Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಕೃಷ್ಣ ಜನ್ಮಾಷ್ಠಮಿ 2020: ಅವತಾರ ಪುರುಷ 'ಶ್ರೀ ಕೃಷ್ಣ' ಎಲ್ಲವನ್ನೂ ಬಲ್ಲ ಜಗದ ಸೂತ್ರಧಾರ
ಶ್ರೀಕೃಷ್ಣ ಪರಮಾತ್ಮನ ಬಾಲ್ಯದ ತುಂಟಾಟಗಳನ್ನು ಯಾರಿಂದ ಮರೆಯಲು ಸಾಧ್ಯ ಹೇಳಿ? ಮನೆಯಲ್ಲಿ ತುಂಟ ಮಕ್ಕಳಿದ್ದರೆ ಅವರನ್ನು ಕೃಷ್ಣನಿಗೆ ಹೋಲಿಸಿ ಮಾತನಾಡುವುದುಂಟು. ಹೀಗೆ ಬಾಲ್ಯದಲ್ಲಿ ಎಲ್ಲರನ್ನೂ ಗೋಳಾಡಿಸುತ್ತಲೇ ಎಲ್ಲರಿಗೂ ಆನಂದವನ್ನುಂಟು ಮಾಡುತ್ತಿದ್ದ ಭಗವಾನ್ ಕೃಷ್ಣನು ತುಂಟಾಟದಿಂದಲೇ ಎಲ್ಲರ ಮನವನ್ನೂ ಮುದಗೊಳಿಸುತ್ತಿದ್ದನು.
ಬಾಲ್ಯದಲ್ಲಿಯೇ ತನ್ನ ಲೀಲಾವಿನೋದಗಳ ಮೂಲಕ ತನ್ನ ಶ್ರೇಷ್ಠತೆಯನ್ನು ಪರಮಾತ್ಮನು ಎಲ್ಲರಿಗೂ ಮನದಟ್ಟು ಮಾಡಿಸುತ್ತಿದ್ದನು. ಕೃಷ್ಣನ ತಾಯಿಗೆ ತನ್ನ ಮಗ ಸಾಮಾನ್ಯದವನಲ್ಲ ಎಂಬ ಮನವರಿಕೆಯನ್ನು ಕೃಷ್ಣನು ಮಾಡಿಸಿದ್ದನು. ಈ ಕುರಿತು ಹಲವಾರು ಕಥೆಗಳನ್ನು ನೀವು ಕಂಡುಕೊಳ್ಳಬಹುದಾಗಿದೆ.
ಈ ಸಾಲಿನ (2020) ಆಗಸ್ಟ 11ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಇದರ ವಿಶೇಷ ಕೃಷ್ಣನ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿಯೋಣ.

ಒಮ್ಮೆ ಪುಟ್ಟ ಬಾಲಕ ಕೃಷ್ಣನು ಸ್ವಲ್ಪ ಮಣ್ಣನ್ನು ಬಾಯಿಗೆ ತುರುಕಿಕೊಳ್ಳುತ್ತಾನೆ, ಈ ಸಮಯದಲ್ಲಿ ಓಡಿ ಬಂದ ತಾಯಿ ಯಶೋಧೆಯು ಮಗನು ಮಣ್ಣು ತಿನ್ನುತ್ತಿದ್ದುದನ್ನು ನೋಡಿ ಬಾಯೊ ತೆರೆದು ತೋರಿಸುವಂತೆ ಹೇಳುತ್ತಾಳೆ. ಪುಟ್ಟ ಬಾಲಕನು ತನ್ನ ಬಾಯಿಯನ್ನು ತೆರೆದಾಗ ನಿಬ್ಬೆರಗಾಗುತ್ತಾಳೆ ತಾಯಿ ಯಶೋಧೆ. ಏಕೆಂದರೆ ಕೃಷ್ಣನ ಪುಟ್ಟ ಬಾಯಿಯಲ್ಲಿ ಯಶೋಧೆಯು ಸಂಪೂರ್ಣ ವಿಶ್ವವನ್ನೇ ನೋಡುತ್ತಾಳೆ.
ಈ ಬಗೆಯಲ್ಲಿ ತಾಯಿ ಯಶೋಧೆಯು ಮಗನ ಲೀಲಾವಿನೋದವನ್ನು ಕಂಡುಕೊಳ್ಳುತ್ತಾಳೆ. ಭಗವಂತನೇ ಮಾನವ ರೂಪದಲ್ಲಿ ಜನ್ಮತಾಳಿ ಭಕ್ತರ ಉದ್ಧಾರವನ್ನು ಮಾಡುತ್ತಿದ್ದಾನೆ ಎಂಬುದನ್ನು ಆಕೆ ಅರಿತುಕೊಳ್ಳುತ್ತಾಳೆ.
ಮಣ್ಣಾಗಿದ್ದ ಮಗುವಿನ ಬಾಯಿಯನ್ನು ಯಶೋಧೆ ನೀರಿನಿಂದ ತೊಳೆದು ಶುದ್ಧ ಮಾಡುತ್ತಾಳೆ. ಈ ಸಮಯದಲ್ಲಿ ಸಾಮಾನ್ಯ ಮಗುವಿನಂತೆಯೇ ಇನ್ನು ಮುಂದೆ ಹೀಗೆ ಮಾಡಬಾರದೆಂದು ಪುಟ್ಟ ಕಂದಮ್ಮನಿಗೆ ಯಶೋಧೆ ಎಚ್ಚರಿಕೆಯನ್ನು ನೀಡುತ್ತಾಳೆ. ಹೊರಗಿನ ವಿಶ್ವವನ್ನೇ ಭಗವಂತ ತನ್ನಲ್ಲಿ ಆವಾಹಿಸಿಕೊಂಡಿದ್ದಾನೆ ಎಂಬ ಸತ್ಯವನ್ನು ಈ ಅಂಶವು ನಮಗೆ ಮನದಟ್ಟು ಮಾಡಿಕೊಡುತ್ತಿದೆ. ಇಡಿಯ ವಿಶ್ವದಲ್ಲಿ ಹುಲುಮಾನವರು ಅರಿತುಕೊಳ್ಳಲೇಬೇಕಾದ ಸತ್ಯವು ಇದಾಗಿದೆ.



Click it and Unblock the Notifications

