Latest Updates
-
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್
'ದುಷ್ಟ ಶಕ್ತಿ'ಯಿಂದ ರಕ್ಷಣೆ ನೀಡುವ ದಾರಗಳಿವು! ಕೈಗೆ ಕಟ್ಟಿ ನೋಡಿ
ಹಿಂದೂ ಧರ್ಮದಲ್ಲಿ ಅನೇಕ ಶಾಸ್ತ್ರ-ಸಂಪ್ರದಾಯಗಳಿವೆ. ಪ್ರತಿಯೊಂದು ತನ್ನದೇ ಆದ ಪವಿತ್ರ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ಅದರಲ್ಲಿ ಮೌಲಿ ಧರಿಸುವುದು ಒಂದು. ಅನೇಕರು ಮಣಿಕಟ್ಟಿನ ಮೇಲೆ ಕೆಂಪು, ಹಳದಿ, ಕಪ್ಪು ಮತ್ತು ಕಿತ್ತಳೆ ಬಣ್ಣದ ದಾರವನ್ನು ಕಟ್ಟಿಕೊಂಡಿರುವುದನ್ನು ಕಂಡಿರುತ್ತೇವೆ. ಈ ಪವಿತ್ರ ದಾರವನ್ನು ಕಲಾವ ಅಥವಾ ಮೌಲಿ ಎಂದು ಕರೆಯುತ್ತಾರೆ.
ಇದರ ಮಹತ್ವ ಅಪಾರವಾದದ್ದು. ಇವುಗಳನ್ನು ಕಟ್ಟಿಕೊಳ್ಳುವುದರಿಂದ ಬ್ರಹ್ಮ, ವಿಷ್ಣು, ಮಹೇಶ್ವರ ಮತ್ತು ಲಕ್ಷ್ಮಿ, ಪಾರ್ವತಿ, ಸರಸ್ವತಿಯರ ಆಶೀರ್ವಾದಗಳು ಆಕರ್ಷಿತವಾಗುತ್ತವೆ ಎನ್ನಲಾಗುತ್ತದೆ. ಇದನ್ನು ಕೈಗೆ ಕಟ್ಟಿಕೊಳ್ಳುವುದರಿಂದ ಉಂಟಾಗುವ ಉಪಯೋಗ ಹಾಗೂ ಮಹತ್ವದ ಬಗೆಗಿನ ಕಿರು ಪರಿಚಯ ಇಲ್ಲಿದೆ ನೋಡಿ....

ಪುರಾಣ ಕಥೆಗಳ ಪ್ರಕಾರ...
ವಿಷ್ಣುವಿನ ಅವತಾರ ಎನಿಸಿಕೊಂಡ ವಾಮನನು ಬಲಿ ರಾಜನ ಕೈಗೆ (ಮಣಿಕಟ್ಟಿನ ಮೇಲೆ) ಈ ದಾರವನ್ನು ಕಟ್ಟಿದ್ದನು ಎನ್ನಲಾಗುತ್ತದೆ.

ಹಳದಿ ಮತ್ತು ಕೆಂಪು ದಾರ ಮಂಗಳಕರ
ಪುರಾತನ ಕಾಲದಿಂದಲೂ ಮಂಗಳಕರ ಎನ್ನುವ ಹಳದಿ ಮತ್ತು ಕೆಂಪು ದಾರವನ್ನು ಕಟ್ಟಿಕೊಳ್ಳುವ ಸಂಪ್ರದಾಯ ಅಸ್ತಿತ್ವಕ್ಕೆ ಬಂದಿತ್ತು ಎನ್ನಲಾಗುತ್ತದೆ.

ಶತ್ರುಗಳ ಕಾಟ ತಪ್ಪಿಸುತ್ತದೆ...
ಕೆಂಪು ದಾರವನ್ನು ಕಾಳವೆ ಎಂದು ಕರೆಯುತ್ತಾರೆ. ಈ ಬಣ್ಣ ದೀರ್ಘ ಜೀವನ, ಜೀವಂತಿಕೆ ಮತ್ತು ಶತ್ರುಗಳ ವಿರುದ್ಧ ಸಂರಕ್ಷಿಸುತ್ತದೆ.

ಈ ದಾರ ಕಟ್ಟುವ ವಿಧಾನ...
ಈ ದಾರವನ್ನು ಪುರುಷರು ಮತ್ತು ಅವಿವಾಹಿತ ಮಹಿಳೆಯರ ಬಲಗೈ ಮಣಿಕಟ್ಟಿನ ಮೇಲೆ ಕಟ್ಟುತ್ತಾರೆ. ವಿವಾಹಿತ ಮಹಿಳೆಯರಾಗಿದ್ದರೆ ಎಡಗೈ ಮಣಿಕಟ್ಟಿನ ಮೇಲೆ ಕಟ್ಟಬೇಕು..

ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರ
ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರವನ್ನು ಹಿಂದೂ ಧರ್ಮದಲ್ಲಿ ಮಂಗಳಕರ ಎಂದು ಪರಿಗಣಿಸುತ್ತಾರೆ. ಅಲ್ಲದೆ ಇವು ಗುರು, ಮಂಗಳ ಮತ್ತು ಸೂರ್ಯನಿಗೆ ಹೆಚ್ಚು ಪ್ರಾಶಸ್ತ್ಯವಾದವು ಎನ್ನಲಾಗುತ್ತದೆ.



Click it and Unblock the Notifications