Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ತಂತ್ರ ವಿದ್ಯೆ: ಅದೇನು ಮಾಯೆ, ಅದೇನು ಜಾದೂ!
ಅತ್ಯಂತ ಪ್ರಾಚೀನ ಸಂಪ್ರದಾಯ ಮತ್ತು ಚಿತ್ರ ವಿಚಿತ್ರ ಆಚರಣೆಗಳಿಂದಾಗಿ ಭಾರತ ಶತಮಾನಗಳಿಂದ ವಿದೇಶೀಯರ ಗಮನವನ್ನು ಸೆಳೆದಿದೆ. ಕುಂಭಮೇಳದ ಸಾಧುಗಳು, ಅಘೋರಿಗಳು, ಬಾಬಾಗಳು, ತಂತ್ರ ಮಂತ್ರ ಮಾಟ ಮಾಡುವವರು, ತಾಯತ ಕಟ್ಟುವವರು, ಒಂದೊಂದು ಕಾಯಿಲೆಗೂ ಒಂದೊಂದು ದೇವರನ್ನು ಗುರಿಯಾಗಿಸಿ ಆ ದೇವರಿಗೆ ವಿಶೇಷ ಪೂಜೆ ಸಲ್ಲಿಸುವವರು (ಉದಾಹರಣೆಗೆ ಪ್ಲೇಗ್ ಮಾರಿ) ಮೊದಲಾದವುಗಳನ್ನು ವಿದೇಶೀಯರಿಗೆ ಇಂದಿಗೂ ಒಂದು ರಹಸ್ಯವಾಗಿಯೇ ಉಳಿದಿದ್ದಾರೆ.
ಆದರೆ ಈ ಎಲ್ಲಾ ವಿದ್ಯೆಗಳು ಎಲ್ಲಾ ಊರುಗಳಲ್ಲಿ ಲಭ್ಯವಿಲ್ಲ. ಕೆಲವು ಊರುಗಳು ಅಥವಾ ಕೆಲವು ಸ್ಥಳಗಳು ಕೆಲವು ಪ್ರಕಾರದ ತಂತ್ರಗಳಿಗೆ ಪ್ರಸಿದ್ಧವಾಗಿದೆ. ಉದಾಹರಣೆಗೆ ಮಧ್ಯಪ್ರದೇಶದ ಪ್ರಾಚೀನ ನಗರವಾದ ಉಜ್ಜಯಿನಿ. ಇದು ತಂತ್ರ ಕ್ರಿಯೆ ಮತ್ತು ತಂತ್ರಜ್ಞಾನದ ಕೇಂದ್ರ ಎಂದು ಭಾವಿಸಲಾಗಿದೆ. ಉಜ್ಜಯಿನಿಯ ಹೆಸರು ಭಾರತೀಯ ಪುರಾಣಗಳಲ್ಲಿ ಬಹಳಷ್ಟು ಕಡೆ ಕೇಳಿಬರುತ್ತದೆ. ಉದಾಹರಣೆಗೆ ಜಗತ್ತಿನಲ್ಲಿ ಹನ್ನೆರಡು ಜ್ಯೋತಿರ್ಲಿಂಗಗಳಿವೆ.

Image courtesy - Dally bhaskar
ಉಜ್ಜಯನಿಯಲ್ಲಿರುವ ಮಹಾಕಾಳೇಶ್ವರ ದಕ್ಷಿಣಾಭಿಮುಖವಾಗಿದೆ. ಇದರ ಹೊರತಾಗಿ ಉಜ್ಜಯಿನಿಯಲ್ಲಿರುವ ಕಾಲಭೈರವ, ವಿಕ್ರಾಂತ ಭೈರವ, ಚೌಬೀಸ್ ಖಂಬಾ ಮಾತಾ, ಭೂಖಿ ಮಾತಾ, ಗಧಕಾಲಿಕಾ ಮಾತಾ ಮೊದಲಾದ ಸ್ಥಳಗಳು ತಂತ್ರವಿದ್ಯೆಗೆ ಪ್ರಸಿದ್ಧವಾಗಿವೆ. ಅಲ್ಲದೇ ಶಿರ್ಪಾ ನದಿತಟದಲ್ಲಿರುವ ಚಕ್ರತೀರ್ಥ ಎಂಬ ಮಸಣದಲ್ಲಿ ಹಲವಾರು ತಾಂತ್ರಿಕರು ದೇಶದ ಮೂಲೆಮೂಲೆಗಳಿಂದ ಇಲ್ಲಿ ಆಗಮಿಸಿ ತಾಂತ್ರಿಕವಿದ್ಯೆಯನ್ನು ಅಭ್ಯಸಿಸುತ್ತಾರೆ.
