Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
ತಂತ್ರ ವಿದ್ಯೆ: ಅದೇನು ಮಾಯೆ, ಅದೇನು ಜಾದೂ!
ಅತ್ಯಂತ ಪ್ರಾಚೀನ ಸಂಪ್ರದಾಯ ಮತ್ತು ಚಿತ್ರ ವಿಚಿತ್ರ ಆಚರಣೆಗಳಿಂದಾಗಿ ಭಾರತ ಶತಮಾನಗಳಿಂದ ವಿದೇಶೀಯರ ಗಮನವನ್ನು ಸೆಳೆದಿದೆ. ಕುಂಭಮೇಳದ ಸಾಧುಗಳು, ಅಘೋರಿಗಳು, ಬಾಬಾಗಳು, ತಂತ್ರ ಮಂತ್ರ ಮಾಟ ಮಾಡುವವರು, ತಾಯತ ಕಟ್ಟುವವರು, ಒಂದೊಂದು ಕಾಯಿಲೆಗೂ ಒಂದೊಂದು ದೇವರನ್ನು ಗುರಿಯಾಗಿಸಿ ಆ ದೇವರಿಗೆ ವಿಶೇಷ ಪೂಜೆ ಸಲ್ಲಿಸುವವರು (ಉದಾಹರಣೆಗೆ ಪ್ಲೇಗ್ ಮಾರಿ) ಮೊದಲಾದವುಗಳನ್ನು ವಿದೇಶೀಯರಿಗೆ ಇಂದಿಗೂ ಒಂದು ರಹಸ್ಯವಾಗಿಯೇ ಉಳಿದಿದ್ದಾರೆ.
ಆದರೆ ಈ ಎಲ್ಲಾ ವಿದ್ಯೆಗಳು ಎಲ್ಲಾ ಊರುಗಳಲ್ಲಿ ಲಭ್ಯವಿಲ್ಲ. ಕೆಲವು ಊರುಗಳು ಅಥವಾ ಕೆಲವು ಸ್ಥಳಗಳು ಕೆಲವು ಪ್ರಕಾರದ ತಂತ್ರಗಳಿಗೆ ಪ್ರಸಿದ್ಧವಾಗಿದೆ. ಉದಾಹರಣೆಗೆ ಮಧ್ಯಪ್ರದೇಶದ ಪ್ರಾಚೀನ ನಗರವಾದ ಉಜ್ಜಯಿನಿ. ಇದು ತಂತ್ರ ಕ್ರಿಯೆ ಮತ್ತು ತಂತ್ರಜ್ಞಾನದ ಕೇಂದ್ರ ಎಂದು ಭಾವಿಸಲಾಗಿದೆ. ಉಜ್ಜಯಿನಿಯ ಹೆಸರು ಭಾರತೀಯ ಪುರಾಣಗಳಲ್ಲಿ ಬಹಳಷ್ಟು ಕಡೆ ಕೇಳಿಬರುತ್ತದೆ. ಉದಾಹರಣೆಗೆ ಜಗತ್ತಿನಲ್ಲಿ ಹನ್ನೆರಡು ಜ್ಯೋತಿರ್ಲಿಂಗಗಳಿವೆ.

Image courtesy - Dally bhaskar
ಉಜ್ಜಯನಿಯಲ್ಲಿರುವ ಮಹಾಕಾಳೇಶ್ವರ ದಕ್ಷಿಣಾಭಿಮುಖವಾಗಿದೆ. ಇದರ ಹೊರತಾಗಿ ಉಜ್ಜಯಿನಿಯಲ್ಲಿರುವ ಕಾಲಭೈರವ, ವಿಕ್ರಾಂತ ಭೈರವ, ಚೌಬೀಸ್ ಖಂಬಾ ಮಾತಾ, ಭೂಖಿ ಮಾತಾ, ಗಧಕಾಲಿಕಾ ಮಾತಾ ಮೊದಲಾದ ಸ್ಥಳಗಳು ತಂತ್ರವಿದ್ಯೆಗೆ ಪ್ರಸಿದ್ಧವಾಗಿವೆ. ಅಲ್ಲದೇ ಶಿರ್ಪಾ ನದಿತಟದಲ್ಲಿರುವ ಚಕ್ರತೀರ್ಥ ಎಂಬ ಮಸಣದಲ್ಲಿ ಹಲವಾರು ತಾಂತ್ರಿಕರು ದೇಶದ ಮೂಲೆಮೂಲೆಗಳಿಂದ ಇಲ್ಲಿ ಆಗಮಿಸಿ ತಾಂತ್ರಿಕವಿದ್ಯೆಯನ್ನು ಅಭ್ಯಸಿಸುತ್ತಾರೆ.
