Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ಹುಣ್ಣಿಮೆ ಅಮಾವಾಸ್ಯೆ ಎನ್ನುವುದು ಚಂದ್ರನಿಗೆ ಗಣೇಶ ಕೊಟ್ಟ ಶಾಪ!
ನಮ್ಮ ಹಿಂದೂ ದೇವತೆಗಳ ಪುರಾಣದಲ್ಲಿ ಅನೇಕ ಚಿಕ್ಕ ಪುಟ್ಟ ಕಥೆಗಳಿವೆ. ಅದರಲ್ಲೂ ಭಗವಾನ್ ಗಣಪತಿ, ಶ್ರೀಕೃಷ್ಣ, ಹನುಮಂತ ಸೇರಿದಂತೆ ಅನೇಕ ದೇವತೆಗಳ ಬಾಲ್ಯ ಜೀವನದ ಕಥೆಗಳು ಸುಂದರವಾಗಿವೆ. ಪ್ರತಿಯೊಂದು ಸಹ ತನ್ನದೇ ಆದ ವಿಶೇಷತೆ ಹಾಗೂ ಅರ್ಥವನ್ನು ನೀಡುತ್ತವೆ.
ಕೆಲವೊಂದು ನಮ್ಮ ಹಬ್ಬ-ಹರಿದಿನಗಳ ಕಾರಣಗಳನ್ನು ಬಿಚ್ಚಿಡುತ್ತವೆ. ಅಂತಹ ಕಥೆಗಳಲ್ಲಿ ಪ್ರಥಮ ಪೂಜಿತ ಗಣೇಶನ ಕಥೆಗಳು ಒಂದು. ಗಣೇಶನ ವಿಗ್ರಹ ಅಥವಾ ಫೋಟೋಗಳಲ್ಲಿ ದಂತವೊಂದು ಅರ್ಧ ಮುರಿದಂತೆ ಇರುತ್ತದೆ. ಅಥವಾ ತನ್ನ ದಂತದ ಚೂರನ್ನು ಕೈಯಲ್ಲಿ ಹಿಡಿದುಕೊಂಡಿರುವಂತೆ ಇರುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಸುಂದರ ಕಥೆ ಇಲ್ಲಿದೆ...

ಕಥೆ-1
ಒಮ್ಮೆ ಗಣೇಶನು ಚೌತಿ ಹಬ್ಬದಂದು ಭಕ್ತರೆಲ್ಲರೂ ನೀಡಿರುವ ಸಿಹಿ ತಿಂಡಿಗಳನ್ನು ತಿಂದು, ತನ್ನ ವಾಹನವಾದ ಕ್ರೌಂಚಾ ಎಂಬ ಇಲಿಯ ಮೇಲೆ ಕುಳಿತು ಪ್ರಯಾಣಿಸುತ್ತಿದ್ದನು. ಹೀಗೆ ಸಾಗುತ್ತಿದ್ದಾಗ, ದಾರಿಯಲ್ಲೊಂದು ಹಾವು ಎದುರಾಯಿತು. ಇದನ್ನು ಕಂಡ ಇಲಿ ಭಯದಿಂದ ಹೆಜ್ಜೆಯನ್ನು ಹಿಂದೆ ಇಟ್ಟಿತು. ಇಲಿಯ ಭಯದಿಂದಾಗಿ ಗಣೇಶನು ಎಡವಿ ಬಿದ್ದನು. ಆಗ ಗಣೇಶನ ಹೊಟ್ಟೆ ಒಡೆದು, ತಿಂಡಿಗಳೆಲ್ಲಾ ಹೊರ ಬಿದ್ದವು. ಗಣೇಶ ಬೇಸರದಿಂದ ತಿಂಡಿಯನ್ನು ಪುನಃ ತುಂಬಿಕೊಂಡು, ಹಾವನ್ನು ಹೊಟ್ಟೆಗೆ ಬಿಗಿದುಕೊಂಡನು.

ಕಥೆ-2
ಇದನ್ನು ಗಮನಿಸುತ್ತಿದ್ದ ಚಂದ್ರನು ಗಣಪತಿಯ ಸ್ಥಿತಿಗೆ ಅಪಹಾಸ್ಯ ಮಾಡುತ್ತಾ ನಗಲಾರಂಭಿಸಿದನು. ಬೇಸರ ಹಾಗೂ ಕೋಪಗೊಂಡ ಗಣೇಶ ತನ್ನ ದಂತದ ತುದಿಯನ್ನು ಮುರಿದು, ಶಕ್ತಿಯಿಂದ ಚಂದ್ರನೆಡೆಗೆ ಎಸೆದನು.

ಕಥೆ-3
ಹೀಗೆ ಚಂದ್ರನಿಗೆ ತನ್ನ ಹಲ್ಲನ್ನು ಮುರಿದು ಹೊಡೆದ ಕಥೆಯು ಒಂದು ದಂತಕಥೆಯಲ್ಲಿ ಒಂದಾಯಿತು. ಚಂದ್ರನ ಸೌಂದರ್ಯ ಹಾಗೂ ಅಹಂಕಾರವನ್ನು ಖಂಡಿಸಿ, ಆಕಾಶದಲ್ಲಿ ಒಮ್ಮೆ ಸಂಪೂರ್ಣವಾಗಿ ಕಣ್ಮರೆಯಾಗಬೇಕು ಎಂದು ಶಾಪ ನೀಡಿದನು.

ಕಥೆ-4
ಗಣೇಶನ ಕೋಪಕ್ಕೆ ಗುರಿಯಾದ ಚಂದ್ರನಿಗೆ ತನ್ನ ತಪ್ಪಿನ ಅರಿವಾಯಿತು. ಜೊತೆಗೆ ಗಣೇಶನಲ್ಲಿ ಕ್ಷಮೆ ಯಾಚಿಸಿ ಶಾಪದಿಂದ ಮುಕ್ತಿ ಹೊಂದಲು ಕೇಳಿಕೊಂಡನು. ಆಗ ಗಣೇಶ ಒಮ್ಮೆ ಶಾಪ ನೀಡಿದ ಮೇಲೆ ಪುನಃ ಹಿಂದೆ ಪಡೆಯಲು ಸಾಧ್ಯವಿಲ್ಲ. ಆದರೆ ಅದರ ಪ್ರಮಾಣವನ್ನು ಕಡಿಮೆ ಮಾಡಬಹುದು ಎಂದನು. ತಿಂಗಳಲ್ಲಿ ಒಮ್ಮೆ ಮಾತ್ರ ಪೂರ್ಣ ಚಂದ್ರನಾಗಿ ಸುಂದರವಾಗಿ ಕಾಣಬಹುದು. ನಂತರ ಪುನಃ ಮರೆಯಾಗುತ್ತಾ ಹೋಗಬೇಕು ಎಂದು ಹೇಳಿದನು.

ಕಥೆ-5
ಹಾಗಾಗಿಯೇ ನಾವು ಚಂದ್ರನನ್ನು ತಿಂಗಳಲ್ಲಿ ಪೂರ್ಣಿಮೆ/ಹುಣ್ಣಿಮೆಯ ದಿನ ಪೂರ್ಣವಾಗಿ ನೋಡಲು ಸಾಧ್ಯ. ಉಳಿದ ದಿನಗಳಲ್ಲಿ ಕ್ಷೀಣಿಸುತ್ತಾ ಹೋಗುತ್ತಾನೆ. ಅಮವಾಸ್ಯೆಯ ದಿನ ಸಂಪೂರ್ಣವಾಗಿ ಮಾಯವಾಗುತ್ತಾನೆ.



Click it and Unblock the Notifications