ಜಗತ್ತಿನಲ್ಲಿ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಕೇವಲ ಮಹಾಕಾಳೇಶ್ವರ ಲಿಂಗ ಮಾತ್ರ ದಕ್ಷಿಣಾಭಿಮುಖವಾಗಿದೆ. ಉಜ್ಜಯಿನಿಯ ಜನರು ಮಾಹಾಕಾಳೇಶ್ವರನನ್ನು ತಾಂತ್ರಿಕ ವಿದ್ಯೆಯ ಮಹಾರಾಜನೆಂದು ಪರಿಗಣಿಸುತ್ತಾರೆ. ಉಜ್ಜಯಿನಿಯಲ್ಲಿ ಹರಸಿದ್ಧಿದೇವಿಯ ಶಕ್ತಿಪೀಠವೂ ಇದೆ. ಹರಸಿದ್ಧಿದೇವಿಯು ರಾಜ ವಿಕ್ರಮಾದಿತ್ಯನ ಕುಲದೇವತೆ ಎಂದೂ ನಂಬಲಾಗುತ್ತದೆ.
Image courtesy- Daily bhaskar
ಕುಲದೇವತೆಯ ಆಶೀರ್ವಾದದಿಂದಲೇ ವಿಕ್ರಮಾದಿತ್ಯನು ದೀರ್ಘಕಾಲ ರಾಜ್ಯವಾಳಲು ಸಾಧ್ಯವಾಯಿತು ಎಂದು ಹೇಳಲಾಗುತ್ತದೆ. ಪುರಾಣಗಳಲ್ಲಿ ತಿಳಿಸಿರುವ ಪ್ರಕಾರ ಸತಿದೇವಿಯ ಮೊಣಕೈ ಬಿದ್ದ ಸ್ಥಳವೂ ಉಜ್ಜಯಿನಿಯೇ ಆಗಿದೆ. ಇದು ಕಾಲಭೈರವನ ಸ್ಥಳವಾಗಿದೆ.
ಈ ಸ್ಥಳದ ಮಹಾತ್ಮೆಯೆಂದರೆ ಬೇರೆ ಮೂರ್ತಿಗಳಿಗೆ ವ್ಯತಿರಿಕ್ತವಾಗಿ ಕೇವಲ ಈ ಮೂರ್ತಿ ಮಾತ್ರ ಮದ್ಯವನ್ನು ಸೇವಿಸುತ್ತದೆ. ತಂತ್ರಕ್ರಿಯೆಗಾಗಿ ವಿಕ್ರಾಂತ ಭೈರವನ ಈ ಸ್ಥಳ ಅತ್ಯಂತ ಪ್ರಶಸ್ತವೆಂದು ತಾಂತ್ರಿಕರು ನಂಬುತ್ತಾರೆ. ಈ ಮಂದಿರದ ಬಳಿಯೇ ಒಂದು ಸ್ಮಶಾನವಿದ್ದು ದೇಶದ ಮೂಲೆ ಮೂಲೆಗಳಿಂದ ತಾಂತ್ರಿಕರು, ಬಾಬಾಗಳು ಈ ಸ್ಮಶಾನಕ್ಕೆ ಆಗಮಿಸಿ ತಾಂತ್ರಿಕ ವಿದ್ಯೆಯನ್ನು ಅಭ್ಯಸಿಸುತ್ತಾರೆ. ರಾಜ ವಿಕ್ರಮಾದಿತ್ಯನ ಸಹೋದರ ಈ ಸ್ಥಳದಲ್ಲಿ ಹಲವಾರು ವರ್ಷಗಳವೆರೆಗೆ ತಪಸ್ಸು ಮಾಡಿದ್ದನೆಂದು ಹೇಳಲಾಗುತ್ತದೆ.
Image courtesy - Daily bhaskar
ಉಜ್ಜಯಿನಿ ನಗರದ ಕೇಂದ್ರಭಾಗದಲ್ಲಿರುವ ಈ ಮಂದಿರವನ್ನು ಚೌಬೀಸ್ ಖಂಬಾ ಮಾತಾ ಮಂದಿರವೆಂದು ಕರೆಯಲಾಗುತ್ತದೆ. ಶಾರ್ದೀಯ ನವರಾತ್ರಿಯ ಅಷ್ಟಮಿಯ ರಾತ್ರಿ ಈ ದೇವಿಗೆ ಪೂಜೆ ಸಲ್ಲಿಸಿ ಮದ್ಯವನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತದೆ. ಇದರಿಂದ ನಗರವನ್ನು ಯಾವುದೇ ನೈಸರ್ಗಿಕ ವಿಕೋಪಗಳಿಂದ ದೇವಿ ರಕ್ಷಿಸುತ್ತಾಳೆ ಎಂಬ ನಂಬಿಕೆಯಿದೆ. ಶಿರ್ಪಾ ನದಿಯ ತಟದಲ್ಲಿರುವ ಭೂಖಿ ಮಾತಾ ಮಂದಿರವು ಪ್ರಾಣಿಬಲಿಗೆ ಪ್ರಸಿದ್ಧವಾಗಿದೆ.



Click it and Unblock the Notifications

