Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
'ದುಷ್ಟ ಶಕ್ತಿ'ಯಿಂದ ರಕ್ಷಣೆ ನೀಡುವ ದಾರಗಳಿವು! ಕೈಗೆ ಕಟ್ಟಿ ನೋಡಿ
ಹಿಂದೂ ಧರ್ಮದಲ್ಲಿ ಅನೇಕ ಶಾಸ್ತ್ರ-ಸಂಪ್ರದಾಯಗಳಿವೆ. ಪ್ರತಿಯೊಂದು ತನ್ನದೇ ಆದ ಪವಿತ್ರ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ಅದರಲ್ಲಿ ಮೌಲಿ ಧರಿಸುವುದು ಒಂದು. ಅನೇಕರು ಮಣಿಕಟ್ಟಿನ ಮೇಲೆ ಕೆಂಪು, ಹಳದಿ, ಕಪ್ಪು ಮತ್ತು ಕಿತ್ತಳೆ ಬಣ್ಣದ ದಾರವನ್ನು ಕಟ್ಟಿಕೊಂಡಿರುವುದನ್ನು ಕಂಡಿರುತ್ತೇವೆ. ಈ ಪವಿತ್ರ ದಾರವನ್ನು ಕಲಾವ ಅಥವಾ ಮೌಲಿ ಎಂದು ಕರೆಯುತ್ತಾರೆ.
ಇದರ ಮಹತ್ವ ಅಪಾರವಾದದ್ದು. ಇವುಗಳನ್ನು ಕಟ್ಟಿಕೊಳ್ಳುವುದರಿಂದ ಬ್ರಹ್ಮ, ವಿಷ್ಣು, ಮಹೇಶ್ವರ ಮತ್ತು ಲಕ್ಷ್ಮಿ, ಪಾರ್ವತಿ, ಸರಸ್ವತಿಯರ ಆಶೀರ್ವಾದಗಳು ಆಕರ್ಷಿತವಾಗುತ್ತವೆ ಎನ್ನಲಾಗುತ್ತದೆ. ಇದನ್ನು ಕೈಗೆ ಕಟ್ಟಿಕೊಳ್ಳುವುದರಿಂದ ಉಂಟಾಗುವ ಉಪಯೋಗ ಹಾಗೂ ಮಹತ್ವದ ಬಗೆಗಿನ ಕಿರು ಪರಿಚಯ ಇಲ್ಲಿದೆ ನೋಡಿ....

ಪುರಾಣ ಕಥೆಗಳ ಪ್ರಕಾರ...
ವಿಷ್ಣುವಿನ ಅವತಾರ ಎನಿಸಿಕೊಂಡ ವಾಮನನು ಬಲಿ ರಾಜನ ಕೈಗೆ (ಮಣಿಕಟ್ಟಿನ ಮೇಲೆ) ಈ ದಾರವನ್ನು ಕಟ್ಟಿದ್ದನು ಎನ್ನಲಾಗುತ್ತದೆ.

ಹಳದಿ ಮತ್ತು ಕೆಂಪು ದಾರ ಮಂಗಳಕರ
ಪುರಾತನ ಕಾಲದಿಂದಲೂ ಮಂಗಳಕರ ಎನ್ನುವ ಹಳದಿ ಮತ್ತು ಕೆಂಪು ದಾರವನ್ನು ಕಟ್ಟಿಕೊಳ್ಳುವ ಸಂಪ್ರದಾಯ ಅಸ್ತಿತ್ವಕ್ಕೆ ಬಂದಿತ್ತು ಎನ್ನಲಾಗುತ್ತದೆ.

ಶತ್ರುಗಳ ಕಾಟ ತಪ್ಪಿಸುತ್ತದೆ...
ಕೆಂಪು ದಾರವನ್ನು ಕಾಳವೆ ಎಂದು ಕರೆಯುತ್ತಾರೆ. ಈ ಬಣ್ಣ ದೀರ್ಘ ಜೀವನ, ಜೀವಂತಿಕೆ ಮತ್ತು ಶತ್ರುಗಳ ವಿರುದ್ಧ ಸಂರಕ್ಷಿಸುತ್ತದೆ.

ಈ ದಾರ ಕಟ್ಟುವ ವಿಧಾನ...
ಈ ದಾರವನ್ನು ಪುರುಷರು ಮತ್ತು ಅವಿವಾಹಿತ ಮಹಿಳೆಯರ ಬಲಗೈ ಮಣಿಕಟ್ಟಿನ ಮೇಲೆ ಕಟ್ಟುತ್ತಾರೆ. ವಿವಾಹಿತ ಮಹಿಳೆಯರಾಗಿದ್ದರೆ ಎಡಗೈ ಮಣಿಕಟ್ಟಿನ ಮೇಲೆ ಕಟ್ಟಬೇಕು..

ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರ
ಕಿತ್ತಳೆ, ಹಳದಿ, ಕೆಂಪು ಬಣ್ಣಗಳ ದಾರವನ್ನು ಹಿಂದೂ ಧರ್ಮದಲ್ಲಿ ಮಂಗಳಕರ ಎಂದು ಪರಿಗಣಿಸುತ್ತಾರೆ. ಅಲ್ಲದೆ ಇವು ಗುರು, ಮಂಗಳ ಮತ್ತು ಸೂರ್ಯನಿಗೆ ಹೆಚ್ಚು ಪ್ರಾಶಸ್ತ್ಯವಾದವು ಎನ್ನಲಾಗುತ್ತದೆ.



Click it and Unblock the Notifications