Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಝೆನ್ ಕಥೆ: ಬುದ್ಧಿವಂತ ಭೂತ

ಆಕೆ ಸತ್ತ ಕೆಲವು ತಿಂಗಳುಗಳ ನಂತರ ಆಕೆಯ ಗಂಡ ಬೇರೆ ಹುಡುಗಿಯರಿಂದ ದೂರವಿರಲು ಆರಂಭಿಸಿದ.. ಆದ್ರೆ ಅದೊಂದು ದಿನ ಅವನು ಒಂದು ಹುಡುಗಿಯನ್ನು ಭೇಟಿ ಮಾಡಿದ. ಆ ಭೇಟಿಯು ಅವನಲ್ಲಿ ಪ್ರೀತಿ ಮೂಡುವಂತೆ ಮಾಡಿತು, ಅವನು ಪ್ರೀತಿಯಲ್ಲಿ ಬಿದ್ದು ಬಿಟ್ಟ. ಅದೊಂದು ದಿನ ಅವರಿಬ್ಬರೂ ಮದುವೆಯಾಗಲು ನಿರ್ಧರಿಸಿದರು.
ಆಗ ಅವನ ಮಾಜಿ ಪತ್ನಿ ಅವನಿಗೆ ಕಾಣಿಸಿಕೊಂಡಳು.. ನನಗೆ ಕೊಟ್ಟ ಭಾಷೆಯನ್ನು ನೀನು ಉಳಿಸಿಕೊಳ್ಳಲಿಲ್ಲ ಅಂತ ಅವನನ್ನು ದೂರಿದಳು.. ಪ್ರತಿ ದಿನ ರಾತ್ರಿ ಭೂತವಾಗಿ ಬಂದು ಅವನನ್ನು ಹಂಗಿಸಿ ಕಾಡೋಕೆ ಶುರುಮಾಡಿದಳು.. ಅವನು ತನ್ನ ಪ್ರಿಯತಮೆಯೊಂದಿಗೆ ಕಳೆದ ಸಮಯ ಆಡಿದ ಪ್ರತಿಯೊಂದು ಮಾತುಕತೆಗಳು, ಪ್ರತಿಯೊಂದು ಪದಗಳು ಮತ್ತು ಅವರ ನಡುವೆ ನಡೆದ ಪ್ರತಿಯೊಂದು ವಿಷಯಗಳು ನೆನಪಿಗೆ ಬರುವಂತೆ ಮಾಡಿತು ಈ ಪ್ರೇತ.
ಇದರಿಂದ ಅವನಿಗೆ ರಾತ್ರಿಯೆಲ್ಲ ನಿದ್ದೆ ಇಲ್ಲದಂತಾಯಿತು.. ಮನಸ್ಸಿಗೆ ಅಸಮಾಧಾನವಾಯಿತು.
ಇದರಿಂದ ಹತಾಶೆಗೊಂಡ ಅವನು ತನ್ನ ಹಳ್ಳಿಯ ಬಳಿಯೇ ವಾಸವಾಗಿದ್ದ ಝೆನ್ ಮಾಸ್ಟರ್ (ಝೆನ್ ಗುರುಗಳು) ಬಳಿಗೆ ಬಂದರು. ತಮಗಾದ ಎಲ್ಲಾ ಅನುಭವಗಳನ್ನು ಆ ಗುರುಗಳ ಬಳಿಯಲ್ಲಿ ನಿವೇದಿಸಿಕೊಂಡರು.. ಇದನ್ನು ಕೇಳಿದ ನಂತರ ಗುರುಗಳು " ಇದು ಸಾಮಾನ್ಯವಾದ ಭೂತವಲ್ಲ.. ಇದು ಬುದ್ಧಿವಂತ ಭೂತ ಅಂತ ಹೇಳಿಬಿಟ್ಟರು.." ಹೌದು ಗುರುಗಳೇ.. ನಾನು ಏನೇನು ಹೇಳಿದೆನೋ ಮತ್ತು ನಾನು ಏನು ಮಾಡಿದ್ದೆ ಮತ್ತು ಏನು ಮಾಡಬೇಕು ಅಂದುಕೊಂಡಿದ್ದೆ ಅಂತ ಅದೆಲ್ಲವನ್ನೂ ಮತ್ತೆ ಮತ್ತೆ ನೆನಪು ಮಾಡುವಂತೆ ಮಾಡಿತು ಆ ಭೂತ" ಅಂತ ಅವನು ಅಚ್ಚರಿಯಾಗಿ ಹೇಳಿದ. ಇದನ್ನು ಕೇಳಿದ ಗುರುಗಳು ನಗು ನಗುತ್ತಲೇ "ನೀನು ಆ ಭೂತಕ್ಕೆ ಅಚ್ಚು ಮೆಚ್ಚಿನವನಾಗಿದ್ದೀಯ.. ಅದ್ರೆ ನೀನು ಮುಂದಿನ ಸಾರಿ ಆ ಭೂತ ಕಂಡಾಗ ಏನು ಮಾಡಬೇಕು ಅಂತ ನಾನು ನಿನಗೆ ಹೇಳ್ತೀನಿ" ಅಂತ ಹೇಳಿದರು.
ಆ ರಾತ್ರಿ.. ಆ ಭೂತ ಮರಳಿ ಬಂತು... ಆ ಗುರುಗಳು ಹೇಳಿದಂತೆ ಅವನು ಪ್ರತಿಕ್ರಿಯಿಸೋದಕ್ಕೆ ಶುರು ಮಾಡಿದ.. "ನೀನು ತುಂಬಾ ಬುದ್ಧಿವಂತ.." ಹೀಗಾಗಿ ನಾನು ನಿನ್ನಿಂದ ಯಾವುದನ್ನೂ ಮುಚ್ಚಿಟ್ಟಿಲ್ಲ ಅಂತ ನಿನಗೂ ಗೊತ್ತು.. ಆದ್ರೆ ನಾನು ಈಗ ನಿನಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ ಅದಕ್ಕೆ ಉತ್ತರ ಕೊಡು.. ಆಗ ನಾನು ನನ್ನ ಮದುವೆಯನ್ನು ನಿಲ್ಲಿಸಿ.. ಜೀವನ ಪರ್ಯಂತ ಒಬ್ಬಂಟಿಯಾಗಿ ಬದುಕುತ್ತೇನೆ" ಅಂತ ಅವನು ಹೇಳಿದನು.. ಆಗ ಭೂತ "ಸರಿ ನಿನ್ನ ಪ್ರಶ್ನೆ ಏನು ಅಂತ ಕೇಳು?" ಅಂತ ಆ ಭೂತ ಹೇಳಿತು.. ಮೇಲೆ ಇರಿಸಿದ್ದ ಒಂದು ದೊಡ್ಡ ಚೀಲದಲ್ಲಿನ ಹುರುಳಿ ಕಾಳುಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು "ನನ್ನ ಕೈಯಲ್ಲಿ ಎಷ್ಟು ಹುರುಳಿ ಕಾಳುಗಳು ಇವೆ ಅಂತ ನಿಖರವಾಗಿ ಹೇಳು ಸಾಕು" ಅಂತ ಅವನು ಕೇಳಿದ..
ಆ ಕ್ಷಣದಲ್ಲಿ ತಕ್ಷಣ ಹೇಳಲಾಗದ ಭೂತವು ಕಣ್ಮರೆಯಾಗಿ ಹೋಯಿತು ಮತ್ತೆ ಎಂದೂ ಮರಳಿ ಬರಲೇ ಇಲ್ಲ!



Click it and Unblock the Notifications
