Latest Updates
-
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ?
ಕೃಷ್ಣ ಜನ್ಮಾಷ್ಠಮಿ 2020: ಅವತಾರ ಪುರುಷ 'ಶ್ರೀ ಕೃಷ್ಣ' ಎಲ್ಲವನ್ನೂ ಬಲ್ಲ ಜಗದ ಸೂತ್ರಧಾರ
ಶ್ರೀಕೃಷ್ಣ ಪರಮಾತ್ಮನ ಬಾಲ್ಯದ ತುಂಟಾಟಗಳನ್ನು ಯಾರಿಂದ ಮರೆಯಲು ಸಾಧ್ಯ ಹೇಳಿ? ಮನೆಯಲ್ಲಿ ತುಂಟ ಮಕ್ಕಳಿದ್ದರೆ ಅವರನ್ನು ಕೃಷ್ಣನಿಗೆ ಹೋಲಿಸಿ ಮಾತನಾಡುವುದುಂಟು. ಹೀಗೆ ಬಾಲ್ಯದಲ್ಲಿ ಎಲ್ಲರನ್ನೂ ಗೋಳಾಡಿಸುತ್ತಲೇ ಎಲ್ಲರಿಗೂ ಆನಂದವನ್ನುಂಟು ಮಾಡುತ್ತಿದ್ದ ಭಗವಾನ್ ಕೃಷ್ಣನು ತುಂಟಾಟದಿಂದಲೇ ಎಲ್ಲರ ಮನವನ್ನೂ ಮುದಗೊಳಿಸುತ್ತಿದ್ದನು.
ಬಾಲ್ಯದಲ್ಲಿಯೇ ತನ್ನ ಲೀಲಾವಿನೋದಗಳ ಮೂಲಕ ತನ್ನ ಶ್ರೇಷ್ಠತೆಯನ್ನು ಪರಮಾತ್ಮನು ಎಲ್ಲರಿಗೂ ಮನದಟ್ಟು ಮಾಡಿಸುತ್ತಿದ್ದನು. ಕೃಷ್ಣನ ತಾಯಿಗೆ ತನ್ನ ಮಗ ಸಾಮಾನ್ಯದವನಲ್ಲ ಎಂಬ ಮನವರಿಕೆಯನ್ನು ಕೃಷ್ಣನು ಮಾಡಿಸಿದ್ದನು. ಈ ಕುರಿತು ಹಲವಾರು ಕಥೆಗಳನ್ನು ನೀವು ಕಂಡುಕೊಳ್ಳಬಹುದಾಗಿದೆ.
ಈ ಸಾಲಿನ (2020) ಆಗಸ್ಟ 11ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಇದರ ವಿಶೇಷ ಕೃಷ್ಣನ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿಯೋಣ.

ಒಮ್ಮೆ ಪುಟ್ಟ ಬಾಲಕ ಕೃಷ್ಣನು ಸ್ವಲ್ಪ ಮಣ್ಣನ್ನು ಬಾಯಿಗೆ ತುರುಕಿಕೊಳ್ಳುತ್ತಾನೆ, ಈ ಸಮಯದಲ್ಲಿ ಓಡಿ ಬಂದ ತಾಯಿ ಯಶೋಧೆಯು ಮಗನು ಮಣ್ಣು ತಿನ್ನುತ್ತಿದ್ದುದನ್ನು ನೋಡಿ ಬಾಯೊ ತೆರೆದು ತೋರಿಸುವಂತೆ ಹೇಳುತ್ತಾಳೆ. ಪುಟ್ಟ ಬಾಲಕನು ತನ್ನ ಬಾಯಿಯನ್ನು ತೆರೆದಾಗ ನಿಬ್ಬೆರಗಾಗುತ್ತಾಳೆ ತಾಯಿ ಯಶೋಧೆ. ಏಕೆಂದರೆ ಕೃಷ್ಣನ ಪುಟ್ಟ ಬಾಯಿಯಲ್ಲಿ ಯಶೋಧೆಯು ಸಂಪೂರ್ಣ ವಿಶ್ವವನ್ನೇ ನೋಡುತ್ತಾಳೆ.
ಈ ಬಗೆಯಲ್ಲಿ ತಾಯಿ ಯಶೋಧೆಯು ಮಗನ ಲೀಲಾವಿನೋದವನ್ನು ಕಂಡುಕೊಳ್ಳುತ್ತಾಳೆ. ಭಗವಂತನೇ ಮಾನವ ರೂಪದಲ್ಲಿ ಜನ್ಮತಾಳಿ ಭಕ್ತರ ಉದ್ಧಾರವನ್ನು ಮಾಡುತ್ತಿದ್ದಾನೆ ಎಂಬುದನ್ನು ಆಕೆ ಅರಿತುಕೊಳ್ಳುತ್ತಾಳೆ.
ಮಣ್ಣಾಗಿದ್ದ ಮಗುವಿನ ಬಾಯಿಯನ್ನು ಯಶೋಧೆ ನೀರಿನಿಂದ ತೊಳೆದು ಶುದ್ಧ ಮಾಡುತ್ತಾಳೆ. ಈ ಸಮಯದಲ್ಲಿ ಸಾಮಾನ್ಯ ಮಗುವಿನಂತೆಯೇ ಇನ್ನು ಮುಂದೆ ಹೀಗೆ ಮಾಡಬಾರದೆಂದು ಪುಟ್ಟ ಕಂದಮ್ಮನಿಗೆ ಯಶೋಧೆ ಎಚ್ಚರಿಕೆಯನ್ನು ನೀಡುತ್ತಾಳೆ. ಹೊರಗಿನ ವಿಶ್ವವನ್ನೇ ಭಗವಂತ ತನ್ನಲ್ಲಿ ಆವಾಹಿಸಿಕೊಂಡಿದ್ದಾನೆ ಎಂಬ ಸತ್ಯವನ್ನು ಈ ಅಂಶವು ನಮಗೆ ಮನದಟ್ಟು ಮಾಡಿಕೊಡುತ್ತಿದೆ. ಇಡಿಯ ವಿಶ್ವದಲ್ಲಿ ಹುಲುಮಾನವರು ಅರಿತುಕೊಳ್ಳಲೇಬೇಕಾದ ಸತ್ಯವು ಇದಾಗಿದೆ.



Click it and Unblock the Notifications
