Latest Updates
-
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
'ದುಷ್ಟ ಶಕ್ತಿ'ಯಿಂದ ರಕ್ಷಣೆ ನೀಡುವ ದಾರಗಳಿವು! ಕೈಗೆ ಕಟ್ಟಿ ನೋಡಿ
ಹಿಂದೂ ಧರ್ಮದಲ್ಲಿ ಅನೇಕ ಶಾಸ್ತ್ರ-ಸಂಪ್ರದಾಯಗಳಿವೆ. ಪ್ರತಿಯೊಂದು ತನ್ನದೇ ಆದ ಪವಿತ್ರ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ಅದರಲ್ಲಿ ಮೌಲಿ ಧರಿಸುವುದು ಒಂದು. ಅನೇಕರು ಮಣಿಕಟ್ಟಿನ ಮೇಲೆ ಕೆಂಪು, ಹಳದಿ, ಕಪ್ಪು ಮತ್ತು ಕಿತ್ತಳೆ ಬಣ್ಣದ ದಾರವನ್ನು ಕಟ್ಟಿಕೊಂಡಿರುವುದನ್ನು ಕಂಡಿರುತ್ತೇವೆ. ಈ ಪವಿತ್ರ ದಾರವನ್ನು ಕಲಾವ ಅಥವಾ ಮೌಲಿ ಎಂದು ಕರೆಯುತ್ತಾರೆ.
ಇದರ ಮಹತ್ವ ಅಪಾರವಾದದ್ದು. ಇವುಗಳನ್ನು ಕಟ್ಟಿಕೊಳ್ಳುವುದರಿಂದ ಬ್ರಹ್ಮ, ವಿಷ್ಣು, ಮಹೇಶ್ವರ ಮತ್ತು ಲಕ್ಷ್ಮಿ, ಪಾರ್ವತಿ, ಸರಸ್ವತಿಯರ ಆಶೀರ್ವಾದಗಳು ಆಕರ್ಷಿತವಾಗುತ್ತವೆ ಎನ್ನಲಾಗುತ್ತದೆ. ಇದನ್ನು ಕೈಗೆ ಕಟ್ಟಿಕೊಳ್ಳುವುದರಿಂದ ಉಂಟಾಗುವ ಉಪಯೋಗ ಹಾಗೂ ಮಹತ್ವದ ಬಗೆಗಿನ ಕಿರು ಪರಿಚಯ ಇಲ್ಲಿದೆ ನೋಡಿ....

ಪುರಾಣ ಕಥೆಗಳ ಪ್ರಕಾರ...
ವಿಷ್ಣುವಿನ ಅವತಾರ ಎನಿಸಿಕೊಂಡ ವಾಮನನು ಬಲಿ ರಾಜನ ಕೈಗೆ (ಮಣಿಕಟ್ಟಿನ ಮೇಲೆ) ಈ ದಾರವನ್ನು ಕಟ್ಟಿದ್ದನು ಎನ್ನಲಾಗುತ್ತದೆ.

ಹಳದಿ ಮತ್ತು ಕೆಂಪು ದಾರ ಮಂಗಳಕರ
ಪುರಾತನ ಕಾಲದಿಂದಲೂ ಮಂಗಳಕರ ಎನ್ನುವ ಹಳದಿ ಮತ್ತು ಕೆಂಪು ದಾರವನ್ನು ಕಟ್ಟಿಕೊಳ್ಳುವ ಸಂಪ್ರದಾಯ ಅಸ್ತಿತ್ವಕ್ಕೆ ಬಂದಿತ್ತು ಎನ್ನಲಾಗುತ್ತದೆ.

ಶತ್ರುಗಳ ಕಾಟ ತಪ್ಪಿಸುತ್ತದೆ...
ಕೆಂಪು ದಾರವನ್ನು ಕಾಳವೆ ಎಂದು ಕರೆಯುತ್ತಾರೆ. ಈ ಬಣ್ಣ ದೀರ್ಘ ಜೀವನ, ಜೀವಂತಿಕೆ ಮತ್ತು ಶತ್ರುಗಳ ವಿರುದ್ಧ ಸಂರಕ್ಷಿಸುತ್ತದೆ.

ಈ ದಾರ ಕಟ್ಟುವ ವಿಧಾನ...
ಈ ದಾರವನ್ನು ಪುರುಷರು ಮತ್ತು ಅವಿವಾಹಿತ ಮಹಿಳೆಯರ ಬಲಗೈ ಮಣಿಕಟ್ಟಿನ ಮೇಲೆ ಕಟ್ಟುತ್ತಾರೆ. ವಿವಾಹಿತ ಮಹಿಳೆಯರಾಗಿದ್ದರೆ ಎಡಗೈ ಮಣಿಕಟ್ಟಿನ ಮೇಲೆ ಕಟ್ಟಬೇಕು..

ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರ
ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರವನ್ನು ಹಿಂದೂ ಧರ್ಮದಲ್ಲಿ ಮಂಗಳಕರ ಎಂದು ಪರಿಗಣಿಸುತ್ತಾರೆ. ಅಲ್ಲದೆ ಇವು ಗುರು, ಮಂಗಳ ಮತ್ತು ಸೂರ್ಯನಿಗೆ ಹೆಚ್ಚು ಪ್ರಾಶಸ್ತ್ಯವಾದವು ಎನ್ನಲಾಗುತ್ತದೆ.



Click it and Unblock the Notifications