನಕ್ಕೆ ಬರುತ್ತಾರೆ. ಪಂಪಾ ನದಿಯಲ್ಲಿ ಮಿಂದು, ಶಬರಿ ಮಲೆಯನ್ನು ಏರಿ, 18 ಮೆಟ್ಟಿಲುಗಳನ್ನು ಹತ್ತಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಬೇಕು.
ಅಯ್ಯಪ್ಪ ಸ್ವಾಮಿಯ 18 ಮೆಟ್ಟಿಲುಗಳಲ್ಲಿ ಪ್ರತಿಯೊಂದು ಮೆಟ್ಟಿಲು ಒಂದೊಂದು ಅರ್ಥವನ್ನು ಸೂಚಿಸುತ್ತದೆ:

ಮೊದಲ ಐದು ಮೆಟ್ಟಿಲುಗಳು
ಇದು ಪಂಚೇಂದ್ರೀಯಗಳ ಕೆಲಸದ ಬಗ್ಗೆ ಹೇಳುತ್ತೆ
1. ಕಣ್ಣು: ಒಳ್ಳೆಯದನ್ನು ನೋಡಬೇಕು
2. ಕಿವಿ: ಒಳ್ಳೆಯದನ್ನು ಕೇಳಲು
3. ಮೂಗು: ತಾಜಾ ಗಾಳಿಯನ್ನು ಉಸಿರಾಡಬೇಕು, ದೇವರಿಗೆ ಅರ್ಪಿಸುವ ಸುಗಂಧವನ್ನು ತೆಗೆದುಕೊಳ್ಳಬೇಕು
4. ನಾಲಗೆ: ಒಳ್ಳೆಯದನ್ನೇ ಮಾತನಾಡಬೇಕು
5. ತ್ವಚೆ: ಜಪ ಮಾಲೆಯ ಸ್ಪರ್ಶ ಮಾತ್ರ ದೇಹವನ್ನು ತಾಗಬೇಕು

ಅಷ್ಟ ರಾಗಗಳನ್ನು ಸೂಚಿಸುವ ಮುಂದಿನ 8 ಮೆಟ್ಟಿಲುಗಳು
ಈ ಮೆಟ್ಟಿಲುಗಳು ಮನುಷ್ಯನಿಗೆ ದೈವತ್ವದ ಅನುಭವ ಉಂಟಾಗಲು ಇವುಗಳನ್ನು ತ್ಯಜಿಸಬೇಕೆಂದು ಸೂಚಿಸುತ್ತದೆ
6. ಕಾಮ
7. ಕ್ರೋಧ
8. ಲೋಭ
9. ಮೋಹ
10. ಮಧ
11. ಮತ್ಸರ
12. ಅಸೂಯೆ
13. ಕುತಂತ್ರ

ಅದರ ಮುಂದಿನ 3 ಮೆಟ್ಟಿಲುಗಳು
ಇದು ಮನುಷ್ಯನ ತ್ರಿಗುಣಗಳ ಬಗ್ಗೆ ಹೇಳುತ್ತದೆ
* ವ್ಯಕ್ತಿ ಯಾವಾಗಲೂ ಚಟುವಟಿಕೆಯಿಂದ ಇರಬೇಕು
* ಉದಾಸೀನ ಬಿಡಬೇಕು
* ಅಹಂಕಾರ ಇರಬಾರದು
ತನ್ನ ಕಾರ್ಯದ ಮೂಲಕ ದೈವವನ್ನು ಒಲಿಸಿಕೊಳ್ಳಬೇಕು.

ಕೊನೆಯ 2 ಮೆಟ್ಟಿಲುಗಳು
ಇದು ವಿದ್ಯೆ ಹಾಗೂ ಅವಿದ್ಯೆಯ ಕುರಿತು ಹೇಳಿತು ಹೇಳುತ್ತದೆ
ವಿದ್ಯೆಯೆಂಬ ಜ್ಞಾನದಿಂದ ಅವಿದ್ಯೆ ಎಂಬ ಅಹಂ ಅನ್ನು ತೊಡೆದು ಹಾಕಬೇಕು. ತಾನು ಸಂಪೂರ್ಣವಾಗಿ ದೇವರಿಗೆ ಶರಣಾಗಬೇಕು ಎಂದು ಹೇಳುತ್ತದೆ.



Click it and Unblock the Notifications