Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
'ದುಷ್ಟ ಶಕ್ತಿ'ಯಿಂದ ರಕ್ಷಣೆ ನೀಡುವ ದಾರಗಳಿವು! ಕೈಗೆ ಕಟ್ಟಿ ನೋಡಿ
ಹಿಂದೂ ಧರ್ಮದಲ್ಲಿ ಅನೇಕ ಶಾಸ್ತ್ರ-ಸಂಪ್ರದಾಯಗಳಿವೆ. ಪ್ರತಿಯೊಂದು ತನ್ನದೇ ಆದ ಪವಿತ್ರ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ಅದರಲ್ಲಿ ಮೌಲಿ ಧರಿಸುವುದು ಒಂದು. ಅನೇಕರು ಮಣಿಕಟ್ಟಿನ ಮೇಲೆ ಕೆಂಪು, ಹಳದಿ, ಕಪ್ಪು ಮತ್ತು ಕಿತ್ತಳೆ ಬಣ್ಣದ ದಾರವನ್ನು ಕಟ್ಟಿಕೊಂಡಿರುವುದನ್ನು ಕಂಡಿರುತ್ತೇವೆ. ಈ ಪವಿತ್ರ ದಾರವನ್ನು ಕಲಾವ ಅಥವಾ ಮೌಲಿ ಎಂದು ಕರೆಯುತ್ತಾರೆ.
ಇದರ ಮಹತ್ವ ಅಪಾರವಾದದ್ದು. ಇವುಗಳನ್ನು ಕಟ್ಟಿಕೊಳ್ಳುವುದರಿಂದ ಬ್ರಹ್ಮ, ವಿಷ್ಣು, ಮಹೇಶ್ವರ ಮತ್ತು ಲಕ್ಷ್ಮಿ, ಪಾರ್ವತಿ, ಸರಸ್ವತಿಯರ ಆಶೀರ್ವಾದಗಳು ಆಕರ್ಷಿತವಾಗುತ್ತವೆ ಎನ್ನಲಾಗುತ್ತದೆ. ಇದನ್ನು ಕೈಗೆ ಕಟ್ಟಿಕೊಳ್ಳುವುದರಿಂದ ಉಂಟಾಗುವ ಉಪಯೋಗ ಹಾಗೂ ಮಹತ್ವದ ಬಗೆಗಿನ ಕಿರು ಪರಿಚಯ ಇಲ್ಲಿದೆ ನೋಡಿ....

ಪುರಾಣ ಕಥೆಗಳ ಪ್ರಕಾರ...
ವಿಷ್ಣುವಿನ ಅವತಾರ ಎನಿಸಿಕೊಂಡ ವಾಮನನು ಬಲಿ ರಾಜನ ಕೈಗೆ (ಮಣಿಕಟ್ಟಿನ ಮೇಲೆ) ಈ ದಾರವನ್ನು ಕಟ್ಟಿದ್ದನು ಎನ್ನಲಾಗುತ್ತದೆ.

ಹಳದಿ ಮತ್ತು ಕೆಂಪು ದಾರ ಮಂಗಳಕರ
ಪುರಾತನ ಕಾಲದಿಂದಲೂ ಮಂಗಳಕರ ಎನ್ನುವ ಹಳದಿ ಮತ್ತು ಕೆಂಪು ದಾರವನ್ನು ಕಟ್ಟಿಕೊಳ್ಳುವ ಸಂಪ್ರದಾಯ ಅಸ್ತಿತ್ವಕ್ಕೆ ಬಂದಿತ್ತು ಎನ್ನಲಾಗುತ್ತದೆ.

ಶತ್ರುಗಳ ಕಾಟ ತಪ್ಪಿಸುತ್ತದೆ...
ಕೆಂಪು ದಾರವನ್ನು ಕಾಳವೆ ಎಂದು ಕರೆಯುತ್ತಾರೆ. ಈ ಬಣ್ಣ ದೀರ್ಘ ಜೀವನ, ಜೀವಂತಿಕೆ ಮತ್ತು ಶತ್ರುಗಳ ವಿರುದ್ಧ ಸಂರಕ್ಷಿಸುತ್ತದೆ.

ಈ ದಾರ ಕಟ್ಟುವ ವಿಧಾನ...
ಈ ದಾರವನ್ನು ಪುರುಷರು ಮತ್ತು ಅವಿವಾಹಿತ ಮಹಿಳೆಯರ ಬಲಗೈ ಮಣಿಕಟ್ಟಿನ ಮೇಲೆ ಕಟ್ಟುತ್ತಾರೆ. ವಿವಾಹಿತ ಮಹಿಳೆಯರಾಗಿದ್ದರೆ ಎಡಗೈ ಮಣಿಕಟ್ಟಿನ ಮೇಲೆ ಕಟ್ಟಬೇಕು..

ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರ
ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರವನ್ನು ಹಿಂದೂ ಧರ್ಮದಲ್ಲಿ ಮಂಗಳಕರ ಎಂದು ಪರಿಗಣಿಸುತ್ತಾರೆ. ಅಲ್ಲದೆ ಇವು ಗುರು, ಮಂಗಳ ಮತ್ತು ಸೂರ್ಯನಿಗೆ ಹೆಚ್ಚು ಪ್ರಾಶಸ್ತ್ಯವಾದವು ಎನ್ನಲಾಗುತ್ತದೆ.



Click it and Unblock the Notifications