Latest Updates
-
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್
ಝೆನ್ ಕಥೆ: ಕೋಡಂಗಿ ನಿನಗಿಂತ ಮೇಲು

ಗುರುಗಳು ಇವನಿಗೆ ನನ್ನ ಬಳಿ ಏನೋ ಹೇಳಬೇಕಾಗಿದೆ ಎಂದು ಆ ಯುವ ಸನ್ಯಾಸಿಯ ಮುಖ ನೋಡಿದಾಗಲೇ ತಿಳಿಯಿತು. ಝೆನ್ ಗುರುಗಳು ಅವನ ಹತ್ತಿರ "ಏನು?" ಎಂಬಂತೆ ಪ್ರಶ್ನಾರ್ಥಕವಾಗಿ ನೋಡಿದರು. ಇವನು ಗುರುಗಳ ಹತ್ತಿರ ತನಗೆ ಹೊಸ ಜ್ಞಾನ ಪ್ರಾಪ್ತಿಯಾಗಿದೆ ಎಂದು ಹೇಳಿದನು.
ಇದನ್ನು ಕೇಳಿದ ಗುರುಗಳಿಗೆ ನಗು ಸಹಿಸಲು ಸಾಧ್ಯವಾಗಲಿಲ್ಲ, ಜೋರಾಗಿ ನಕ್ಕರು. ಶಿಷ್ಯನಿಗೆ ತುಂಬಾ ಅವಮಾನವಾಯಿತು. ತುಂಬಾ ಬೇಜಾರು ಮಾಡಿಕೊಂಡು ಮೂರು ದಿನಗಳವರೆಗೆ ಊಟ ತಿಂಡಿ ಮಾಡಲಿಲ್ಲ. ಮೂರನೇ ದಿನ ಸಾಯಾಂಕಾಲ ಗುರುಗಳ ಹತ್ತಿರ ಬಂದು "ನೀವು ನಕ್ಕಿದ ಕಾರಣ ನನಗೆ ತುಂಬಾ ಬೇಜಾರಾಗಿದೆ, ನನಗೆ ಊಟ, ನಿದ್ದೆ ಕೂಡ ಬರುತ್ತಿಲ್ಲ" ಎಂದು ಹೇಳಿದ.
ಆಗ ಗುರುಗಳು "ಆ ಶಿಷ್ಯನಿಗೆ ನಿನ್ನ ಸಮಸ್ಯೆ ಏನೆಂದು ಗೊತ್ತೇ?, ನಿನ್ನಲ್ಲಿರುವ ಸಮಸ್ಯೆ ಅಂದರೆ, ನಿನಗಿಂತ ಕೋಡಂಗಿ ಮೇಲು" ಎಂದರು. ಇದನ್ನು ಕೇಳಿದ ಆ ಶಿಷ್ಯ ಆಶ್ಚರ್ಯದಿಂದ "ಕೋಡಂಗಿಯನ್ನು ನನಗಿಂತ ಮೇಲು ಎಂದು ನಿಮಗೆ ಹೇಳಲು ಹೇಗೆ ಸಾಧ್ಯವಾಯಿತು ಗುರುಗಳೇ?" ಎಂದು ಕೇಳಿದ.
ಅದಕ್ಕೆ ಗುರುಗಳು "ಮತ್ತೇನು? ಕೋಡಂಗಿ ಕೊನೆಯ ಪಕ್ಷ ಬೇರೆಯವರನ್ನು ನಗಿಸುತ್ತಾನೆ, ಆದರೆ ನಿನಗೆ ಬೇರೆಯವರು ನಕ್ಕಿದ್ದೇ ಸಹಿಸಿಕೊಳ್ಳಲಾಗಲಿಲ್ಲವಲ್ಲ" ಎಂದರು. ಆಗ ಆ ಶಿಷ್ಯನು ತನ್ನ ತಪ್ಪನ್ನು ಅರಿತುಕೊಂಡನು.



Click it and Unblock the Notifications