ಜಗತ್ತಿನಲ್ಲಿ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಕೇವಲ ಮಹಾಕಾಳೇಶ್ವರ ಲಿಂಗ ಮಾತ್ರ ದಕ್ಷಿಣಾಭಿಮುಖವಾಗಿದೆ. ಉಜ್ಜಯಿನಿಯ ಜನರು ಮಾಹಾಕಾಳೇಶ್ವರನನ್ನು ತಾಂತ್ರಿಕ ವಿದ್ಯೆಯ ಮಹಾರಾಜನೆಂದು ಪರಿಗಣಿಸುತ್ತಾರೆ. ಉಜ್ಜಯಿನಿಯಲ್ಲಿ ಹರಸಿದ್ಧಿದೇವಿಯ ಶಕ್ತಿಪೀಠವೂ ಇದೆ. ಹರಸಿದ್ಧಿದೇವಿಯು ರಾಜ ವಿಕ್ರಮಾದಿತ್ಯನ ಕುಲದೇವತೆ ಎಂದೂ ನಂಬಲಾಗುತ್ತದೆ.
Image courtesy- Daily bhaskar
ಕುಲದೇವತೆಯ ಆಶೀರ್ವಾದದಿಂದಲೇ ವಿಕ್ರಮಾದಿತ್ಯನು ದೀರ್ಘಕಾಲ ರಾಜ್ಯವಾಳಲು ಸಾಧ್ಯವಾಯಿತು ಎಂದು ಹೇಳಲಾಗುತ್ತದೆ. ಪುರಾಣಗಳಲ್ಲಿ ತಿಳಿಸಿರುವ ಪ್ರಕಾರ ಸತಿದೇವಿಯ ಮೊಣಕೈ ಬಿದ್ದ ಸ್ಥಳವೂ ಉಜ್ಜಯಿನಿಯೇ ಆಗಿದೆ. ಇದು ಕಾಲಭೈರವನ ಸ್ಥಳವಾಗಿದೆ.
ಈ ಸ್ಥಳದ ಮಹಾತ್ಮೆಯೆಂದರೆ ಬೇರೆ ಮೂರ್ತಿಗಳಿಗೆ ವ್ಯತಿರಿಕ್ತವಾಗಿ ಕೇವಲ ಈ ಮೂರ್ತಿ ಮಾತ್ರ ಮದ್ಯವನ್ನು ಸೇವಿಸುತ್ತದೆ. ತಂತ್ರಕ್ರಿಯೆಗಾಗಿ ವಿಕ್ರಾಂತ ಭೈರವನ ಈ ಸ್ಥಳ ಅತ್ಯಂತ ಪ್ರಶಸ್ತವೆಂದು ತಾಂತ್ರಿಕರು ನಂಬುತ್ತಾರೆ. ಈ ಮಂದಿರದ ಬಳಿಯೇ ಒಂದು ಸ್ಮಶಾನವಿದ್ದು ದೇಶದ ಮೂಲೆ ಮೂಲೆಗಳಿಂದ ತಾಂತ್ರಿಕರು, ಬಾಬಾಗಳು ಈ ಸ್ಮಶಾನಕ್ಕೆ ಆಗಮಿಸಿ ತಾಂತ್ರಿಕ ವಿದ್ಯೆಯನ್ನು ಅಭ್ಯಸಿಸುತ್ತಾರೆ. ರಾಜ ವಿಕ್ರಮಾದಿತ್ಯನ ಸಹೋದರ ಈ ಸ್ಥಳದಲ್ಲಿ ಹಲವಾರು ವರ್ಷಗಳವೆರೆಗೆ ತಪಸ್ಸು ಮಾಡಿದ್ದನೆಂದು ಹೇಳಲಾಗುತ್ತದೆ.
Image courtesy - Daily bhaskar
ಉಜ್ಜಯಿನಿ ನಗರದ ಕೇಂದ್ರಭಾಗದಲ್ಲಿರುವ ಈ ಮಂದಿರವನ್ನು ಚೌಬೀಸ್ ಖಂಬಾ ಮಾತಾ ಮಂದಿರವೆಂದು ಕರೆಯಲಾಗುತ್ತದೆ. ಶಾರ್ದೀಯ ನವರಾತ್ರಿಯ ಅಷ್ಟಮಿಯ ರಾತ್ರಿ ಈ ದೇವಿಗೆ ಪೂಜೆ ಸಲ್ಲಿಸಿ ಮದ್ಯವನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತದೆ. ಇದರಿಂದ ನಗರವನ್ನು ಯಾವುದೇ ನೈಸರ್ಗಿಕ ವಿಕೋಪಗಳಿಂದ ದೇವಿ ರಕ್ಷಿಸುತ್ತಾಳೆ ಎಂಬ ನಂಬಿಕೆಯಿದೆ. ಶಿರ್ಪಾ ನದಿಯ ತಟದಲ್ಲಿರುವ ಭೂಖಿ ಮಾತಾ ಮಂದಿರವು ಪ್ರಾಣಿಬಲಿಗೆ ಪ್ರಸಿದ್ಧವಾಗಿದೆ.



Click it and Unblock the Notifications

